ETV Bharat / state

ಶಿವಮೊಗ್ಗ: ಅಂಬ್ಲಿಗೊಳ ಡ್ಯಾಂ ಹಿನ್ನೀರಿನಲ್ಲಿ ಹುಲಿ ಕಳೇಬರ ಪತ್ತೆ: ತನಿಖೆಗೆ ಅರಣ್ಯ ಸಚಿವರ ಆದೇಶ - TIGER CARCASS FOUND

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕು ಅಂಬ್ಲಿಗೊಳ ಜಲಾಶಯದ ಹಿನ್ನೀರಿನಲ್ಲಿ ಹುಲಿಯ ಕಳೇಬರವೊಂದು ಪತ್ತೆಯಾಗಿದೆ.

tiger-carcass-found-in-ambligola-dam-backwaters-of-shivamogga
ಹುಲಿ ಕಳೇಬರ (ETV Bharat)
author img

By ETV Bharat Karnataka Team

Published : Feb 19, 2025, 10:25 AM IST

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ಹಾಗೂ ಸಾಗರ ತಾಲೂಕುಗಳ ಗಡಿ ಭಾಗ ಭೈರಾಪುರ ಗ್ರಾಮದ ಭಾಗದ ಬಳಿ ಅಂಬ್ಲಿಗೊಳ ಜಲಾಶಯದ ಹಿನ್ನೀರಿನಲ್ಲಿ ಹುಲಿಯ ಕಳೇಬರ ಪತ್ತೆಯಾಗಿದೆ.

ಡ್ಯಾಂ ಹೂಸೂರು ಗ್ರಾಮದಲ್ಲಿಯೇ ಹುಲಿಯ ಅಂತ್ಯಕ್ರಿಯೆ: ಹಿನ್ನೀರಿನಲ್ಲಿ ಹುಲಿಯ ಮೃತದೇಹ ಕಂಡುಬರುತ್ತಿದ್ದಂತೆ ಗ್ರಾಮಸ್ಥರು ಅಂಬ್ಲಿಗೊಳ ವಲಯ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.‌ ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಹುಲಿಯ ಕಳೇಬರವನ್ನು ಮೇಲಕ್ಕೆ ತಂದು, ಸಾಗರದ ವನ್ಯಜೀವಿ ವಿಭಾಗದ ಡಿಎಫ್​ಓ ಮೋಹನ್ ಅವರಿಗೆ ವಿಷಯ ತಿಳಿಸಿದ್ದಾರೆ. ಬಳಿಕ, ಸ್ಥಳಕ್ಕೆ ಬಂದ ಅಧಿಕಾರಿಗಳು ಹುಲಿಯ ಕಳೆಬರಹದ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ, ಹಿನ್ನೀರಿನ ಡ್ಯಾಂ ಹೂಸೂರು ಗ್ರಾಮದಲ್ಲಿಯೇ ಅಂತ್ಯಕ್ರಿಯೆ ನಡೆಸಿದ್ದಾರೆ.

ಹುಲಿ ಇಲ್ಲಿಗೆ ಬಂದಿದ್ದು ಹೇಗೆ?: ಹುಲಿಯು ಸುಮಾರು 9 ವರ್ಷ ಪ್ರಾಯದ್ದಾಗಿದೆ. ಸಾಗರ ಹಾಗೂ ಶಿಕಾರಿಪುರ ಭಾಗದಲ್ಲಿ ಹುಲಿಯ ಓಡಾಟದ ಬಗ್ಗೆ ಕುರುಹುಗಳಿಲ್ಲ. ಈ ಭಾಗದಲ್ಲಿ ಹುಲಿಗಳು ಇಲ್ಲ. ಅಲ್ಲದೇ, ಅಂಬ್ಲಿಗೊಳ ಜಲಾಶಯ ಹಾಗೂ ಸಾಗರ, ಆಯನೂರು ಭಾಗದಲ್ಲಿ ಹುಲಿಗಳ ಚಲನವಲನ ಇರಲಿಲ್ಲ. ಆದರೆ ಹುಲಿ ಇಲ್ಲಿಗೆ ಹೇಗೆ ಬಂತು ಎಂಬ ಅನುಮಾನ ಎಲ್ಲರಲ್ಲಿ ಮೂಡಿದೆ. ಹುಲಿಯು ಭದ್ರಾ ಅಭಯಾರಣ್ಯ ಅಥವಾ ಶೆಟ್ಟಿಹಳ್ಳಿ ಅಭಯಾರಣ್ಯದಿಂದ ಬಂದಿರಬಹುದೆಂದು ಇಲಾಖೆ ಅಂದಾಜಿಸಿದೆ.

ಬೇಟೆಗಾರರ ಗುಂಡೇಟಿಗೆ ಬಲಿಯಾಗಿರುವ ಶಂಕೆ: ಹುಲಿಯು ಈ ಭಾಗಕ್ಕೆ ಹೇಗೆ ಬಂತು ಎಂಬುದರ ಬಗ್ಗೆ ಅನುಮಾನ ಮೂಡಿರುವ ಹಿನ್ನೆಲೆಯಲ್ಲಿ ಅದು ಗುಂಡೇಟಿನಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಹುಲಿಯ ಹೊಟ್ಟೆಗೆ ಎರಡು ಕಡೆ ಗುಂಡೇಟು ತಗುಲಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಹುಲಿಯ ಮರಣೋತ್ತರ ಪರೀಕ್ಷೆ ನಡೆದಿದ್ದು, ವರದಿ ಬಂದ ನಂತರ ಸಾವಿಗೆ ಕಾರಣ ಏನೆಂದು ತಿಳಿದುಬರಲಿದೆ.

ಡಿಎಫ್​ಇ ಪ್ರತಿಕ್ರಿಯೆ ಹೀಗಿದೆ: ಈ ಕುರಿತು 'ಈಟಿವಿ ಭಾರತ'ಕ್ಕೆ ದೂರವಾಣಿಯಲ್ಲಿ ಮಾಹಿತಿ ನೀಡಿದ ಸಾಗರ ವಲಯ ವನ್ಯಜೀವಿ ವಿಭಾಗದ ಡಿಎಫ್​ಓ ಮೋಹನ್, ''ಹುಲಿಯ ಕಳೇಬರ ಪತ್ತೆ ಆಗುತ್ತಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ. ಆದರೆ ಈ ಭಾಗಕ್ಕೆ ಹುಲಿ ಹೇಗೆ ಬಂತು ಎಂಬ ಮಾಹಿತಿ ಲಭ್ಯವಾಗಿಲ್ಲ. ಇದು ಸುಮಾರು 9 ವರ್ಷದ ಹುಲಿ ಇರಬಹುದು'' ಎಂದು ತಿಳಿಸಿದರು.

tiger-carcass-found-in-ambligola-dam-backwaters-of-shivamogga
ತನಿಖೆಗೆ ಅರಣ್ಯ ಸಚಿವರ ಆದೇಶ (ETV Bharat)

ಇದನ್ನೂ ಓದಿ: ಬಾಲಕನ ಮೂಗಿನಿಂದ ಹಾವಿನಂತಹ ಹುಳ ಹೊರತೆಗೆದ ವೈದ್ಯರು!

ತನಿಖೆಗೆ ಈಶ್ವರ್ ಖಂಡ್ರೆ ಸೂಚನೆ: ಈ ಬಗ್ಗೆ ಕೂಲಂಕಷ ತನಿಖೆ ನಡೆಸಿ, ವರದಿ ಸಲ್ಲಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್​ ಖಂಡ್ರೆ ಸೂಚನೆ ನೀಡಿದ್ದಾರೆ. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸೂಚನೆ ನೀಡಿರುವ ಸಚಿವರು, ಹುಲಿಗೆ ಗುಂಡು (ಪೆಲೆಟ್ಸ್) ಹೊಡೆದ ಗಾಯವೂ ಇರುವ ಕುರಿತು ವರದಿಗಳು ಪ್ರಕಟವಾಗಿದೆ. ಈ ಬಗ್ಗೆ ತನಿಖೆ ನಡೆಸಿ 10 ದಿನಗಳ ಒಳಗಾಗಿ ವಾಸ್ತವ ವರದಿ ಸಲ್ಲಿಸಲು ತಿಳಿಸಿದ್ದಾರೆ.

ಹುಲಿಯ ಮೃತದೇಹ ಪತ್ತೆಯಾಗಿರುವ ಪ್ರದೇಶದಲ್ಲಿ ಯಾವತ್ತೂ ಹುಲಿಯ ದರ್ಶನವೇ ಆಗಿಲ್ಲ. ಹೀಗಾಗಿ, ಬೇರೆ ಕಡೆ ಹುಲಿ ಕೊಂದು ಇಲ್ಲಿ ಹಾಕಿರಬಹುದು ಎಂಬ ಅನುಮಾನವನ್ನು ಸ್ಥಳೀಯರು ವ್ಯಕ್ತಪಡಿಸಿರುವುದಾಗಿಯೂ ವರದಿಯಲ್ಲಿ ಉಲ್ಲೇಖಿಸಲಾಗಿದ್ದು, ಈ ಬಗ್ಗೆಯೂ ತನಿಖೆ ನಡೆಸಲು ಸಚಿವರು ಸೂಚಿಸಿದ್ದಾರೆ.

ಇದನ್ನೂ ಓದಿ: ಮೈಸೂರು : ಗಂಭೀರವಾಗಿ ಗಾಯಗೊಂಡಿದ್ದ ಹಾವಿಗೆ ಯಶಸ್ವಿ‌ ಶಸ್ತ್ರಚಿಕಿತ್ಸೆ

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ಹಾಗೂ ಸಾಗರ ತಾಲೂಕುಗಳ ಗಡಿ ಭಾಗ ಭೈರಾಪುರ ಗ್ರಾಮದ ಭಾಗದ ಬಳಿ ಅಂಬ್ಲಿಗೊಳ ಜಲಾಶಯದ ಹಿನ್ನೀರಿನಲ್ಲಿ ಹುಲಿಯ ಕಳೇಬರ ಪತ್ತೆಯಾಗಿದೆ.

ಡ್ಯಾಂ ಹೂಸೂರು ಗ್ರಾಮದಲ್ಲಿಯೇ ಹುಲಿಯ ಅಂತ್ಯಕ್ರಿಯೆ: ಹಿನ್ನೀರಿನಲ್ಲಿ ಹುಲಿಯ ಮೃತದೇಹ ಕಂಡುಬರುತ್ತಿದ್ದಂತೆ ಗ್ರಾಮಸ್ಥರು ಅಂಬ್ಲಿಗೊಳ ವಲಯ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.‌ ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಹುಲಿಯ ಕಳೇಬರವನ್ನು ಮೇಲಕ್ಕೆ ತಂದು, ಸಾಗರದ ವನ್ಯಜೀವಿ ವಿಭಾಗದ ಡಿಎಫ್​ಓ ಮೋಹನ್ ಅವರಿಗೆ ವಿಷಯ ತಿಳಿಸಿದ್ದಾರೆ. ಬಳಿಕ, ಸ್ಥಳಕ್ಕೆ ಬಂದ ಅಧಿಕಾರಿಗಳು ಹುಲಿಯ ಕಳೆಬರಹದ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ, ಹಿನ್ನೀರಿನ ಡ್ಯಾಂ ಹೂಸೂರು ಗ್ರಾಮದಲ್ಲಿಯೇ ಅಂತ್ಯಕ್ರಿಯೆ ನಡೆಸಿದ್ದಾರೆ.

ಹುಲಿ ಇಲ್ಲಿಗೆ ಬಂದಿದ್ದು ಹೇಗೆ?: ಹುಲಿಯು ಸುಮಾರು 9 ವರ್ಷ ಪ್ರಾಯದ್ದಾಗಿದೆ. ಸಾಗರ ಹಾಗೂ ಶಿಕಾರಿಪುರ ಭಾಗದಲ್ಲಿ ಹುಲಿಯ ಓಡಾಟದ ಬಗ್ಗೆ ಕುರುಹುಗಳಿಲ್ಲ. ಈ ಭಾಗದಲ್ಲಿ ಹುಲಿಗಳು ಇಲ್ಲ. ಅಲ್ಲದೇ, ಅಂಬ್ಲಿಗೊಳ ಜಲಾಶಯ ಹಾಗೂ ಸಾಗರ, ಆಯನೂರು ಭಾಗದಲ್ಲಿ ಹುಲಿಗಳ ಚಲನವಲನ ಇರಲಿಲ್ಲ. ಆದರೆ ಹುಲಿ ಇಲ್ಲಿಗೆ ಹೇಗೆ ಬಂತು ಎಂಬ ಅನುಮಾನ ಎಲ್ಲರಲ್ಲಿ ಮೂಡಿದೆ. ಹುಲಿಯು ಭದ್ರಾ ಅಭಯಾರಣ್ಯ ಅಥವಾ ಶೆಟ್ಟಿಹಳ್ಳಿ ಅಭಯಾರಣ್ಯದಿಂದ ಬಂದಿರಬಹುದೆಂದು ಇಲಾಖೆ ಅಂದಾಜಿಸಿದೆ.

ಬೇಟೆಗಾರರ ಗುಂಡೇಟಿಗೆ ಬಲಿಯಾಗಿರುವ ಶಂಕೆ: ಹುಲಿಯು ಈ ಭಾಗಕ್ಕೆ ಹೇಗೆ ಬಂತು ಎಂಬುದರ ಬಗ್ಗೆ ಅನುಮಾನ ಮೂಡಿರುವ ಹಿನ್ನೆಲೆಯಲ್ಲಿ ಅದು ಗುಂಡೇಟಿನಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಹುಲಿಯ ಹೊಟ್ಟೆಗೆ ಎರಡು ಕಡೆ ಗುಂಡೇಟು ತಗುಲಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಹುಲಿಯ ಮರಣೋತ್ತರ ಪರೀಕ್ಷೆ ನಡೆದಿದ್ದು, ವರದಿ ಬಂದ ನಂತರ ಸಾವಿಗೆ ಕಾರಣ ಏನೆಂದು ತಿಳಿದುಬರಲಿದೆ.

ಡಿಎಫ್​ಇ ಪ್ರತಿಕ್ರಿಯೆ ಹೀಗಿದೆ: ಈ ಕುರಿತು 'ಈಟಿವಿ ಭಾರತ'ಕ್ಕೆ ದೂರವಾಣಿಯಲ್ಲಿ ಮಾಹಿತಿ ನೀಡಿದ ಸಾಗರ ವಲಯ ವನ್ಯಜೀವಿ ವಿಭಾಗದ ಡಿಎಫ್​ಓ ಮೋಹನ್, ''ಹುಲಿಯ ಕಳೇಬರ ಪತ್ತೆ ಆಗುತ್ತಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ. ಆದರೆ ಈ ಭಾಗಕ್ಕೆ ಹುಲಿ ಹೇಗೆ ಬಂತು ಎಂಬ ಮಾಹಿತಿ ಲಭ್ಯವಾಗಿಲ್ಲ. ಇದು ಸುಮಾರು 9 ವರ್ಷದ ಹುಲಿ ಇರಬಹುದು'' ಎಂದು ತಿಳಿಸಿದರು.

tiger-carcass-found-in-ambligola-dam-backwaters-of-shivamogga
ತನಿಖೆಗೆ ಅರಣ್ಯ ಸಚಿವರ ಆದೇಶ (ETV Bharat)

ಇದನ್ನೂ ಓದಿ: ಬಾಲಕನ ಮೂಗಿನಿಂದ ಹಾವಿನಂತಹ ಹುಳ ಹೊರತೆಗೆದ ವೈದ್ಯರು!

ತನಿಖೆಗೆ ಈಶ್ವರ್ ಖಂಡ್ರೆ ಸೂಚನೆ: ಈ ಬಗ್ಗೆ ಕೂಲಂಕಷ ತನಿಖೆ ನಡೆಸಿ, ವರದಿ ಸಲ್ಲಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್​ ಖಂಡ್ರೆ ಸೂಚನೆ ನೀಡಿದ್ದಾರೆ. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸೂಚನೆ ನೀಡಿರುವ ಸಚಿವರು, ಹುಲಿಗೆ ಗುಂಡು (ಪೆಲೆಟ್ಸ್) ಹೊಡೆದ ಗಾಯವೂ ಇರುವ ಕುರಿತು ವರದಿಗಳು ಪ್ರಕಟವಾಗಿದೆ. ಈ ಬಗ್ಗೆ ತನಿಖೆ ನಡೆಸಿ 10 ದಿನಗಳ ಒಳಗಾಗಿ ವಾಸ್ತವ ವರದಿ ಸಲ್ಲಿಸಲು ತಿಳಿಸಿದ್ದಾರೆ.

ಹುಲಿಯ ಮೃತದೇಹ ಪತ್ತೆಯಾಗಿರುವ ಪ್ರದೇಶದಲ್ಲಿ ಯಾವತ್ತೂ ಹುಲಿಯ ದರ್ಶನವೇ ಆಗಿಲ್ಲ. ಹೀಗಾಗಿ, ಬೇರೆ ಕಡೆ ಹುಲಿ ಕೊಂದು ಇಲ್ಲಿ ಹಾಕಿರಬಹುದು ಎಂಬ ಅನುಮಾನವನ್ನು ಸ್ಥಳೀಯರು ವ್ಯಕ್ತಪಡಿಸಿರುವುದಾಗಿಯೂ ವರದಿಯಲ್ಲಿ ಉಲ್ಲೇಖಿಸಲಾಗಿದ್ದು, ಈ ಬಗ್ಗೆಯೂ ತನಿಖೆ ನಡೆಸಲು ಸಚಿವರು ಸೂಚಿಸಿದ್ದಾರೆ.

ಇದನ್ನೂ ಓದಿ: ಮೈಸೂರು : ಗಂಭೀರವಾಗಿ ಗಾಯಗೊಂಡಿದ್ದ ಹಾವಿಗೆ ಯಶಸ್ವಿ‌ ಶಸ್ತ್ರಚಿಕಿತ್ಸೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.