ETV Bharat / state

2024ರ ಕೇಂದ್ರ ಬಜೆಟ್​: ರಾಜ್ಯ ಬಿಜೆಪಿ ನಾಯಕರು ಹೇಳಿದ್ದು ಹೀಗೆ..? - Union Budget 2024

ಮೋದಿ ಅವರ ನೇತೃತ್ವದ ಎನ್​ಡಿಎ ಸರ್ಕಾರದ 3ನೇ ಅಧಿಕಾರಾವಧಿಯ ಮೊದಲ ಪೂರ್ಣ ಬಜೆಟ್​ನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದರು. ಪ್ರಸಕ್ತ ಸಾಲಿನ ಬಜೆಟ್​ ಕುರಿತು ರಾಜ್ಯ ಬಿಜೆಪಿ ನಾಯಕರು ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ.

author img

By ETV Bharat Karnataka Team

Published : Jul 23, 2024, 5:28 PM IST

Finance Minister Nirmala Sitharaman  Union Budget 2024  Nirmala Sitharaman Budge
2024ರ ಕೇಂದ್ರ ಬಜೆಟ್​: ರಾಜ್ಯ ಬಿಜೆಪಿ ನಾಯಕರು ಹೇಳಿದ್ದು ಹೀಗೆ..? (ETV Bharat)

ಬೆಂಗಳೂರು: ''ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರದ 3ನೇ ಅಧಿಕಾರಾವಧಿಯ ಮೊದಲ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದ್ದು, ವಿಕಸಿತ ಭಾರತ ನಿರ್ಮಾಣಕ್ಕೆ ಸುಭದ್ರ ಅಡಿಪಾಯ ಕಲ್ಪಿಸುವ, ದೇಶದ ಸಮಗ್ರ ಹಾಗೂ ಸರ್ವಾಂಗೀಣ ಅಭಿವೃದ್ಧಿಯ ವೇಗಕ್ಕೆ ಮತ್ತಷ್ಟು ಶಕ್ತಿ ತುಂಬುವ ಬಜೆಟ್ ಇದಾಗಿದೆ'' ಎಂದು ಬಿಜೆಪಿ ಹಿರಿಯ ನಾಯಕ ಬಿ.ಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ.

''ಮುಂದಿನ 5 ವರ್ಷಗಳ ರಾಷ್ಟ್ರದ ಪ್ರಗತಿಗೆ ಈ ಬಜೆಟ್ ದಿಕ್ಸೂಚಿಯಾಗಿದ್ದು, ಕೃಷಿ, ಉದ್ಯೋಗ, ಕೌಶಲ್ಯಾಭಿವೃದ್ಧಿ, ಸಾಮಾಜಿಕ ನ್ಯಾಯ, ಉತ್ಪಾದನೆ, ಸೇವಾ ವಲಯ, ಮೂಲಸೌಕರ್ಯಾಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದೆ. ಕೃಷಿ ವಲಯದ ಉತ್ಪಾದಕತೆ ಹೆಚ್ಚಳಕ್ಕೆ ಮತ್ತಷ್ಟು ಅನುಕೂಲ ಕಲ್ಪಿಸಲು 1.52 ಲಕ್ಷ ಕೋಟಿ ರೂ. ಮೀಸಲಿಡಲಾಗಿದೆ. ಹಾಗೆಯೇ, ವೇತನ ಪಡೆಯುವ ಉದ್ಯೋಗಿಗಳಿಗೆ ನೆರವಾಗಲು ಹೊಸ ತೆರಿಗೆ ಪದ್ಧತಿಯಲ್ಲಿ, ಆದಾಯ ತೆರಿಗೆಯಲ್ಲಿ 17,500 ರೂ.ಗಳವರೆಗೆ ಉಳಿತಾಯವಾಗುವಂತೆ ಸುಧಾರಣೆ ತರಲಾಗಿದೆ. ದೇಶದ ಪ್ರತಿಯೊಬ್ಬ ನಾಗರಿಕನನ್ನು ಸಬಲೀಕರಣಗೊಳಿಸುವ ಮತ್ತು ಸಮೃದ್ಧ, ಸಶಕ್ತ ರಾಷ್ಟ್ರ ನಿರ್ಮಾಣದ ನಿಟ್ಟಿನಲ್ಲಿ ಸರ್ವಸ್ಪರ್ಶಿ, ಅಭಿವೃದ್ಧಿ ಪೂರಕ ಬಜೆಟ್ ಅನ್ನು ವಿತ್ತ ಸಚಿವರು ಮಂಡಿಸಿದ್ದಾರೆ'' ಎಂದು ಸಾಮಾಜಿಕ ಜಾಲತಾಣವಾದ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ವಿಜಯೇಂದ್ರ ಅಭಿನಂದನೆ: ''ಲೋಕಸಭೆಯಲ್ಲಿ ಇಂದು ಮಂಡಿಸಲಾದ 2024-25ನೇ ಸಾಲಿನ ಬಜೆಟ್​ನಲ್ಲಿ ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗಾಗಿ 1.48 ಲಕ್ಷ ಕೋಟಿ ಮೀಸಲಿಡುವುದಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪದ ವಿಕಸಿತ ಭಾರತದ ನಿರ್ಮಾಣಕ್ಕೆ ಉತ್ತಮ ಅಡಿಪಾಯ ಹಾಕಿದ್ದಾರೆ'' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.

''ದೇಶದ ಅರ್ಥ ವ್ಯವಸ್ಥೆಗೆ ಶರವೇಗ ನೀಡುವ ನಿಟ್ಟಿನಲ್ಲಿ ಘೋಷಿಸಿರುವ ಕಾರ್ಯಕ್ರಮಗಳು ಹಣದುಬ್ಬರವನ್ನು ನಿಯಂತ್ರಿಸಲಿದ್ದು, ಬಡತನ ನಿರ್ಮೂಲನೆ, ಗ್ರಾಮೀಣಾಭಿವೃದ್ಧಿಗೆ 2.66 ಲಕ್ಷ ಕೋಟಿ ರೂ ಮೀಸಲಿರಿಸಿ, ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ರೂ. ಅನುದಾನ ನೀಡುವ ಮೂಲಕ ರೈತರ ಏಳಿಗೆಗೆ, ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಲಾಗಿರುವುದು ರೈತರು ಹಾಗೂ ಸ್ತ್ರೀ ಕುಲದ ಬಗೆಗಿನ ಅದಮ್ಯ ವಿಶ್ವಾಸವನ್ನು ಸಂಕೇತಿಸಿದೆ. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ, ಪ್ರವಾಸೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳು ಹಾಗೂ ಉದ್ಯಮಗಳ ಬೆಳವಣಿಗೆಗೆ ವಿಶೇಷ ಒತ್ತು ನೀಡುವ ಮೂಲಕ ಯುವ ಸಮುದಾಯಕ್ಕೆ ಸ್ವಾವಲಂಬಿ ಹಾಗೂ ಉದ್ಯೋಗ ಸೃಷ್ಟಿಗೆ ಬೃಹತ್ ಪ್ರಮಾಣದಲ್ಲಿ ಉತ್ತೇಜನ ನೀಡಲು ಮನ್ನಣೆ ದೊರಕಿರುವುದು ನಿಜಕ್ಕೂ ಪ್ರಶಂಸನೀಯ ಹೆಜ್ಜೆಯಾಗಿದೆ'' ಎಂದಿದ್ದಾರೆ.

''ಅಂತೆಯೇ ಭಾರತದ ಆರ್ಥಿಕ ಸಂಪನ್ಮೂಲ ಕ್ರೋಢೀಕರಣ ಹೆಚ್ಚಿಸುವ ನಿಟ್ಟಿನಲ್ಲಿ ತೆರಿಗೆದಾರನಿಗೆ ಹೊರೆಯಾಗದಂತೆ ವಿತ್ತ ಸಚಿವರು ಎಚ್ಚರವಹಿಸಿ ಜಾಣ್ಮೆ ತೋರಿದ್ದಾರೆ. ಉಚಿತ ಪಡಿತರ ಯೋಜನೆ 2029 ರ ವರೆಗೆ ಮುಂದುವರೆಸಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ 5 ವರ್ಷ ವಿಸ್ತರಣೆ ಮಾಡುವ ಮೂಲಕ ಬಡವರ ಬಗೆಗಿನ ಕಾಳಜಿಯಲ್ಲಿ ರಾಜಿಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂಬ ಸಂದೇಶ ರವಾನಿಸಲಾಗಿದೆ. ಸತತ 7ನೇ ಬಾರಿಗೆ ಅತ್ಯುತ್ತಮ ಹಾಗೂ ಪ್ರಗತಿದಾಯಕ ಬಜೆಟ್ ಮಂಡಿಸಿ ದಾಖಲೆ ನಿರ್ಮಿಸಿದ ನಿರ್ಮಲಾ ಸೀತಾರಾಮನ್ ಅವರನ್ನು ರಾಜ್ಯದ ಜನತೆಯ ಪರವಾಗಿ ಅಭಿನಂದಿಸುವೆ'' ಎಂದು ಟ್ವೀಟ್ ಮಾಡಿದ್ದಾರೆ.

ಆರ್. ಅಶೋಕ್ ಮೆಚ್ಚುಗೆ: ''ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ 7ನೇ ಬಾರಿಗೆ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ 3.0 ವಿಕಸಿತ ಭಾರತ ಬಜೆಟ್ 2024-25 ರಲ್ಲಿ ಅನ್ನದಾತ, ಬಡವ, ಮಧ್ಯ ವರ್ಗ ಹಾಗೂ ಮಹಿಳೆ ಸೇರಿದಂತೆ ಈ 9 ಕ್ಷೇತ್ರಗಳಿಗೆ ಪ್ರಮುವಾಗಿ ಆದ್ಯತೆ ನೀಡಲಾಗಿದೆ. ಕೌಶಲ್ಯ, ನಿರುದ್ಯೋಗ, ಎಮ್ಎಸ್ಎಮ್ಇ ಕ್ಷೇತ್ರಗಳಿಗೂ ಒತ್ತು ನೀಡಲಾಗಿದೆ'' ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಎಕ್ಸ್ ಖಾತೆಯಲ್ಲಿ ಪೋಸ್ಟ್​ ಮಾಡಿದ್ದಾರೆ.

ಬಸವರಾಜ ಬೊಮ್ಮಾಯಿ ಅಭಿಪ್ರಾಯ: ''ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರದ ಬಜೆಟ್ ಭವಿಷ್ಯದ ಭಾರತದ ಯುವಕರ ಬಜೆಟ್‌ ಆಗಿದೆ'' ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಕೇಂದ್ರದ ಬಜೆಟ್ ನಂತರ ನವ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ''ಪಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಹತ್ತು ವರ್ಷದ ಆರ್ಥಿಕತೆಯ ಸುಧಾರಣೆಯಿಂದ ವಿಶ್ವದಲ್ಲಿಯೇ ಭಾರತ ಬೆಳೆಯುತ್ತಿರುವ ರಾಷ್ಟ್ರ ಎನ್ನುವುದನ್ನು ಈ ಬಜೆಟ್ ತೋರಿಸುತ್ತದೆ. ಹಣದುಬ್ಬರ ಸೀಮಿತಗೊಳಿಸಿರುವುದು, ಹೆಚ್ಚು ಜನರಿಗೆ ಕೆಲಸ ಕೊಡಿಸಿರುವುದು ಹತ್ತು ವರ್ಷದಲ್ಲಿ ಮಾಡಿರುವುದರ ಫಲವಾಗಿ ವಿಕಸಿತ ಭಾರತ ಮಾಡುವ ಹತ್ತು ವರ್ಷದ ಫಲವನ್ನು ಬರುವ ದಿನಗಳಲ್ಲಿ ಹೆಚ್ಚಿಗೆ ಮಾಡುವ ನಿಟ್ಟಿನಲ್ಲಿ ಅಭಿವೃದ್ಧಿ ಪರವಾದ ಬಜೆಟ್ ಇದಾಗಿದೆ'' ಎಂದು ಹೇಳಿದರು.

''ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1.5 ಲಕ್ಷ ಕೋಟಿ, ಉದ್ಯೋಗ, ಕೌಶಲ್ಯಾಬಿವೃದ್ಧಿಗೆ 1.5 ಲಕ್ಷ ಕೋಟಿ, ಮುದ್ರಾ ಯೋಜನೆಯಲ್ಲಿ ಸಾಲ ನೀಡುವ ಪ್ರಮಾಣವನ್ನು 10 ಲಕ್ಷದಿಂದ 20 ಲಕ್ಷಕ್ಕೆ ಹೆಚ್ಚಳ ಮಾಡಿರುವುದು, ಗ್ರಾಮೀಣಾಭಿವೃದ್ಧಿಗೆ 1 ಲಕ್ಷ ಕೋಟಿ, ಬಡವರಿಗೆ 3 ಕೋಟಿ ಮನೆ ಕೊಡುವುದು, ಕೃಷಿ ವಲಯಕ್ಕೆ ಬಹಳ ಒತ್ತು ಕೊಟ್ಟಿದ್ದು, ಕೃಷಿ ಉತ್ಪಾದನೆ ಹೆಚ್ಚಳ ಮತ್ತು ಸಂಸ್ಕರಣೆಗೆ ಆದ್ಯತೆ ನೀಡಿದ್ದಾರೆ'' ಎಂದು ತಿಳಿಸಿದರು.

ಇದನ್ನೂ ಓದಿ: ಕೇಂದ್ರ ಬಜೆಟ್​ 2024: ಯಾವ ವಸ್ತು ಏರಿಕೆ, ಯಾವುದು ಇಳಿಕೆ- ತಿಳಿಯಿರಿ - Union Budget 2024

ಬೆಂಗಳೂರು: ''ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರದ 3ನೇ ಅಧಿಕಾರಾವಧಿಯ ಮೊದಲ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದ್ದು, ವಿಕಸಿತ ಭಾರತ ನಿರ್ಮಾಣಕ್ಕೆ ಸುಭದ್ರ ಅಡಿಪಾಯ ಕಲ್ಪಿಸುವ, ದೇಶದ ಸಮಗ್ರ ಹಾಗೂ ಸರ್ವಾಂಗೀಣ ಅಭಿವೃದ್ಧಿಯ ವೇಗಕ್ಕೆ ಮತ್ತಷ್ಟು ಶಕ್ತಿ ತುಂಬುವ ಬಜೆಟ್ ಇದಾಗಿದೆ'' ಎಂದು ಬಿಜೆಪಿ ಹಿರಿಯ ನಾಯಕ ಬಿ.ಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ.

''ಮುಂದಿನ 5 ವರ್ಷಗಳ ರಾಷ್ಟ್ರದ ಪ್ರಗತಿಗೆ ಈ ಬಜೆಟ್ ದಿಕ್ಸೂಚಿಯಾಗಿದ್ದು, ಕೃಷಿ, ಉದ್ಯೋಗ, ಕೌಶಲ್ಯಾಭಿವೃದ್ಧಿ, ಸಾಮಾಜಿಕ ನ್ಯಾಯ, ಉತ್ಪಾದನೆ, ಸೇವಾ ವಲಯ, ಮೂಲಸೌಕರ್ಯಾಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದೆ. ಕೃಷಿ ವಲಯದ ಉತ್ಪಾದಕತೆ ಹೆಚ್ಚಳಕ್ಕೆ ಮತ್ತಷ್ಟು ಅನುಕೂಲ ಕಲ್ಪಿಸಲು 1.52 ಲಕ್ಷ ಕೋಟಿ ರೂ. ಮೀಸಲಿಡಲಾಗಿದೆ. ಹಾಗೆಯೇ, ವೇತನ ಪಡೆಯುವ ಉದ್ಯೋಗಿಗಳಿಗೆ ನೆರವಾಗಲು ಹೊಸ ತೆರಿಗೆ ಪದ್ಧತಿಯಲ್ಲಿ, ಆದಾಯ ತೆರಿಗೆಯಲ್ಲಿ 17,500 ರೂ.ಗಳವರೆಗೆ ಉಳಿತಾಯವಾಗುವಂತೆ ಸುಧಾರಣೆ ತರಲಾಗಿದೆ. ದೇಶದ ಪ್ರತಿಯೊಬ್ಬ ನಾಗರಿಕನನ್ನು ಸಬಲೀಕರಣಗೊಳಿಸುವ ಮತ್ತು ಸಮೃದ್ಧ, ಸಶಕ್ತ ರಾಷ್ಟ್ರ ನಿರ್ಮಾಣದ ನಿಟ್ಟಿನಲ್ಲಿ ಸರ್ವಸ್ಪರ್ಶಿ, ಅಭಿವೃದ್ಧಿ ಪೂರಕ ಬಜೆಟ್ ಅನ್ನು ವಿತ್ತ ಸಚಿವರು ಮಂಡಿಸಿದ್ದಾರೆ'' ಎಂದು ಸಾಮಾಜಿಕ ಜಾಲತಾಣವಾದ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ವಿಜಯೇಂದ್ರ ಅಭಿನಂದನೆ: ''ಲೋಕಸಭೆಯಲ್ಲಿ ಇಂದು ಮಂಡಿಸಲಾದ 2024-25ನೇ ಸಾಲಿನ ಬಜೆಟ್​ನಲ್ಲಿ ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗಾಗಿ 1.48 ಲಕ್ಷ ಕೋಟಿ ಮೀಸಲಿಡುವುದಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪದ ವಿಕಸಿತ ಭಾರತದ ನಿರ್ಮಾಣಕ್ಕೆ ಉತ್ತಮ ಅಡಿಪಾಯ ಹಾಕಿದ್ದಾರೆ'' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.

''ದೇಶದ ಅರ್ಥ ವ್ಯವಸ್ಥೆಗೆ ಶರವೇಗ ನೀಡುವ ನಿಟ್ಟಿನಲ್ಲಿ ಘೋಷಿಸಿರುವ ಕಾರ್ಯಕ್ರಮಗಳು ಹಣದುಬ್ಬರವನ್ನು ನಿಯಂತ್ರಿಸಲಿದ್ದು, ಬಡತನ ನಿರ್ಮೂಲನೆ, ಗ್ರಾಮೀಣಾಭಿವೃದ್ಧಿಗೆ 2.66 ಲಕ್ಷ ಕೋಟಿ ರೂ ಮೀಸಲಿರಿಸಿ, ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ರೂ. ಅನುದಾನ ನೀಡುವ ಮೂಲಕ ರೈತರ ಏಳಿಗೆಗೆ, ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಲಾಗಿರುವುದು ರೈತರು ಹಾಗೂ ಸ್ತ್ರೀ ಕುಲದ ಬಗೆಗಿನ ಅದಮ್ಯ ವಿಶ್ವಾಸವನ್ನು ಸಂಕೇತಿಸಿದೆ. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ, ಪ್ರವಾಸೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳು ಹಾಗೂ ಉದ್ಯಮಗಳ ಬೆಳವಣಿಗೆಗೆ ವಿಶೇಷ ಒತ್ತು ನೀಡುವ ಮೂಲಕ ಯುವ ಸಮುದಾಯಕ್ಕೆ ಸ್ವಾವಲಂಬಿ ಹಾಗೂ ಉದ್ಯೋಗ ಸೃಷ್ಟಿಗೆ ಬೃಹತ್ ಪ್ರಮಾಣದಲ್ಲಿ ಉತ್ತೇಜನ ನೀಡಲು ಮನ್ನಣೆ ದೊರಕಿರುವುದು ನಿಜಕ್ಕೂ ಪ್ರಶಂಸನೀಯ ಹೆಜ್ಜೆಯಾಗಿದೆ'' ಎಂದಿದ್ದಾರೆ.

''ಅಂತೆಯೇ ಭಾರತದ ಆರ್ಥಿಕ ಸಂಪನ್ಮೂಲ ಕ್ರೋಢೀಕರಣ ಹೆಚ್ಚಿಸುವ ನಿಟ್ಟಿನಲ್ಲಿ ತೆರಿಗೆದಾರನಿಗೆ ಹೊರೆಯಾಗದಂತೆ ವಿತ್ತ ಸಚಿವರು ಎಚ್ಚರವಹಿಸಿ ಜಾಣ್ಮೆ ತೋರಿದ್ದಾರೆ. ಉಚಿತ ಪಡಿತರ ಯೋಜನೆ 2029 ರ ವರೆಗೆ ಮುಂದುವರೆಸಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ 5 ವರ್ಷ ವಿಸ್ತರಣೆ ಮಾಡುವ ಮೂಲಕ ಬಡವರ ಬಗೆಗಿನ ಕಾಳಜಿಯಲ್ಲಿ ರಾಜಿಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂಬ ಸಂದೇಶ ರವಾನಿಸಲಾಗಿದೆ. ಸತತ 7ನೇ ಬಾರಿಗೆ ಅತ್ಯುತ್ತಮ ಹಾಗೂ ಪ್ರಗತಿದಾಯಕ ಬಜೆಟ್ ಮಂಡಿಸಿ ದಾಖಲೆ ನಿರ್ಮಿಸಿದ ನಿರ್ಮಲಾ ಸೀತಾರಾಮನ್ ಅವರನ್ನು ರಾಜ್ಯದ ಜನತೆಯ ಪರವಾಗಿ ಅಭಿನಂದಿಸುವೆ'' ಎಂದು ಟ್ವೀಟ್ ಮಾಡಿದ್ದಾರೆ.

ಆರ್. ಅಶೋಕ್ ಮೆಚ್ಚುಗೆ: ''ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ 7ನೇ ಬಾರಿಗೆ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ 3.0 ವಿಕಸಿತ ಭಾರತ ಬಜೆಟ್ 2024-25 ರಲ್ಲಿ ಅನ್ನದಾತ, ಬಡವ, ಮಧ್ಯ ವರ್ಗ ಹಾಗೂ ಮಹಿಳೆ ಸೇರಿದಂತೆ ಈ 9 ಕ್ಷೇತ್ರಗಳಿಗೆ ಪ್ರಮುವಾಗಿ ಆದ್ಯತೆ ನೀಡಲಾಗಿದೆ. ಕೌಶಲ್ಯ, ನಿರುದ್ಯೋಗ, ಎಮ್ಎಸ್ಎಮ್ಇ ಕ್ಷೇತ್ರಗಳಿಗೂ ಒತ್ತು ನೀಡಲಾಗಿದೆ'' ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಎಕ್ಸ್ ಖಾತೆಯಲ್ಲಿ ಪೋಸ್ಟ್​ ಮಾಡಿದ್ದಾರೆ.

ಬಸವರಾಜ ಬೊಮ್ಮಾಯಿ ಅಭಿಪ್ರಾಯ: ''ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರದ ಬಜೆಟ್ ಭವಿಷ್ಯದ ಭಾರತದ ಯುವಕರ ಬಜೆಟ್‌ ಆಗಿದೆ'' ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಕೇಂದ್ರದ ಬಜೆಟ್ ನಂತರ ನವ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ''ಪಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಹತ್ತು ವರ್ಷದ ಆರ್ಥಿಕತೆಯ ಸುಧಾರಣೆಯಿಂದ ವಿಶ್ವದಲ್ಲಿಯೇ ಭಾರತ ಬೆಳೆಯುತ್ತಿರುವ ರಾಷ್ಟ್ರ ಎನ್ನುವುದನ್ನು ಈ ಬಜೆಟ್ ತೋರಿಸುತ್ತದೆ. ಹಣದುಬ್ಬರ ಸೀಮಿತಗೊಳಿಸಿರುವುದು, ಹೆಚ್ಚು ಜನರಿಗೆ ಕೆಲಸ ಕೊಡಿಸಿರುವುದು ಹತ್ತು ವರ್ಷದಲ್ಲಿ ಮಾಡಿರುವುದರ ಫಲವಾಗಿ ವಿಕಸಿತ ಭಾರತ ಮಾಡುವ ಹತ್ತು ವರ್ಷದ ಫಲವನ್ನು ಬರುವ ದಿನಗಳಲ್ಲಿ ಹೆಚ್ಚಿಗೆ ಮಾಡುವ ನಿಟ್ಟಿನಲ್ಲಿ ಅಭಿವೃದ್ಧಿ ಪರವಾದ ಬಜೆಟ್ ಇದಾಗಿದೆ'' ಎಂದು ಹೇಳಿದರು.

''ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1.5 ಲಕ್ಷ ಕೋಟಿ, ಉದ್ಯೋಗ, ಕೌಶಲ್ಯಾಬಿವೃದ್ಧಿಗೆ 1.5 ಲಕ್ಷ ಕೋಟಿ, ಮುದ್ರಾ ಯೋಜನೆಯಲ್ಲಿ ಸಾಲ ನೀಡುವ ಪ್ರಮಾಣವನ್ನು 10 ಲಕ್ಷದಿಂದ 20 ಲಕ್ಷಕ್ಕೆ ಹೆಚ್ಚಳ ಮಾಡಿರುವುದು, ಗ್ರಾಮೀಣಾಭಿವೃದ್ಧಿಗೆ 1 ಲಕ್ಷ ಕೋಟಿ, ಬಡವರಿಗೆ 3 ಕೋಟಿ ಮನೆ ಕೊಡುವುದು, ಕೃಷಿ ವಲಯಕ್ಕೆ ಬಹಳ ಒತ್ತು ಕೊಟ್ಟಿದ್ದು, ಕೃಷಿ ಉತ್ಪಾದನೆ ಹೆಚ್ಚಳ ಮತ್ತು ಸಂಸ್ಕರಣೆಗೆ ಆದ್ಯತೆ ನೀಡಿದ್ದಾರೆ'' ಎಂದು ತಿಳಿಸಿದರು.

ಇದನ್ನೂ ಓದಿ: ಕೇಂದ್ರ ಬಜೆಟ್​ 2024: ಯಾವ ವಸ್ತು ಏರಿಕೆ, ಯಾವುದು ಇಳಿಕೆ- ತಿಳಿಯಿರಿ - Union Budget 2024

ETV Bharat Logo

Copyright © 2024 Ushodaya Enterprises Pvt. Ltd., All Rights Reserved.