ETV Bharat / state

ಹಾಸನ: ಮುಖದ ಮೇಲೆ ಕಲ್ಲು ಎತ್ತಿಹಾಕಿ ಅಪರಿಚಿತ ಮಹಿಳೆಯ ಭೀಕರ ಕೊಲೆ - UNKNOWN WOMAN BODY FOUND

ಹಾಸನ ನಗರದಲ್ಲಿ ರೈಲ್ವೆ ಇಲಾಖೆಯ ನಿರ್ಮಾಣ ಹಂತದ ಕಟ್ಟಡದೊಳಗೆ ಮಹಿಳೆಯ ಮೃತದೇಹ ಪತ್ತೆಯಾಗಿದೆ.

UNIDENTIFIED WOMAN BODY FOUND
ಘಟನಾ ಸ್ಥಳದಲ್ಲಿ ಪೊಲೀಸರಿಂದ ಪರಿಶೀಲನೆ (ETV Bharat)
author img

By ETV Bharat Karnataka Team

Published : Feb 13, 2025, 5:30 PM IST

ಹಾಸನ: ಅಪರಿಚಿತ ಮಹಿಳೆ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ರೈಲ್ವೆ ನಿಲ್ದಾಣದ ಸಮೀಪ ನಿರ್ಮಾಣ ಹಂತದ ಕಟ್ಟಡದಲ್ಲಿ ನಡೆದಿದೆ.

ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಸುಮಾರು 40 ವರ್ಷ ವಯಸ್ಸಿನ ಮಹಿಳೆಯಾಗಿದ್ದಾರೆ. ರಾಜಘಟ್ಟದ ರೈಲು ನಿಲ್ದಾಣದ ಪಕ್ಕದಲ್ಲಿ ರೈಲ್ವೆ ಇಲಾಖೆಯ ಕಾಮಗಾರಿ ನಡೆಯುತ್ತಿದ್ದು, ಕಟ್ಟಡದ ಒಳಗಡೆ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಪ್ರಕರಣದ ಬಗ್ಗೆ ರೈಲ್ವೆ ಎಸ್​​​​ಪಿ ಸೌಮ್ಯಲತಾ ಮಾಹಿತಿ (ETV Bharat)

ಕೆಲಸಕ್ಕೆ ಬಂದ ಕಾರ್ಮಿಕರು ಕಾಮಗಾರಿ ನಡೆಯುತ್ತಿದ್ದ ಕಟ್ಟಡದ ಬಳಿ ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಯಾವುದೇ ಗುರುತು ಸಿಗಬಾರದು ಎಂಬ ಉದ್ದೇಶದಿಂದ ಉದ್ದೇಶದಿಂದ ಆಕೆಯ ಮುಖದ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ.

ಸ್ಥಳಕ್ಕೆ ಹಾಸನ ನಗರದ ಬಡಾವಣೆ ಠಾಣೆ ಪೊಲೀಸರು ಮತ್ತು ರೈಲ್ವೆ ಎಸ್​​​​ಪಿ ಸೌಮ್ಯಲತಾ ಮತ್ತು ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ರೈಲ್ವೆ ಎಸ್​​​​ಪಿ ಮಾಹಿತಿ: ''ರೈಲ್ವೆಯ ನಿರ್ಮಾಣ ಹಂತದ ಕಟ್ಟಡದಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಯಿತು. ಮುಖಕ್ಕೆ ಕಲ್ಲಿನಿಂದ ಜಜ್ಜಲಾಗಿದೆ. ಗುರುತು ಸಿಗಬಾರದೆಂದು ಹೀಗೆ ಮಾಡಲಾಗಿದೆ. ಮಹಿಳೆ ಯಾರೆಂಬುದು ಇನ್ನೂ ಗುರುತು ಪತ್ತೆಯಾಗಿಲ್ಲ. ನಿರ್ಮಾಣ ಹಂತದ ಕಾಮಗಾರಿ ಆಗಿರುವುದರಿಂದ ಯಾವುದೇ ಸೆಕ್ಯೂರಿಟಿ ಗಾರ್ಡ್​ಗಳು ಕಾರ್ಯ ನಿರ್ವಹಿಸುತ್ತಿರಲಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ'' ಎಂದು ರೈಲ್ವೆ ಎಸ್​​​​ಪಿ ಸೌಮ್ಯಲತಾ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಹಾಸನ: ಜಾನುವಾರು ಹುಡುಕಲು ಹೋದ ಮಹಿಳೆ ಕಾಡಾನೆ ದಾಳಿಗೆ ಬಲಿ

ಹಾಸನ: ಅಪರಿಚಿತ ಮಹಿಳೆ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ರೈಲ್ವೆ ನಿಲ್ದಾಣದ ಸಮೀಪ ನಿರ್ಮಾಣ ಹಂತದ ಕಟ್ಟಡದಲ್ಲಿ ನಡೆದಿದೆ.

ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಸುಮಾರು 40 ವರ್ಷ ವಯಸ್ಸಿನ ಮಹಿಳೆಯಾಗಿದ್ದಾರೆ. ರಾಜಘಟ್ಟದ ರೈಲು ನಿಲ್ದಾಣದ ಪಕ್ಕದಲ್ಲಿ ರೈಲ್ವೆ ಇಲಾಖೆಯ ಕಾಮಗಾರಿ ನಡೆಯುತ್ತಿದ್ದು, ಕಟ್ಟಡದ ಒಳಗಡೆ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಪ್ರಕರಣದ ಬಗ್ಗೆ ರೈಲ್ವೆ ಎಸ್​​​​ಪಿ ಸೌಮ್ಯಲತಾ ಮಾಹಿತಿ (ETV Bharat)

ಕೆಲಸಕ್ಕೆ ಬಂದ ಕಾರ್ಮಿಕರು ಕಾಮಗಾರಿ ನಡೆಯುತ್ತಿದ್ದ ಕಟ್ಟಡದ ಬಳಿ ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಯಾವುದೇ ಗುರುತು ಸಿಗಬಾರದು ಎಂಬ ಉದ್ದೇಶದಿಂದ ಉದ್ದೇಶದಿಂದ ಆಕೆಯ ಮುಖದ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ.

ಸ್ಥಳಕ್ಕೆ ಹಾಸನ ನಗರದ ಬಡಾವಣೆ ಠಾಣೆ ಪೊಲೀಸರು ಮತ್ತು ರೈಲ್ವೆ ಎಸ್​​​​ಪಿ ಸೌಮ್ಯಲತಾ ಮತ್ತು ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ರೈಲ್ವೆ ಎಸ್​​​​ಪಿ ಮಾಹಿತಿ: ''ರೈಲ್ವೆಯ ನಿರ್ಮಾಣ ಹಂತದ ಕಟ್ಟಡದಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಯಿತು. ಮುಖಕ್ಕೆ ಕಲ್ಲಿನಿಂದ ಜಜ್ಜಲಾಗಿದೆ. ಗುರುತು ಸಿಗಬಾರದೆಂದು ಹೀಗೆ ಮಾಡಲಾಗಿದೆ. ಮಹಿಳೆ ಯಾರೆಂಬುದು ಇನ್ನೂ ಗುರುತು ಪತ್ತೆಯಾಗಿಲ್ಲ. ನಿರ್ಮಾಣ ಹಂತದ ಕಾಮಗಾರಿ ಆಗಿರುವುದರಿಂದ ಯಾವುದೇ ಸೆಕ್ಯೂರಿಟಿ ಗಾರ್ಡ್​ಗಳು ಕಾರ್ಯ ನಿರ್ವಹಿಸುತ್ತಿರಲಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ'' ಎಂದು ರೈಲ್ವೆ ಎಸ್​​​​ಪಿ ಸೌಮ್ಯಲತಾ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಹಾಸನ: ಜಾನುವಾರು ಹುಡುಕಲು ಹೋದ ಮಹಿಳೆ ಕಾಡಾನೆ ದಾಳಿಗೆ ಬಲಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.