ETV Bharat / state

ಮೊಬೈಲ್ ತಂದಿಟ್ಟ ಅವಾಂತರ: ಓರ್ವ ಸಾವು 6 ಮಂದಿಗೆ ಶಿಕ್ಷೆ - HASSAN MURDER CASE

ಜಾಮೀನಿನ ಮೇಲೆ ಹೊರಬಂದಿದ್ದ ಆರೋಪಿಗಳು ಮೃತನ ಕುಟುಂಬಕ್ಕೆ 35 ಲಕ್ಷ ನೀಡುವುದಾಗಿ ಹೇಳಿ ರಾಜಿ ಸಂಧಾನ ಮಾಡಿಕೊಂಡಿದ್ದರು.

6 accused convicted
ಶಿಕ್ಷೆಗೊಳಗಾದ 6 ಆರೋಪಿಗಳು (ETV Bharat)
author img

By ETV Bharat Karnataka Team

Published : Feb 4, 2025, 9:00 AM IST

ಹಾಸನ: ಎರಡು ವರ್ಷಗಳ ಹಿಂದೆ ಗಂಗಾಧರ ಎಂಬ ವ್ಯಕ್ತಿಯೊಬ್ಬನ ಕೊಲೆ ಪ್ರಕರಣದ ಸಂಬಂಧ 6 ಮಂದಿಗೆ ನ್ಯಾಯಾಧೀಶರು ತಲಾ 6 ವರ್ಷಗಳ ಕಾಲ ಶಿಕ್ಷೆ ವಿಧಿಸುವ ಮೂಲಕ ವಿಶೇಷ ಪ್ರಕರಣಕ್ಕೆ ಇತಿಶ್ರೀ ಹಾಡಿದ್ದಾರೆ.

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಊಪಿನಹಳ್ಳಿ ಗ್ರಾಮದ ಗಂಗಾಧರ್ (42) ಕೊಲೆಯಾದ ವ್ಯಕ್ತಿ. ಚನ್ನರಾಯಪಟ್ಟಣ ತಾಲೂಕು ಜನಿವಾರ ಗ್ರಾಮದ ಭರತ್ (34), ಅಭಿಷೇಕ್ ಅಲಿಯಾಸ್ ಕಬಾಬ್ ಅಭಿ (29), ಚಿರಂಜೀವಿ (27), ಅಭಿ ಅಲಿಯಾಸ್​ ರೆಬಲ್ ಅಭಿ (32), ಸೋಮಶೇಖರ್ ( 33), ಕುಮಾರ್ ಅಲಿಯಾಸ್​ ಕಳ್ಳ ಕುಮಾರ್ ಶಿಕ್ಷೆಗೊಳಗಾದ ಆರೋಪಿಗಳು.

ಏನಿದು ಪ್ರಕರಣ?: ಮೃತ ವ್ಯಕ್ತಿ ಗಂಗಾಧರ್ ವೃತ್ತಿಯಲ್ಲಿ ಟೈಲರ್. ಕಳೆದ 20 ವರ್ಷಗಳಿಂದ ಪಟ್ಟಣದ ಕೆ.ಆರ್.ವೃತ್ತದ ಬಳಿ ಎಂ.ಜಿ. ಟೈಲರ್ ಎಂಬ ಅಂಗಡಿ ಇಟ್ಟುಕೊಂಡಿದ್ದರು. ಎರಡೂವರೆ ವರ್ಷಗಳ ಹಿಂದೆ ಮೃತ ಗಂಗಾಧರ್ ಟೈಲರ್ ಅಂಗಡಿಯಲ್ಲಿ ಕೆಲಸ ಮಾಡುವಾಗ, ತಮ್ಮ ಮೊಬೈಲ್​ನಿಂದ ಗ್ರಾಹಕರೊಬ್ಬರಿಗೆ ಕರೆ ಮಾಡಲು ಹೋಗಿ ಒಂದು ನಂಬರ್ ತಪ್ಪಾಗಿ ಓರ್ವ ಮಹಿಳೆಗೆ ಡಯಲ್​ ಆಗಿತ್ತು. ಆದರೆ, ಆ ಕರೆ ರಿಂಗ್ ಆದ ಬಳಿಕ ಕಟ್ ಮಾಡಿ, ಸರಿಯಾದ ನಂಬರ್​ಗೆ ಫೋನ್ ಮಾಡಿ ಮಾತನಾಡಿದ್ದರು. ಕೆಲ ಸಮಯದ ಬಳಿಕ ಅದೇ ನಂಬರ್​ನಿಂದ ಗಂಗಾಧರ್​ಗೆ ಫೋನ್ ಬಂದಿತ್ತು. ಗಂಗಾಧರ್ "ಯಾರಿಗೋ ಕರೆ ಮಾಡಲು ಹೋಗಿ ಒಂದು ನಂಬರ್ ತಪ್ಪಾಗಿ ನಿಮಗೆ ಬಂತು" ಎಂದು ಕರೆ ಕಟ್​​ ಮಾಡಿದ್ದರು. ಆದರೆ ಆ ಮಹಿಳೆ ಮತ್ತೆ ಕರೆ ಮಾಡಿ "ನೀವು ಬೇಕು ಅಂತಲೆ ಕರೆ ಮಾಡಿದ್ದೀರಾ" ಎಂದು ಜೋರಾಗಿ ಮಾತಾನಾಡಲು ಪ್ರಾರಂಭಿಸಿದಾಗ, ಮೃತ ಗಂಗಾಧರ್ ಕೂಡ ಸ್ವಲ್ಪ ಜೋರಾಗಿ ಮಾತನಾಡಿದ್ದರು. ನಂತರ ಸಿಟ್ಟಿನಿಂದ ಆಕೆಗೆ ಬೈದು ಕರೆ ಕಟ್ ಮಾಡಿದ್ದರು. ಕೊನೆಗೆ ತನ್ನದಲ್ಲದ ತಪ್ಪಿಗೆ ಒಂದು ಮೆಸೇಜ್ ಮೂಲಕ ಕ್ಷಮೆಯನ್ನೂ ಕೇಳಿದ್ದರು.

ಭಯಗೊಳಿಸುವ ಭರದಲ್ಲಿ ಮನಸೋ ಇಚ್ಛೆ ಹಲ್ಲೆ: ಈ ವಿಚಾರವನ್ನು ಮಹಿಳೆ ತನ್ನ ಪತಿ ಭರತ್​ಗೆ ಹೇಳಿದ್ದರು. ಸಿಟ್ಟಾದ ಭರತ್ ತನ್ನ ಸ್ನೇಹಿತರೊಂದಿಗೆ ಚನ್ನರಾಯಪಟ್ಟಣದ ಎಂ.ಜಿ. ಟೈಲರ್ ಶಾಪ್​​ಗೆ ಆಗಮಿಸಿ ಗಂಗಾಧರ್​ ಅವರನ್ನು ಕಿಡ್ನಾಪ್ ಮಾಡಿದ್ದರು. ಶ್ರವಣಬೆಳಗೊಳ ರಸ್ತೆಯ ಜನಿವಾರ ಗ್ರಾಮದ ಬಳಿಯಿರುವ ರೈಲ್ವೆ ಟ್ರ್ಯಾಕ್ ಬಳಿಗೆ ಕರೆತಂದು ಭಯಗೊಳಿಸುವ ಭರದಲ್ಲಿ ಅವರಿಗೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದರು. ಈ ವೇಳೆ, ಆಕಸ್ಮಿಕವಾಗಿ ಗಂಗಾಧರ್​ ಅಲ್ಲಿಯೇ ಕುಸಿದು ಬಿದ್ದಿದ್ದರು. ಸ್ಥಳಕ್ಕೆ ಬಂದ ಸ್ಥಳೀಯರನ್ನು ನೋಡಿ ಆರೋಪಿಗಳು ಪರಾರಿಯಾಗಿದ್ದರು.

37 ಲಕ್ಷಕ್ಕೆ ರಾಜಿ ಮಾಡಿಕೊಂಡಿದ್ದ ಆರೋಪಿಗಳು: ಬಳಿಕ ಗಂಗಾಧರ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು. ಬಳಿಕ ಪತ್ನಿ ಹಾಗೂ ಸ್ನೇಹಿತರು ನೀಡಿದ ದೂರಿನ ಆಧಾರದ ಮೇಲೆ 6 ಮಂದಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಬಳಿಕ ಜಾಮೀನಿನ ಮೇಲೆ ಹೊರ ಬಂದಿದ್ದ ಆರೋಪಿಗಳು ಸಾಕ್ಷಿ ನಾಶ ಮಾಡುವ ಉದ್ದೇಶದಿಂದ ಮೃತ ಕುಟುಂಬಕ್ಕೆ 37 ಲಕ್ಷ ಕೊಡುವುದಾಗಿ ರಾಜಿ - ಸಂಧಾನ ಮಾಡಿಕೊಂಡು, ಮೃತನ ಕುಟುಂಬಕ್ಕೆ ಮುಂಗಡವಾಗಿ 25 ಲಕ್ಷ ನೀಡಿದ್ದರು. ಜೊತೆಗೆ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ನ್ಯಾಯಾಲಯದಲ್ಲಿ ಸುಳ್ಳು ಸಾಕ್ಷಿ ಹೇಳಿಸಿದ್ದರು.

ಪರಮೋಚ್ಚ ಅಧಿಕಾರ ಬಳಸಿದ ನ್ಯಾಯಾಧೀಶರು: ಈ ವಿಚಾರ ನ್ಯಾಯಾಧೀಶರ ಗಮನಕ್ಕೆ ಬಂದು, ಆರೋಪಿಗಳು ತಮಗಿಷ್ಟ ಬಂದಂತೆ ಕೊಲೆ ಮಾಡಿ ರಾಜಿ ಸಂಧಾನ ಮಾಡಿಕೊಳ್ಳುವುದಾದರೇ, ಪೊಲೀಸರೇಕೆ? ನ್ಯಾಯಾಲಯವೇಕೆ? ಎಂದು ಗರಂ ಆಗಿದ್ದರು. ಆರೋಪಿಗಳು ಲಕ್ಷಾಂತರ ಹಣದಿಂದ ನಾಶ ಮಾಡಿದ್ದ ಮಾನವ ಸಾಕ್ಷಿಗಳ ಬದಲಿಗೆ ಡಿಜಿಟರ್ ಸಾಕ್ಷಿಗಳಾದ ಮರಣೋತ್ತರ ಪರೀಕ್ಷೆ ವರದಿ, ಶ್ವಾನದಳ ಪರೀಕ್ಷೆ, ಬೆರಳಚ್ಚು ತಜ್ಞರ ವರದಿ, ಫೋನ್ ರೆಕಾರ್ಡ್, ಕೊಲೆಗೆ ಬಳಸಿದ ವಾಹನ ಹೀಗೆ ಹತ್ತು ಹಲವು ಸಾಕ್ಷಿಗಳನ್ನು ತನಿಖಾಧಿಕಾರಿಗಳಿಂದ ಸಂಗ್ರಹಿಸಿಕೊಂಡು ವಿಶೇಷ ಪ್ರಕರಣ ಎಂದು ಭಾವಿಸಿದ ಚನ್ನರಾಯಪಟ್ಟಣ 4ನೇ ಜೆ.ಎಂ.ಎಫ್.ಸಿ ನ್ಯಾಯಾಧೀಶ ವಿ.ಎನ್. ಜಗದೀಶ್ ಡಿಜಿಟಲ್ ಸಾಕ್ಷ್ಯಾಧಾರಗಳ ಆಧಾರದ ಮೂಲಕ ಗಂಗಾಧರ್ ಕೊಲೆಯೂ ಈ 6 ಮಂದಿಯಿಂದಲೇ ನಡೆದಿರುವುದು ಎಂದು ತಮಗಿರುವ ಪರಮೋಚ್ಚ ಅಧಿಕಾರವನ್ನು ಬಳಸಿಕೊಂಡು ತೀರ್ಪು ನೀಡಿದ್ದಾರೆ. ಆರೋಪಿಗಳಿಗೆ ತಲಾ 6 ವರ್ಷಗಳ ಕಾಲ ಶಿಕ್ಷೆ ವಿಧಿಸಿದ್ದಾರೆ.

ತನಿಖಾಧಿಕಾರಿಯಾಗಿ ಚನ್ನರಾಯಪಟ್ಟಣ ನಗರ ಠಾಣೆಯ ವೃತ್ತ ನಿರೀಕ್ಷಕ ವಸಂತ್, ಸಹಾಯಕ ತನಿಖಾಧಿಕಾರಿ ಮುಖ್ಯ ಪೇದೆ ರಂಗಸ್ವಾಮಿ ಸೇರಿದಂತೆ ಹಲವರು ಪ್ರಕರಣಕ್ಕೆ ಸಂಬಂಧಿಸಿದ ತಾಂತ್ರಿಕ ಸಾಕ್ಷ್ಯಗಳನ್ನು ಒದಗಿಸಿದ್ದರು. ಸರ್ಕಾರಿ ಅಭಿಯೋಜಕ ವಕೀಲ ಸಿ.ಡಿ.ಶ್ರೀನಿವಾಸ್ ಮೃತರ ಪರ ವಾದ ಮಂಡಿಸಿದ್ದರು.

ಇದನ್ನೂ ಓದಿ: ಶಿವಮೊಗ್ಗ: ಪತ್ನಿಗೆ ಸ್ಕ್ರೂ ಡ್ರೈವರ್​​ನಿಂದ ಚುಚ್ಚಿ ಕೊಂದ ಪತಿಗೆ ಜೀವಾವಧಿ ಶಿಕ್ಷೆ

ಹಾಸನ: ಎರಡು ವರ್ಷಗಳ ಹಿಂದೆ ಗಂಗಾಧರ ಎಂಬ ವ್ಯಕ್ತಿಯೊಬ್ಬನ ಕೊಲೆ ಪ್ರಕರಣದ ಸಂಬಂಧ 6 ಮಂದಿಗೆ ನ್ಯಾಯಾಧೀಶರು ತಲಾ 6 ವರ್ಷಗಳ ಕಾಲ ಶಿಕ್ಷೆ ವಿಧಿಸುವ ಮೂಲಕ ವಿಶೇಷ ಪ್ರಕರಣಕ್ಕೆ ಇತಿಶ್ರೀ ಹಾಡಿದ್ದಾರೆ.

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಊಪಿನಹಳ್ಳಿ ಗ್ರಾಮದ ಗಂಗಾಧರ್ (42) ಕೊಲೆಯಾದ ವ್ಯಕ್ತಿ. ಚನ್ನರಾಯಪಟ್ಟಣ ತಾಲೂಕು ಜನಿವಾರ ಗ್ರಾಮದ ಭರತ್ (34), ಅಭಿಷೇಕ್ ಅಲಿಯಾಸ್ ಕಬಾಬ್ ಅಭಿ (29), ಚಿರಂಜೀವಿ (27), ಅಭಿ ಅಲಿಯಾಸ್​ ರೆಬಲ್ ಅಭಿ (32), ಸೋಮಶೇಖರ್ ( 33), ಕುಮಾರ್ ಅಲಿಯಾಸ್​ ಕಳ್ಳ ಕುಮಾರ್ ಶಿಕ್ಷೆಗೊಳಗಾದ ಆರೋಪಿಗಳು.

ಏನಿದು ಪ್ರಕರಣ?: ಮೃತ ವ್ಯಕ್ತಿ ಗಂಗಾಧರ್ ವೃತ್ತಿಯಲ್ಲಿ ಟೈಲರ್. ಕಳೆದ 20 ವರ್ಷಗಳಿಂದ ಪಟ್ಟಣದ ಕೆ.ಆರ್.ವೃತ್ತದ ಬಳಿ ಎಂ.ಜಿ. ಟೈಲರ್ ಎಂಬ ಅಂಗಡಿ ಇಟ್ಟುಕೊಂಡಿದ್ದರು. ಎರಡೂವರೆ ವರ್ಷಗಳ ಹಿಂದೆ ಮೃತ ಗಂಗಾಧರ್ ಟೈಲರ್ ಅಂಗಡಿಯಲ್ಲಿ ಕೆಲಸ ಮಾಡುವಾಗ, ತಮ್ಮ ಮೊಬೈಲ್​ನಿಂದ ಗ್ರಾಹಕರೊಬ್ಬರಿಗೆ ಕರೆ ಮಾಡಲು ಹೋಗಿ ಒಂದು ನಂಬರ್ ತಪ್ಪಾಗಿ ಓರ್ವ ಮಹಿಳೆಗೆ ಡಯಲ್​ ಆಗಿತ್ತು. ಆದರೆ, ಆ ಕರೆ ರಿಂಗ್ ಆದ ಬಳಿಕ ಕಟ್ ಮಾಡಿ, ಸರಿಯಾದ ನಂಬರ್​ಗೆ ಫೋನ್ ಮಾಡಿ ಮಾತನಾಡಿದ್ದರು. ಕೆಲ ಸಮಯದ ಬಳಿಕ ಅದೇ ನಂಬರ್​ನಿಂದ ಗಂಗಾಧರ್​ಗೆ ಫೋನ್ ಬಂದಿತ್ತು. ಗಂಗಾಧರ್ "ಯಾರಿಗೋ ಕರೆ ಮಾಡಲು ಹೋಗಿ ಒಂದು ನಂಬರ್ ತಪ್ಪಾಗಿ ನಿಮಗೆ ಬಂತು" ಎಂದು ಕರೆ ಕಟ್​​ ಮಾಡಿದ್ದರು. ಆದರೆ ಆ ಮಹಿಳೆ ಮತ್ತೆ ಕರೆ ಮಾಡಿ "ನೀವು ಬೇಕು ಅಂತಲೆ ಕರೆ ಮಾಡಿದ್ದೀರಾ" ಎಂದು ಜೋರಾಗಿ ಮಾತಾನಾಡಲು ಪ್ರಾರಂಭಿಸಿದಾಗ, ಮೃತ ಗಂಗಾಧರ್ ಕೂಡ ಸ್ವಲ್ಪ ಜೋರಾಗಿ ಮಾತನಾಡಿದ್ದರು. ನಂತರ ಸಿಟ್ಟಿನಿಂದ ಆಕೆಗೆ ಬೈದು ಕರೆ ಕಟ್ ಮಾಡಿದ್ದರು. ಕೊನೆಗೆ ತನ್ನದಲ್ಲದ ತಪ್ಪಿಗೆ ಒಂದು ಮೆಸೇಜ್ ಮೂಲಕ ಕ್ಷಮೆಯನ್ನೂ ಕೇಳಿದ್ದರು.

ಭಯಗೊಳಿಸುವ ಭರದಲ್ಲಿ ಮನಸೋ ಇಚ್ಛೆ ಹಲ್ಲೆ: ಈ ವಿಚಾರವನ್ನು ಮಹಿಳೆ ತನ್ನ ಪತಿ ಭರತ್​ಗೆ ಹೇಳಿದ್ದರು. ಸಿಟ್ಟಾದ ಭರತ್ ತನ್ನ ಸ್ನೇಹಿತರೊಂದಿಗೆ ಚನ್ನರಾಯಪಟ್ಟಣದ ಎಂ.ಜಿ. ಟೈಲರ್ ಶಾಪ್​​ಗೆ ಆಗಮಿಸಿ ಗಂಗಾಧರ್​ ಅವರನ್ನು ಕಿಡ್ನಾಪ್ ಮಾಡಿದ್ದರು. ಶ್ರವಣಬೆಳಗೊಳ ರಸ್ತೆಯ ಜನಿವಾರ ಗ್ರಾಮದ ಬಳಿಯಿರುವ ರೈಲ್ವೆ ಟ್ರ್ಯಾಕ್ ಬಳಿಗೆ ಕರೆತಂದು ಭಯಗೊಳಿಸುವ ಭರದಲ್ಲಿ ಅವರಿಗೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದರು. ಈ ವೇಳೆ, ಆಕಸ್ಮಿಕವಾಗಿ ಗಂಗಾಧರ್​ ಅಲ್ಲಿಯೇ ಕುಸಿದು ಬಿದ್ದಿದ್ದರು. ಸ್ಥಳಕ್ಕೆ ಬಂದ ಸ್ಥಳೀಯರನ್ನು ನೋಡಿ ಆರೋಪಿಗಳು ಪರಾರಿಯಾಗಿದ್ದರು.

37 ಲಕ್ಷಕ್ಕೆ ರಾಜಿ ಮಾಡಿಕೊಂಡಿದ್ದ ಆರೋಪಿಗಳು: ಬಳಿಕ ಗಂಗಾಧರ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು. ಬಳಿಕ ಪತ್ನಿ ಹಾಗೂ ಸ್ನೇಹಿತರು ನೀಡಿದ ದೂರಿನ ಆಧಾರದ ಮೇಲೆ 6 ಮಂದಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಬಳಿಕ ಜಾಮೀನಿನ ಮೇಲೆ ಹೊರ ಬಂದಿದ್ದ ಆರೋಪಿಗಳು ಸಾಕ್ಷಿ ನಾಶ ಮಾಡುವ ಉದ್ದೇಶದಿಂದ ಮೃತ ಕುಟುಂಬಕ್ಕೆ 37 ಲಕ್ಷ ಕೊಡುವುದಾಗಿ ರಾಜಿ - ಸಂಧಾನ ಮಾಡಿಕೊಂಡು, ಮೃತನ ಕುಟುಂಬಕ್ಕೆ ಮುಂಗಡವಾಗಿ 25 ಲಕ್ಷ ನೀಡಿದ್ದರು. ಜೊತೆಗೆ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ನ್ಯಾಯಾಲಯದಲ್ಲಿ ಸುಳ್ಳು ಸಾಕ್ಷಿ ಹೇಳಿಸಿದ್ದರು.

ಪರಮೋಚ್ಚ ಅಧಿಕಾರ ಬಳಸಿದ ನ್ಯಾಯಾಧೀಶರು: ಈ ವಿಚಾರ ನ್ಯಾಯಾಧೀಶರ ಗಮನಕ್ಕೆ ಬಂದು, ಆರೋಪಿಗಳು ತಮಗಿಷ್ಟ ಬಂದಂತೆ ಕೊಲೆ ಮಾಡಿ ರಾಜಿ ಸಂಧಾನ ಮಾಡಿಕೊಳ್ಳುವುದಾದರೇ, ಪೊಲೀಸರೇಕೆ? ನ್ಯಾಯಾಲಯವೇಕೆ? ಎಂದು ಗರಂ ಆಗಿದ್ದರು. ಆರೋಪಿಗಳು ಲಕ್ಷಾಂತರ ಹಣದಿಂದ ನಾಶ ಮಾಡಿದ್ದ ಮಾನವ ಸಾಕ್ಷಿಗಳ ಬದಲಿಗೆ ಡಿಜಿಟರ್ ಸಾಕ್ಷಿಗಳಾದ ಮರಣೋತ್ತರ ಪರೀಕ್ಷೆ ವರದಿ, ಶ್ವಾನದಳ ಪರೀಕ್ಷೆ, ಬೆರಳಚ್ಚು ತಜ್ಞರ ವರದಿ, ಫೋನ್ ರೆಕಾರ್ಡ್, ಕೊಲೆಗೆ ಬಳಸಿದ ವಾಹನ ಹೀಗೆ ಹತ್ತು ಹಲವು ಸಾಕ್ಷಿಗಳನ್ನು ತನಿಖಾಧಿಕಾರಿಗಳಿಂದ ಸಂಗ್ರಹಿಸಿಕೊಂಡು ವಿಶೇಷ ಪ್ರಕರಣ ಎಂದು ಭಾವಿಸಿದ ಚನ್ನರಾಯಪಟ್ಟಣ 4ನೇ ಜೆ.ಎಂ.ಎಫ್.ಸಿ ನ್ಯಾಯಾಧೀಶ ವಿ.ಎನ್. ಜಗದೀಶ್ ಡಿಜಿಟಲ್ ಸಾಕ್ಷ್ಯಾಧಾರಗಳ ಆಧಾರದ ಮೂಲಕ ಗಂಗಾಧರ್ ಕೊಲೆಯೂ ಈ 6 ಮಂದಿಯಿಂದಲೇ ನಡೆದಿರುವುದು ಎಂದು ತಮಗಿರುವ ಪರಮೋಚ್ಚ ಅಧಿಕಾರವನ್ನು ಬಳಸಿಕೊಂಡು ತೀರ್ಪು ನೀಡಿದ್ದಾರೆ. ಆರೋಪಿಗಳಿಗೆ ತಲಾ 6 ವರ್ಷಗಳ ಕಾಲ ಶಿಕ್ಷೆ ವಿಧಿಸಿದ್ದಾರೆ.

ತನಿಖಾಧಿಕಾರಿಯಾಗಿ ಚನ್ನರಾಯಪಟ್ಟಣ ನಗರ ಠಾಣೆಯ ವೃತ್ತ ನಿರೀಕ್ಷಕ ವಸಂತ್, ಸಹಾಯಕ ತನಿಖಾಧಿಕಾರಿ ಮುಖ್ಯ ಪೇದೆ ರಂಗಸ್ವಾಮಿ ಸೇರಿದಂತೆ ಹಲವರು ಪ್ರಕರಣಕ್ಕೆ ಸಂಬಂಧಿಸಿದ ತಾಂತ್ರಿಕ ಸಾಕ್ಷ್ಯಗಳನ್ನು ಒದಗಿಸಿದ್ದರು. ಸರ್ಕಾರಿ ಅಭಿಯೋಜಕ ವಕೀಲ ಸಿ.ಡಿ.ಶ್ರೀನಿವಾಸ್ ಮೃತರ ಪರ ವಾದ ಮಂಡಿಸಿದ್ದರು.

ಇದನ್ನೂ ಓದಿ: ಶಿವಮೊಗ್ಗ: ಪತ್ನಿಗೆ ಸ್ಕ್ರೂ ಡ್ರೈವರ್​​ನಿಂದ ಚುಚ್ಚಿ ಕೊಂದ ಪತಿಗೆ ಜೀವಾವಧಿ ಶಿಕ್ಷೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.