ETV Bharat / state

ರಾಜ್ಯದಲ್ಲಿ ಟೊಯೋಟಾ ಕಂಪನಿಯ ಹೂಡಿಕೆ ಅಬಾಧಿತ: ಸಚಿವ ಎಂ‌.ಬಿ.ಪಾಟೀಲ್ - Toyota Investment in Karnataka

author img

By ETV Bharat Karnataka Team

Published : Jul 31, 2024, 6:56 PM IST

ರಾಜ್ಯದಲ್ಲಿ ಟೊಯೋಟಾ ಕಂಪನಿಯ ಹೂಡಿಕೆಯು ಎಂದಿನಂತೆ ಮುಂದುವರೆಯಲಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

toyota investment
ಎಂ‌.ಬಿ.ಪಾಟೀಲ್ (ETV Bharat)

ಬೆಂಗಳೂರು: ರಾಜ್ಯದಲ್ಲಿ ಅಪಾರ ಪ್ರಮಾಣದಲ್ಲಿ ಬಂಡವಾಳ ಹೂಡಿ, 30 ವರ್ಷಗಳಿಂದಲೂ ಇಲ್ಲಿ ನೆಲೆಯೂರಿರುವ ಟೊಯೋಟಾ ಕಂಪನಿಯ ಹೂಡಿಕೆ ಎಂದಿನಂತೆ ಮುಂದುವರೆಯಲಿದೆ. ಅದು ಮಹಾರಾಷ್ಟ್ರದಲ್ಲೂ ಹೂಡಿಕೆ ಮಾಡುತ್ತಿರುವುದನ್ನು ಬೇರೆ ದೃಷ್ಟಿಯಿಂದ ನೋಡುವ ಅಗತ್ಯವಿಲ್ಲ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ''ಟೊಯೋಟಾ ಕಂಪನಿಯು ಮಹಾರಾಷ್ಟ್ರದಲ್ಲಿ ಹೆಚ್ಚುವರಿ ಹೂಡಿಕೆ ಮಾಡಬಹುದು. ನಮ್ಮಲ್ಲಿ ಹೂಡಿಕೆ ಮಾಡಿದ ಮಾತ್ರಕ್ಕೆ ಅವರು ಇನ್ನೊಂದು ಕಡೆ ಬಂಡವಾಳ ಹೂಡಬಾರದು ಎಂದೇನಿಲ್ಲ. ಆದರೆ, ರಾಜ್ಯದಲ್ಲಿ ಆ ಕಂಪನಿಯ ಹೂಡಿಕೆ ಎಂದಿನಂತೆಯೇ ಮುಂದುವರೆದುಕೊಂಡು ಹೋಗಲಿದೆ'' ಎಂದಿದ್ದಾರೆ.

ಟೊಯೋಟಾ ಕಂಪನಿಯು 2023ರಲ್ಲಿ 3,300 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಬಿಡದಿಯಲ್ಲಿ ತನ್ನ ಮೂರನೇ ಕಾರು ತಯಾರಿಕೆ ಘಟಕ ತೆರೆಯಲು ರಾಜ್ಯ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದೆ. 2022ರಲ್ಲಿ ಅದು ನಮ್ಮಲ್ಲಿ 4,100 ಕೋಟಿ ರೂಪಾಯಿ ಹೂಡಿದೆ. ಅದರ ಕೇಂದ್ರ ಕಚೇರಿ ಮತ್ತು ಸಂಶೋಧನಾ ಕೇಂದ್ರಗಳು ನಮ್ಮಲ್ಲೇ ಇವೆ ಎಂದು ಅವರು ಹೇಳಿದ್ದಾರೆ.

ಉದ್ಯಮಗಳು ತಮ್ಮ ಚಟುವಟಿಕೆಗಳನ್ನು ವಿಸ್ತರಿಸಿಕೊಳ್ಳುವುದು ಒಂದು ಸಹಜ ವಿದ್ಯಮಾನ. ಟೊಯೋಟಾ ಕೂಡ ಅದೇ ರೀತಿಯಲ್ಲಿ ನೆರೆ ರಾಜ್ಯದಲ್ಲಿ ಹೂಡಿಕೆ ಮಾಡುತ್ತಿದೆ. ಇದನ್ನು ಕರ್ನಾಟಕಕ್ಕೆ ಆಗುತ್ತಿರುವ ನಷ್ಟವೆಂದು ಭಾವಿಸುವ ಅಗತ್ಯವಿಲ್ಲ ಎಂದು ಸಚಿವ ಎಂ.ಬಿ. ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಸನ್ಸೇರಾದಿಂದ 2,100 ಕೋಟಿ ಹೂಡಿಕೆ, ಸಾವಿರಾರು ಉದ್ಯೋಗ ಸೃಷ್ಟಿಯ ಗುರಿ: ಒಡಂಬಡಿಕೆಗೆ ಸಹಿ - Sansera Investment in Karnataka

ಬೆಂಗಳೂರು: ರಾಜ್ಯದಲ್ಲಿ ಅಪಾರ ಪ್ರಮಾಣದಲ್ಲಿ ಬಂಡವಾಳ ಹೂಡಿ, 30 ವರ್ಷಗಳಿಂದಲೂ ಇಲ್ಲಿ ನೆಲೆಯೂರಿರುವ ಟೊಯೋಟಾ ಕಂಪನಿಯ ಹೂಡಿಕೆ ಎಂದಿನಂತೆ ಮುಂದುವರೆಯಲಿದೆ. ಅದು ಮಹಾರಾಷ್ಟ್ರದಲ್ಲೂ ಹೂಡಿಕೆ ಮಾಡುತ್ತಿರುವುದನ್ನು ಬೇರೆ ದೃಷ್ಟಿಯಿಂದ ನೋಡುವ ಅಗತ್ಯವಿಲ್ಲ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ''ಟೊಯೋಟಾ ಕಂಪನಿಯು ಮಹಾರಾಷ್ಟ್ರದಲ್ಲಿ ಹೆಚ್ಚುವರಿ ಹೂಡಿಕೆ ಮಾಡಬಹುದು. ನಮ್ಮಲ್ಲಿ ಹೂಡಿಕೆ ಮಾಡಿದ ಮಾತ್ರಕ್ಕೆ ಅವರು ಇನ್ನೊಂದು ಕಡೆ ಬಂಡವಾಳ ಹೂಡಬಾರದು ಎಂದೇನಿಲ್ಲ. ಆದರೆ, ರಾಜ್ಯದಲ್ಲಿ ಆ ಕಂಪನಿಯ ಹೂಡಿಕೆ ಎಂದಿನಂತೆಯೇ ಮುಂದುವರೆದುಕೊಂಡು ಹೋಗಲಿದೆ'' ಎಂದಿದ್ದಾರೆ.

ಟೊಯೋಟಾ ಕಂಪನಿಯು 2023ರಲ್ಲಿ 3,300 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಬಿಡದಿಯಲ್ಲಿ ತನ್ನ ಮೂರನೇ ಕಾರು ತಯಾರಿಕೆ ಘಟಕ ತೆರೆಯಲು ರಾಜ್ಯ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದೆ. 2022ರಲ್ಲಿ ಅದು ನಮ್ಮಲ್ಲಿ 4,100 ಕೋಟಿ ರೂಪಾಯಿ ಹೂಡಿದೆ. ಅದರ ಕೇಂದ್ರ ಕಚೇರಿ ಮತ್ತು ಸಂಶೋಧನಾ ಕೇಂದ್ರಗಳು ನಮ್ಮಲ್ಲೇ ಇವೆ ಎಂದು ಅವರು ಹೇಳಿದ್ದಾರೆ.

ಉದ್ಯಮಗಳು ತಮ್ಮ ಚಟುವಟಿಕೆಗಳನ್ನು ವಿಸ್ತರಿಸಿಕೊಳ್ಳುವುದು ಒಂದು ಸಹಜ ವಿದ್ಯಮಾನ. ಟೊಯೋಟಾ ಕೂಡ ಅದೇ ರೀತಿಯಲ್ಲಿ ನೆರೆ ರಾಜ್ಯದಲ್ಲಿ ಹೂಡಿಕೆ ಮಾಡುತ್ತಿದೆ. ಇದನ್ನು ಕರ್ನಾಟಕಕ್ಕೆ ಆಗುತ್ತಿರುವ ನಷ್ಟವೆಂದು ಭಾವಿಸುವ ಅಗತ್ಯವಿಲ್ಲ ಎಂದು ಸಚಿವ ಎಂ.ಬಿ. ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಸನ್ಸೇರಾದಿಂದ 2,100 ಕೋಟಿ ಹೂಡಿಕೆ, ಸಾವಿರಾರು ಉದ್ಯೋಗ ಸೃಷ್ಟಿಯ ಗುರಿ: ಒಡಂಬಡಿಕೆಗೆ ಸಹಿ - Sansera Investment in Karnataka

ETV Bharat Logo

Copyright © 2024 Ushodaya Enterprises Pvt. Ltd., All Rights Reserved.