ETV Bharat / state

ತುಮಕೂರು: ಗಣಪತಿ ನಿಮಜ್ಜನದ ವೇಳೆ ಕೆರೆಯಲ್ಲಿ ಮುಳುಗಿ ಅಪ್ಪ-ಮಕ್ಕಳಿಬ್ಬರು ಸಾವು - Ganesha Immersion

author img

By ETV Bharat Karnataka Team

Published : Sep 15, 2024, 5:27 PM IST

ಗಣೇಶನ ನಿಮಜ್ಜನ ಮಾಡುವಾಗ ಒಂದೇ ಕುಟುಂಬದ ಮೂವರು ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

drowned in lake
ಕೆರೆ ಬಳಿ ಸೇರಿರುವ ಜನರು (ETV Bharat)

ತುಮಕೂರು: ಗಣೇಶನ ನಿಮಜ್ಜನಕ್ಕೆ ಹೋಗಿದ್ದ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾರಸಂದ್ರ ಗ್ರಾಮದಲ್ಲಿ ನಡೆದಿದೆ. ಮಾರಸಂದ್ರ ಸಮೀಪದ ರಂಗನಹಟ್ಟಿ ಕೆರೆಯಲ್ಲಿ ಘಟನೆ ನಡೆದಿದ್ದು, ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಅಪ್ಪ - ಮಕ್ಕಳು ಜಲಸಮಾಧಿಯಾಗಿದ್ದಾರೆ. ಮೃತಪಟ್ಟವರನ್ನು ರೇವಣ್ಣ (50), ಪುತ್ರರಾದ ಶರತ್ (20) ಹಾಗೂ ದಯಾನಂದ (28) ಎಂದು ಗುರುತಿಸಲಾಗಿದೆ. ಮೃತ ದಯಾನಂದ್​ಗೆ ಇತ್ತೀಚೆಗಷ್ಟೇ ಮದುವೆ ಆಗಿತ್ತು ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ದಂಡಿನಶಿವರ ಠಾಣೆ ಪೊಲೀಸರು ಭೇಟಿ ನೀಡಿ, ಮೃತದೇಹಗಳಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ. ಈ ಸಂಬಂಧ ದಂಡಿನಶಿವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಚಿಕ್ಕಮಗಳೂರು: ನಿಂತಿದ್ದ ಆಟೋಗೆ ಬಸ್​ ಡಿಕ್ಕಿ, ಇಬ್ಬರು ಯುವಕರು ಸಾವು - Bus Hits Auto

ತುಮಕೂರು: ಗಣೇಶನ ನಿಮಜ್ಜನಕ್ಕೆ ಹೋಗಿದ್ದ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾರಸಂದ್ರ ಗ್ರಾಮದಲ್ಲಿ ನಡೆದಿದೆ. ಮಾರಸಂದ್ರ ಸಮೀಪದ ರಂಗನಹಟ್ಟಿ ಕೆರೆಯಲ್ಲಿ ಘಟನೆ ನಡೆದಿದ್ದು, ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಅಪ್ಪ - ಮಕ್ಕಳು ಜಲಸಮಾಧಿಯಾಗಿದ್ದಾರೆ. ಮೃತಪಟ್ಟವರನ್ನು ರೇವಣ್ಣ (50), ಪುತ್ರರಾದ ಶರತ್ (20) ಹಾಗೂ ದಯಾನಂದ (28) ಎಂದು ಗುರುತಿಸಲಾಗಿದೆ. ಮೃತ ದಯಾನಂದ್​ಗೆ ಇತ್ತೀಚೆಗಷ್ಟೇ ಮದುವೆ ಆಗಿತ್ತು ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ದಂಡಿನಶಿವರ ಠಾಣೆ ಪೊಲೀಸರು ಭೇಟಿ ನೀಡಿ, ಮೃತದೇಹಗಳಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ. ಈ ಸಂಬಂಧ ದಂಡಿನಶಿವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಚಿಕ್ಕಮಗಳೂರು: ನಿಂತಿದ್ದ ಆಟೋಗೆ ಬಸ್​ ಡಿಕ್ಕಿ, ಇಬ್ಬರು ಯುವಕರು ಸಾವು - Bus Hits Auto

ETV Bharat Logo

Copyright © 2024 Ushodaya Enterprises Pvt. Ltd., All Rights Reserved.