ETV Bharat / state

ಹಾವೇರಿ: ಕೆರೆಗೆ ಬಿದ್ದ ಹೋರಿ ರಕ್ಷಿಸಲು ಹೋಗಿ ಇಬ್ಬರು ನೀರುಪಾಲು - TWO YOUNGSTERS DEATH

ಕೆರೆಗೆ ಬಿದ್ದ ಹೋರಿಯನ್ನು ರಕ್ಷಣೆ ಮಾಡಲು ಹೋಗಿ ಇಬ್ಬರು ನೀರು ಪಾಲಾಗಿರುವ ಘಟನೆ ಹಾವೇರಿ ಜಿಲ್ಲೆಯ ಮಕರವಳ್ಳಿ ಗ್ರಾಮದಲ್ಲಿ ನಡೆದಿದೆ.

TWO YOUNGSTERS DEATH
ಮೃತದೇಹಕ್ಕಾಗಿ ಶೋಧ ಕಾರ್ಯ (ETV Bharat)
author img

By ETV Bharat Karnataka Team

Published : Nov 7, 2024, 5:00 PM IST

ಹಾವೇರಿ: ಕೆರೆಗೆ ಬಿದ್ದ ಹೋರಿ ರಕ್ಷಿಸಲು ಹೋದ ಯುವಕರಿಬ್ಬರು ನೀರು ಪಾಲಾದ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕು ಮಕರವಳ್ಳಿ ಗ್ರಾಮದಲ್ಲಿ ನಡೆದಿದೆ.

45 ವರ್ಷದ ನಾಗರಾಜ್ ಮಟ್ಟಿಮನಿ ಮತ್ತು 48 ವರ್ಷದ ಮಾಲತೇಶ್ ದಾಸನೂರು ಕೆರೆಯಲ್ಲಿ ಮುಳುಗಿ ಮೃತಪಟ್ಟ ವ್ಯಕ್ತಿಗಳು. ಗ್ರಾಮದ ಪಕ್ಕದಲ್ಲೇ ಇರುವ ಕೆರೆಗೆ ಹೋರಿ‌ ಬಿದ್ದಿತ್ತು. ಬಿದ್ದ ಹೋರಿಯನ್ನು ರಕ್ಷಣೆ ಮಾಡಲು ಹೋಗಿ ಇಬ್ಬರು ನೀರು ಪಾಲಾಗಿದ್ದಾರೆ. ಕೆರೆಯಲ್ಲಿರುವ ಬಳ್ಳಿಗಳು ಕಾಲಿಗೆ ತೊಡಕು ಹಾಕಿದ್ದರಿಂದ ಇಬ್ಬರು ಮೃತಪಟ್ಟಿರಬಹುದೆಂದು ಶಂಕಿಸಲಾಗುತ್ತಿದೆ.

ಮೃತದೇಹಕ್ಕಾಗಿ ಶೋಧ ಕಾರ್ಯ (ETV Bharat)

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಮತ್ತು ಆಡೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನೀರು ಪಾಲಾದವರ ಮೃತದೇಹಕ್ಕಾಗಿ ಶೋಧ ಕಾರ್ಯ ಕೈಗೊಂಡಿದ್ದಾರೆ. ಗ್ರಾಮಸ್ಥರು ಕೈಜೋಡಿಸಿದ್ದು, ಶೋಧ ಕಾರ್ಯ ತೀವ್ರಗೊಂಡಿದೆ. ಮೃತ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: ದಾವಣಗೆರೆ: ನದಿಯಲ್ಲಿ ಟ್ರ್ಯಾಕ್ಟರ್ ತೊಳೆಯಲು ಹೋಗಿದ್ದ ಇಬ್ಬರು ನೀರುಪಾಲು

ABOUT THE AUTHOR

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.