ETV Bharat / state

ಚನ್ನಗಿರಿ ವ್ಯಕ್ತಿ ಸಾವು ಪ್ರಕರಣ: ಡಿವೈಎಸ್​​ಪಿ ಸೇರಿ ಮೂವರು ಪೊಲೀಸ್​ ಅಧಿಕಾರಿಗಳು ಅಮಾನತು - Channagiri Adil Death Case

author img

By ETV Bharat Karnataka Team

Published : May 27, 2024, 2:15 PM IST

ಚನ್ನಗಿರಿಯಲ್ಲಿ ಆದಿಲ್​​ ಎಂಬವರ​ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್​​ಪಿ, ವೃತ್ತ ನಿರೀಕ್ಷಕ ಹಾಗು ಎಸ್​ಐ ಅಮಾನತು ಮಾಡಲಾಗಿದೆ ಎಂದು ಪೂರ್ವ ವಲಯ ಐಜಿಪಿ ಡಾ.ತ್ಯಾಗರಾಜನ್ ಮಾಹಿತಿ ನೀಡಿದ್ದಾರೆ.

ಅಮಾನತುಗೊಂಡ ಪೊಲೀಸ್​ ಅಧಿಕಾರಿಗಳು
ಅಮಾನತುಗೊಂಡ ಪೊಲೀಸ್​ ಅಧಿಕಾರಿಗಳು (ETV Bharat)

ದಾವಣಗೆರೆ: ಚನ್ನಗಿರಿಯಲ್ಲಿ ಪೊಲೀಸ್​ ವಶದಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ ಪ್ರಕರಣ ಸಂಬಂಧ ಚನ್ನಗಿರಿ ಡಿವೈಎಸ್​​ಪಿ ಪ್ರಶಾಂತ ಮುನ್ನೊಳ್ಳಿ, ವೃತ್ತನಿರೀಕ್ಷಕ ನಿರಂಜನ ಬಿ ಹಾಗೂ ಎಸ್​ಐ ಅಖ್ತರ್ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಆರೋಪಿತ ಅಧಿಕಾರಿಗಳನ್ನು ಸೇವೆಯಿಂದ ಬಿಡುಗಡೆಗೊಳಿಸಲಾಗಿದೆ.

ಪ್ರಕರಣವೇನು?: ಮೇ 24ರಂದು ಚನ್ನಗಿರಿಯಲ್ಲಿ ಪೊಲೀಸ್ ವಶದಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ್ದನು. ಮಟ್ಕಾ ಆಡಿಸುತ್ತಿದ್ದ ಆರೋಪದ ಮೇಲೆ ಆದಿಲ್​ ಎಂಬಾತನನ್ನು ಠಾಣೆಗೆ ಕರೆತರಲಾಗಿತ್ತು. ಅದೊಂದು ಲಾಕ್​ ಅಪ್ ಡೆತ್ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಮೃತಪಟ್ಟ ಆರೋಪಿ ಆದೀಲ್ ವಿರುದ್ಧ ಎಫ್ಐಆರ್ ಮಾಡದೇ, ಚನ್ನಗಿರಿ ಠಾಣೆಗೆ ಕರೆತರಲಾಗಿತ್ತು. ಒಬ್ಬ ಆರೋಪಿಯನ್ನು ಠಾಣೆಗೆ ಕರೆತರುವ ಮುನ್ನ ಪ್ರಕರಣ ದಾಖಲಾಗಿರಬೇಕು. ಆದರೆ ಅದನ್ನು ಮಾಡದೇ ಚನ್ನಗಿರಿ ಪೊಲೀಸರು ತಪ್ಪು ಮಾಡಿದ್ದಾರೆ ಎಂದು ಪ್ರಕರಣದ ಬಗ್ಗೆ ಮೈಸೂರಿನಲ್ಲಿ ಖುದ್ದು ಸಿಎಂ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಚನ್ನಗಿರಿ ಆದಿಲ್ ಸಾವು ಪ್ರಕರಣ : ಸಿಐಡಿಗೆ ವರ್ಗಾವಣೆ ಆಗಲಿದೆ - ಎಸ್ಪಿ ಉಮಾ ಪ್ರಶಾಂತ್ - Channagiri Adil death case

ದಾವಣಗೆರೆ: ಚನ್ನಗಿರಿಯಲ್ಲಿ ಪೊಲೀಸ್​ ವಶದಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ ಪ್ರಕರಣ ಸಂಬಂಧ ಚನ್ನಗಿರಿ ಡಿವೈಎಸ್​​ಪಿ ಪ್ರಶಾಂತ ಮುನ್ನೊಳ್ಳಿ, ವೃತ್ತನಿರೀಕ್ಷಕ ನಿರಂಜನ ಬಿ ಹಾಗೂ ಎಸ್​ಐ ಅಖ್ತರ್ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಆರೋಪಿತ ಅಧಿಕಾರಿಗಳನ್ನು ಸೇವೆಯಿಂದ ಬಿಡುಗಡೆಗೊಳಿಸಲಾಗಿದೆ.

ಪ್ರಕರಣವೇನು?: ಮೇ 24ರಂದು ಚನ್ನಗಿರಿಯಲ್ಲಿ ಪೊಲೀಸ್ ವಶದಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ್ದನು. ಮಟ್ಕಾ ಆಡಿಸುತ್ತಿದ್ದ ಆರೋಪದ ಮೇಲೆ ಆದಿಲ್​ ಎಂಬಾತನನ್ನು ಠಾಣೆಗೆ ಕರೆತರಲಾಗಿತ್ತು. ಅದೊಂದು ಲಾಕ್​ ಅಪ್ ಡೆತ್ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಮೃತಪಟ್ಟ ಆರೋಪಿ ಆದೀಲ್ ವಿರುದ್ಧ ಎಫ್ಐಆರ್ ಮಾಡದೇ, ಚನ್ನಗಿರಿ ಠಾಣೆಗೆ ಕರೆತರಲಾಗಿತ್ತು. ಒಬ್ಬ ಆರೋಪಿಯನ್ನು ಠಾಣೆಗೆ ಕರೆತರುವ ಮುನ್ನ ಪ್ರಕರಣ ದಾಖಲಾಗಿರಬೇಕು. ಆದರೆ ಅದನ್ನು ಮಾಡದೇ ಚನ್ನಗಿರಿ ಪೊಲೀಸರು ತಪ್ಪು ಮಾಡಿದ್ದಾರೆ ಎಂದು ಪ್ರಕರಣದ ಬಗ್ಗೆ ಮೈಸೂರಿನಲ್ಲಿ ಖುದ್ದು ಸಿಎಂ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಚನ್ನಗಿರಿ ಆದಿಲ್ ಸಾವು ಪ್ರಕರಣ : ಸಿಐಡಿಗೆ ವರ್ಗಾವಣೆ ಆಗಲಿದೆ - ಎಸ್ಪಿ ಉಮಾ ಪ್ರಶಾಂತ್ - Channagiri Adil death case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.