ETV Bharat / state

ಬೆಂಗಳೂರಲ್ಲಿ ₹2,500 ಕೋಟಿ ಮೌಲ್ಯದ 103 ಎಕರೆ ಅರಣ್ಯ ಒತ್ತುವರಿ ತೆರವು

ಸಿಲಿಕಾನ್​ ಸಿಟಿಯಲ್ಲಿ ಇದುವರೆಗೆ ಒತ್ತುವರಿಯಾಗಿದ್ದ 103 ಎಕರೆ ಅರಣ್ಯ ಪ್ರದೇಶವನ್ನು ತೆರವು ಮಾಡಲಾಗಿದೆ.

author img

By ETV Bharat Karnataka Team

Published : 7 hours ago

ENCROACHMENT CLEARANCE
ಅರಣ್ಯ ಒತ್ತುವರಿ ತೆರವು ಕಾರ್ಯ (ETV Bharat)

ಬೆಂಗಳೂರು: ನಗರದಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರೆದಿದ್ದು, ಮತ್ತೆರಡು ಎಕರೆ ಅರಣ್ಯ ಭೂಮಿ ಮರು ವಶಕ್ಕೆ ಪಡೆಯಲಾಗಿದೆ. ಆ ಮೂಲಕ ಅರಣ್ಯ ಅಧಿಕಾರಿಗಳು ಬೆಂಗಳೂರಲ್ಲಿ ಈವರೆಗೆ 103 ಎಕರೆಗೂ ಹೆಚ್ಚು ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಿದ್ದಾರೆ.

ಯಲಹಂಕ ಬಳಿಯ ಮಾರಸಂದ್ರದ ಗಸ್ತು ಸರ್ವೆ ನಂ.182ರಲ್ಲಿ ಒತ್ತುವರಿ ಮಾಡಲಾಗಿದ್ದ 2 ಎಕರೆ 10 ಗುಂಟೆ ಅರಣ್ಯ ಜಮೀನನ್ನು ತೆರವು ಮಾಡಿ, ಅಲ್ಲಿ ಸ್ಥಳೀಯ ಜಾತಿಯ ಸಸಿಗಳನ್ನು ನೆಟ್ಟು ಅರಣ್ಯ ಬೆಳೆಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಭೈರಾರೆಡ್ಡಿ ಎಂಬವರು ಅರಣ್ಯ ಇಲಾಖೆಗೆ ಸೇರಿದ 2.10 ಎಕರೆ ಜಮೀನು ಒತ್ತುವರಿ ಮಾಡಿದ್ದರು. ಈ ಸಂಬಂಧ ಎಫ್​ಐಆರ್ ದಾಖಲಿಸಿಕೊಂಡಿದ್ದ ಬೆಂಗಳೂರು ನಗರ ಅರಣ್ಯಾಧಿಕಾರಿಗಳು ಜೆಸಿಬಿಗಳೊಂದಿಗೆ ಕಾರ್ಯಾಚರಣೆ ನಡೆಸಿ ಭೂಮಿಯನ್ನು ವಶಕ್ಕೆ ಪಡೆದಿದ್ದಾರೆ. ಇದರ ಮಾರುಕಟ್ಟೆ ಮೌಲ್ಯ ಸುಮಾರು 40 ಕೋಟಿ ರೂ.ಗಳಿಗೂ ಅಧಿಕ ಎಂದು ಹೇಳಲಾಗಿದೆ.

ENCROACHMENT CLEARANCE
ಒತ್ತುವರಿ ತೆರವು ಮಾಡಿ ಗಿಡಗಳನ್ನು ನೆಡುತ್ತಿರುವುದು (ETV Bharat)

ವರ್ಷದಲ್ಲಿ 103 ಎಕರೆ ಒತ್ತುವರಿ ತೆರವು: ಬೆಂಗಳೂರಿನಲ್ಲಿ ಭೂಮಿಗೆ ಬಂಗಾರದ ಬೆಲೆ ಇದ್ದು, ಒತ್ತುವರಿ ಮಾಡಿರುವ ಅರಣ್ಯ ಭೂಮಿಯ ತೆರವಿಗೆ ಕ್ರಮ ವಹಿಸುವಂತೆ ಅರಣ್ಯ ಸಚಿವರು ಸ್ಪಷ್ಟ ಸೂಚನೆ ನೀಡಿದ್ದಾರೆ. ಅಧಿಕಾರಿಗಳು ಈವರೆಗೆ 103 ಎಕರೆಗೂ ಹೆಚ್ಚು ಒತ್ತುವರಿ ತೆರವುಗೊಳಿಸಿದ್ದಾರೆ.

ಕಗ್ಗಲಿಪುರ ವಲಯದ ಬಿ.ಎಂ.ಕಾವಲಿನಲ್ಲಿ 27.2 ಎಕರೆ, ತುರಹಳ್ಳಿ ಅರಣ್ಯ ವ್ಯಾಪ್ತಿಯ ಮೈಲಸಂದ್ರ, ಬಿ.ಎಂ.ಕಾವಲ್ ಮತ್ತು ಕೆಂಚೇನಹಳ್ಳಿಯಲ್ಲಿ 16.9 ಎಕರೆ, ಸೂಲಿಕೆರೆ ಮೀಸಲು ಅರಣ್ಯ ಪ್ರದೇಶದ ಸೂಲಿಕೆರೆಯಲ್ಲಿ 2.5 ಎಕರೆ, ಯು.ಎಂ.ಕಾವಲಿನಲ್ಲಿ 1 ಎಕರೆ, ಆನೇಕಲ್ ವಲಯದ ಭೂತನಹಳ್ಳಿ, ರಾಗಿಹಳ್ಳಿಯಲ್ಲಿ 14.4 ಎಕರೆ, ಬೆಂಗಳೂರು, ಜಾರಕಬಂಡೆ ಕಾವಲು, ಪೀಣ್ಯದಲ್ಲಿ 18 ಎಕರೆ, ಯಲಹಂಕ ವಲಯದ ಕೊತ್ತನೂರಿನಲ್ಲಿ 17.3 ಎಕರೆ, ಮಾರಸಂದ್ರದಲ್ಲಿ 2.10 ಎಕರೆ, ಇತರೆ 3 ಎಕರೆ 6 ಗುಂಟೆ ಒತ್ತುವರಿ ತೆರವು ಮಾಡಲಾಗಿದೆ. ತೆರವು ಮಾಡಲಾಗಿರುವ ಭೂಮಿಯ ಒಟ್ಟು ಮೌಲ್ಯ 2,500 ಸಾವಿರ ಕೋಟಿ ರೂ.ಗೂ ಅಧಿಕವಾಗಿದೆ.

ಇದಲ್ಲದೆ, ಕೊತ್ತನೂರಿನಲ್ಲಿ ಇನ್ನೂ ಸುಮಾರು 700 ಕೋಟಿ ರೂ. ಬೆಲೆಬಾಳುವ 22 ಎಕರೆ 08 ಗುಂಟೆ ಅರಣ್ಯ ಭೂಮಿ ಒತ್ತುವರಿಯಾಗಿದೆ. ಇದನ್ನು ತೆರವು ಮಾಡಲು ಕಾನೂನು ಕ್ರಮಕ್ಕ ಮುಂದಾಗುವಂತೆ ಕೂಡ ಈಶ್ವರ ಖಂಡ್ರೆ ಈಗಾಗಲೇ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಚರ್ಚ್ ಸ್ಟ್ರೀಟ್ ರಸ್ತೆಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು - Pavement Encroachment Clearance

ಬೆಂಗಳೂರು: ನಗರದಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರೆದಿದ್ದು, ಮತ್ತೆರಡು ಎಕರೆ ಅರಣ್ಯ ಭೂಮಿ ಮರು ವಶಕ್ಕೆ ಪಡೆಯಲಾಗಿದೆ. ಆ ಮೂಲಕ ಅರಣ್ಯ ಅಧಿಕಾರಿಗಳು ಬೆಂಗಳೂರಲ್ಲಿ ಈವರೆಗೆ 103 ಎಕರೆಗೂ ಹೆಚ್ಚು ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಿದ್ದಾರೆ.

ಯಲಹಂಕ ಬಳಿಯ ಮಾರಸಂದ್ರದ ಗಸ್ತು ಸರ್ವೆ ನಂ.182ರಲ್ಲಿ ಒತ್ತುವರಿ ಮಾಡಲಾಗಿದ್ದ 2 ಎಕರೆ 10 ಗುಂಟೆ ಅರಣ್ಯ ಜಮೀನನ್ನು ತೆರವು ಮಾಡಿ, ಅಲ್ಲಿ ಸ್ಥಳೀಯ ಜಾತಿಯ ಸಸಿಗಳನ್ನು ನೆಟ್ಟು ಅರಣ್ಯ ಬೆಳೆಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಭೈರಾರೆಡ್ಡಿ ಎಂಬವರು ಅರಣ್ಯ ಇಲಾಖೆಗೆ ಸೇರಿದ 2.10 ಎಕರೆ ಜಮೀನು ಒತ್ತುವರಿ ಮಾಡಿದ್ದರು. ಈ ಸಂಬಂಧ ಎಫ್​ಐಆರ್ ದಾಖಲಿಸಿಕೊಂಡಿದ್ದ ಬೆಂಗಳೂರು ನಗರ ಅರಣ್ಯಾಧಿಕಾರಿಗಳು ಜೆಸಿಬಿಗಳೊಂದಿಗೆ ಕಾರ್ಯಾಚರಣೆ ನಡೆಸಿ ಭೂಮಿಯನ್ನು ವಶಕ್ಕೆ ಪಡೆದಿದ್ದಾರೆ. ಇದರ ಮಾರುಕಟ್ಟೆ ಮೌಲ್ಯ ಸುಮಾರು 40 ಕೋಟಿ ರೂ.ಗಳಿಗೂ ಅಧಿಕ ಎಂದು ಹೇಳಲಾಗಿದೆ.

ENCROACHMENT CLEARANCE
ಒತ್ತುವರಿ ತೆರವು ಮಾಡಿ ಗಿಡಗಳನ್ನು ನೆಡುತ್ತಿರುವುದು (ETV Bharat)

ವರ್ಷದಲ್ಲಿ 103 ಎಕರೆ ಒತ್ತುವರಿ ತೆರವು: ಬೆಂಗಳೂರಿನಲ್ಲಿ ಭೂಮಿಗೆ ಬಂಗಾರದ ಬೆಲೆ ಇದ್ದು, ಒತ್ತುವರಿ ಮಾಡಿರುವ ಅರಣ್ಯ ಭೂಮಿಯ ತೆರವಿಗೆ ಕ್ರಮ ವಹಿಸುವಂತೆ ಅರಣ್ಯ ಸಚಿವರು ಸ್ಪಷ್ಟ ಸೂಚನೆ ನೀಡಿದ್ದಾರೆ. ಅಧಿಕಾರಿಗಳು ಈವರೆಗೆ 103 ಎಕರೆಗೂ ಹೆಚ್ಚು ಒತ್ತುವರಿ ತೆರವುಗೊಳಿಸಿದ್ದಾರೆ.

ಕಗ್ಗಲಿಪುರ ವಲಯದ ಬಿ.ಎಂ.ಕಾವಲಿನಲ್ಲಿ 27.2 ಎಕರೆ, ತುರಹಳ್ಳಿ ಅರಣ್ಯ ವ್ಯಾಪ್ತಿಯ ಮೈಲಸಂದ್ರ, ಬಿ.ಎಂ.ಕಾವಲ್ ಮತ್ತು ಕೆಂಚೇನಹಳ್ಳಿಯಲ್ಲಿ 16.9 ಎಕರೆ, ಸೂಲಿಕೆರೆ ಮೀಸಲು ಅರಣ್ಯ ಪ್ರದೇಶದ ಸೂಲಿಕೆರೆಯಲ್ಲಿ 2.5 ಎಕರೆ, ಯು.ಎಂ.ಕಾವಲಿನಲ್ಲಿ 1 ಎಕರೆ, ಆನೇಕಲ್ ವಲಯದ ಭೂತನಹಳ್ಳಿ, ರಾಗಿಹಳ್ಳಿಯಲ್ಲಿ 14.4 ಎಕರೆ, ಬೆಂಗಳೂರು, ಜಾರಕಬಂಡೆ ಕಾವಲು, ಪೀಣ್ಯದಲ್ಲಿ 18 ಎಕರೆ, ಯಲಹಂಕ ವಲಯದ ಕೊತ್ತನೂರಿನಲ್ಲಿ 17.3 ಎಕರೆ, ಮಾರಸಂದ್ರದಲ್ಲಿ 2.10 ಎಕರೆ, ಇತರೆ 3 ಎಕರೆ 6 ಗುಂಟೆ ಒತ್ತುವರಿ ತೆರವು ಮಾಡಲಾಗಿದೆ. ತೆರವು ಮಾಡಲಾಗಿರುವ ಭೂಮಿಯ ಒಟ್ಟು ಮೌಲ್ಯ 2,500 ಸಾವಿರ ಕೋಟಿ ರೂ.ಗೂ ಅಧಿಕವಾಗಿದೆ.

ಇದಲ್ಲದೆ, ಕೊತ್ತನೂರಿನಲ್ಲಿ ಇನ್ನೂ ಸುಮಾರು 700 ಕೋಟಿ ರೂ. ಬೆಲೆಬಾಳುವ 22 ಎಕರೆ 08 ಗುಂಟೆ ಅರಣ್ಯ ಭೂಮಿ ಒತ್ತುವರಿಯಾಗಿದೆ. ಇದನ್ನು ತೆರವು ಮಾಡಲು ಕಾನೂನು ಕ್ರಮಕ್ಕ ಮುಂದಾಗುವಂತೆ ಕೂಡ ಈಶ್ವರ ಖಂಡ್ರೆ ಈಗಾಗಲೇ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಚರ್ಚ್ ಸ್ಟ್ರೀಟ್ ರಸ್ತೆಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು - Pavement Encroachment Clearance

ETV Bharat Logo

Copyright © 2024 Ushodaya Enterprises Pvt. Ltd., All Rights Reserved.