ETV Bharat / state

ಉತ್ತರ ಕನ್ನಡದಲ್ಲಿ ವರ್ಕೌಟ್ ಆಗದ ಕಾಂಗ್ರೆಸ್ ಪ್ಲ್ಯಾನ್: ಮೊದಲ ಯತ್ನದಲ್ಲೇ ಕಾಗೇರಿಗೆ ದಾಖಲೆಯ ಗೆಲುವು - Vishveshwara Hegade Kageri

ಉತ್ತರ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಮೂರು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಕಾಂಗ್ರೆಸ್​ ಅಭ್ಯರ್ಥಿಯನ್ನು ಸೋಲಿಸಿದ್ದಾರೆ.

author img

By ETV Bharat Karnataka Team

Published : Jun 4, 2024, 7:53 PM IST

Updated : Jun 4, 2024, 8:05 PM IST

ವಿಶ್ವೇಶ್ವರ ಹೆಗಡೆ ಕಾಗೇರಿ
ವಿಶ್ವೇಶ್ವರ ಹೆಗಡೆ ಕಾಗೇರಿ (ETV Bharat)
ವಿಶ್ವೇಶ್ವರ ಹೆಗಡೆ ಕಾಗೇರಿ (ETV Bharat)

ಕಾರವಾರ: ಬಿಜೆಪಿ ಭದ್ರಕೋಟೆ ಉತ್ತರ ಕನ್ನಡ ಕ್ಷೇತ್ರದಲ್ಲಿ ಮತ್ತೆ ಕಮಲ ಅರಳಿದೆ. ಈ ಬಾರಿ ಸೋಲಿಲ್ಲದ ಸರದಾರನಾಗಿದ್ದ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ಕೈ ತಪ್ಪಿದ್ದು ಬಿಜೆಪಿ ಸೋಲಿಗೆ ಕಾರಣವಾಗಲಿದೆ ಎನ್ನಲಾಗಿತ್ತು. ಆದರೆ ವಿಶ್ವೇಶ್ವರ ಹೆಗಡೆ ಕಾಗೇರಿ 3 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ.

ಉತ್ತರ ಕನ್ನಡ ಕ್ಷೇತ್ರವನ್ನು ಬಿಜೆಪಿಯ ಭದ್ರಕೋಟೆ ಎಂದೇ ಕರೆಯಲಾಗುತ್ತದೆ. ಅನಂತ್ ಕುಮಾರ್ ಹೆಗಡೆ ಈ ಕ್ಷೇತ್ರದಿಂದ 6 ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಈ ಬಾರಿ ಹೆಗಡೆಗೆ ಟಿಕೆಟ್ ನೀಡದೆ, ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಮಣೆ ಹಾಕಲಾಗಿತ್ತು. ಕ್ಷೇತ್ರದಲ್ಲಿ ಹೆಗಡೆ ತನ್ನದೇ ಆದ ಹಿಡಿತ ಇಟ್ಟುಕೊಂಡಿದ್ದು, ಈ ಬಾರಿ ಅವರಿಗೆ ಟಿಕೆಟ್ ಕೊಡದೇ ಇರುವುದು ದೊಡ್ಡ ಹಿನ್ನಡೆಗೆ ಕಾರಣವಾಗಲಿದೆ ಎಂದು ಹೇಳಲಾಗುತ್ತಿತ್ತು. ಆದರೆ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ವಿರುದ್ಧ ಕಾಗೇರಿ ಭರ್ಜರಿ ಗೆಲುವು ಪಡೆದಿದ್ದಾರೆ.

ಕಾಗೇರಿಗೆ ದಾಖಲೆಯ ಗೆಲುವು: ಮೊದಲ ಸುತ್ತಿನಿಂದಲೇ ಗೆಲುವಿನ ಅಂತರ ಏರಿಸಿಕೊಂಡು ಹೊರಟ ಕಾಗೇರಿ ಅಂತಿಮವಾಗಿ 7,82,495 ಮತಗಳನ್ನು ಪಡೆಯುವ ಮೂಲಕ ಗೆದ್ದು ಬೀಗಿದರು. ಡಾ.ಅಂಜಲಿ ನಿಂಬಾಳ್ಕರ್ 4,45,067 ಮತಗಳನ್ನು ಪಡೆಯುವ ಮೂಲಕ ಸೋಲುಂಡಿದ್ದಾರೆ. ಸುಮಾರು 3,37,428 ಲಕ್ಷ ಮತಗಳ ಅಂತರದಲ್ಲಿ ಕಾಗೇರಿ ಗೆಲುವು ಪಡೆದಿದ್ದು, ಈ ಮೂಲಕ ರಾಜ್ಯದಲ್ಲೇ ಅತೀ ಹೆಚ್ಚು ಮತಗಳ ಅಂತರದಲ್ಲಿ ಗೆಲುವು ಪಡೆದ ಕೀರ್ತಿಗೆ ಪಾತ್ರರಾಗಿದ್ದಾರೆ.

'ಬಿಜೆಪಿ ವ್ಯಕ್ತಿ ಆಧರಿತ ಪಕ್ಷ ಅಲ್ಲ ಎಂಬುದು ಸಾಬೀತು': ಗೆಲುವಿನ ನಂತರ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, "ಉತ್ತರ ಕನ್ನಡ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸದಿಂದ ಕೆಲಸ ಮಾಡಿದ್ದೆವು. ಅದರ ಪರಿಣಾಮ ರಾಜ್ಯದಲ್ಲೇ ದಾಖಲೆಯ ಮತಗಳ ಅಂತರದಿಂದ ನಾನು ಗೆಲ್ಲುವಂತಾಗಿದೆ. ಈ ಗೆಲುವಿಗೆ ಕಾರಣಕರ್ತರಾದ ಮತದಾರರಿಗೆ ಹೃದಯಪೂರ್ವಕ ಧನ್ಯವಾದ ಸಲ್ಲಿಸುತ್ತೇನೆ. ಅಭಿವೃದ್ಧಿಯ ವಿಷಯದಲ್ಲಿ ನಾನು ಕ್ಷೇತ್ರದ ಜನರೊಂದಿಗೆ ಇರುತ್ತೇನೆ. ಹಿಂದಿಗಿಂತಲೂ ಹೆಚ್ಚು ವೇಗವಾಗಿ ನಿಮ್ಮೆಲ್ಲರ ಸಹಕಾರದಿಂದ ಅಭಿವೃದ್ಧಿಗೆ ಪ್ರಯತ್ನಿಸುತ್ತೇನೆ. ಬಿಜೆಪಿ ವ್ಯಕ್ತಿ ಆಧರಿತ ಪಕ್ಷ ಅಲ್ಲ ಎಂಬುದನ್ನು ಕ್ಷೇತ್ರದ ಜನತೆ ತೋರಿಸಿ ಕೊಟ್ಟಿದ್ದಾರೆ" ಎಂದು ಹೇಳಿದರು.

ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಜಿಲ್ಲೆಯ ಜನ ಮತ್ತೆ ಕೈ ಹಿಡಿದು ಸಂಸದರನ್ನಾಗಿ ಮಾಡಿದ್ದು, ಈ ಮೂಲಕ ಜಿಲ್ಲೆಯ ರಾಜಕೀಯದಲ್ಲಿ ಸಾಕಷ್ಟು ಬದಲಾವಣೆಗಳಾಗಲಿವೆ ಎನ್ನುವುದು ಹಲವರ ಲೆಕ್ಕಾಚಾರ.

ಇದನ್ನೂ ಓದಿ: ಐತಿಹಾಸಿಕ ಗೆಲುವು ನನ್ನ ಕಾರ್ಯಕರ್ತರಿಗೆ ಸಮರ್ಪಣೆ: ಶ್ರೇಯಸ್ ಪಟೇಲ್ - Shreyas Patel

ವಿಶ್ವೇಶ್ವರ ಹೆಗಡೆ ಕಾಗೇರಿ (ETV Bharat)

ಕಾರವಾರ: ಬಿಜೆಪಿ ಭದ್ರಕೋಟೆ ಉತ್ತರ ಕನ್ನಡ ಕ್ಷೇತ್ರದಲ್ಲಿ ಮತ್ತೆ ಕಮಲ ಅರಳಿದೆ. ಈ ಬಾರಿ ಸೋಲಿಲ್ಲದ ಸರದಾರನಾಗಿದ್ದ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ಕೈ ತಪ್ಪಿದ್ದು ಬಿಜೆಪಿ ಸೋಲಿಗೆ ಕಾರಣವಾಗಲಿದೆ ಎನ್ನಲಾಗಿತ್ತು. ಆದರೆ ವಿಶ್ವೇಶ್ವರ ಹೆಗಡೆ ಕಾಗೇರಿ 3 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ.

ಉತ್ತರ ಕನ್ನಡ ಕ್ಷೇತ್ರವನ್ನು ಬಿಜೆಪಿಯ ಭದ್ರಕೋಟೆ ಎಂದೇ ಕರೆಯಲಾಗುತ್ತದೆ. ಅನಂತ್ ಕುಮಾರ್ ಹೆಗಡೆ ಈ ಕ್ಷೇತ್ರದಿಂದ 6 ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಈ ಬಾರಿ ಹೆಗಡೆಗೆ ಟಿಕೆಟ್ ನೀಡದೆ, ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಮಣೆ ಹಾಕಲಾಗಿತ್ತು. ಕ್ಷೇತ್ರದಲ್ಲಿ ಹೆಗಡೆ ತನ್ನದೇ ಆದ ಹಿಡಿತ ಇಟ್ಟುಕೊಂಡಿದ್ದು, ಈ ಬಾರಿ ಅವರಿಗೆ ಟಿಕೆಟ್ ಕೊಡದೇ ಇರುವುದು ದೊಡ್ಡ ಹಿನ್ನಡೆಗೆ ಕಾರಣವಾಗಲಿದೆ ಎಂದು ಹೇಳಲಾಗುತ್ತಿತ್ತು. ಆದರೆ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ವಿರುದ್ಧ ಕಾಗೇರಿ ಭರ್ಜರಿ ಗೆಲುವು ಪಡೆದಿದ್ದಾರೆ.

ಕಾಗೇರಿಗೆ ದಾಖಲೆಯ ಗೆಲುವು: ಮೊದಲ ಸುತ್ತಿನಿಂದಲೇ ಗೆಲುವಿನ ಅಂತರ ಏರಿಸಿಕೊಂಡು ಹೊರಟ ಕಾಗೇರಿ ಅಂತಿಮವಾಗಿ 7,82,495 ಮತಗಳನ್ನು ಪಡೆಯುವ ಮೂಲಕ ಗೆದ್ದು ಬೀಗಿದರು. ಡಾ.ಅಂಜಲಿ ನಿಂಬಾಳ್ಕರ್ 4,45,067 ಮತಗಳನ್ನು ಪಡೆಯುವ ಮೂಲಕ ಸೋಲುಂಡಿದ್ದಾರೆ. ಸುಮಾರು 3,37,428 ಲಕ್ಷ ಮತಗಳ ಅಂತರದಲ್ಲಿ ಕಾಗೇರಿ ಗೆಲುವು ಪಡೆದಿದ್ದು, ಈ ಮೂಲಕ ರಾಜ್ಯದಲ್ಲೇ ಅತೀ ಹೆಚ್ಚು ಮತಗಳ ಅಂತರದಲ್ಲಿ ಗೆಲುವು ಪಡೆದ ಕೀರ್ತಿಗೆ ಪಾತ್ರರಾಗಿದ್ದಾರೆ.

'ಬಿಜೆಪಿ ವ್ಯಕ್ತಿ ಆಧರಿತ ಪಕ್ಷ ಅಲ್ಲ ಎಂಬುದು ಸಾಬೀತು': ಗೆಲುವಿನ ನಂತರ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, "ಉತ್ತರ ಕನ್ನಡ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸದಿಂದ ಕೆಲಸ ಮಾಡಿದ್ದೆವು. ಅದರ ಪರಿಣಾಮ ರಾಜ್ಯದಲ್ಲೇ ದಾಖಲೆಯ ಮತಗಳ ಅಂತರದಿಂದ ನಾನು ಗೆಲ್ಲುವಂತಾಗಿದೆ. ಈ ಗೆಲುವಿಗೆ ಕಾರಣಕರ್ತರಾದ ಮತದಾರರಿಗೆ ಹೃದಯಪೂರ್ವಕ ಧನ್ಯವಾದ ಸಲ್ಲಿಸುತ್ತೇನೆ. ಅಭಿವೃದ್ಧಿಯ ವಿಷಯದಲ್ಲಿ ನಾನು ಕ್ಷೇತ್ರದ ಜನರೊಂದಿಗೆ ಇರುತ್ತೇನೆ. ಹಿಂದಿಗಿಂತಲೂ ಹೆಚ್ಚು ವೇಗವಾಗಿ ನಿಮ್ಮೆಲ್ಲರ ಸಹಕಾರದಿಂದ ಅಭಿವೃದ್ಧಿಗೆ ಪ್ರಯತ್ನಿಸುತ್ತೇನೆ. ಬಿಜೆಪಿ ವ್ಯಕ್ತಿ ಆಧರಿತ ಪಕ್ಷ ಅಲ್ಲ ಎಂಬುದನ್ನು ಕ್ಷೇತ್ರದ ಜನತೆ ತೋರಿಸಿ ಕೊಟ್ಟಿದ್ದಾರೆ" ಎಂದು ಹೇಳಿದರು.

ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಜಿಲ್ಲೆಯ ಜನ ಮತ್ತೆ ಕೈ ಹಿಡಿದು ಸಂಸದರನ್ನಾಗಿ ಮಾಡಿದ್ದು, ಈ ಮೂಲಕ ಜಿಲ್ಲೆಯ ರಾಜಕೀಯದಲ್ಲಿ ಸಾಕಷ್ಟು ಬದಲಾವಣೆಗಳಾಗಲಿವೆ ಎನ್ನುವುದು ಹಲವರ ಲೆಕ್ಕಾಚಾರ.

ಇದನ್ನೂ ಓದಿ: ಐತಿಹಾಸಿಕ ಗೆಲುವು ನನ್ನ ಕಾರ್ಯಕರ್ತರಿಗೆ ಸಮರ್ಪಣೆ: ಶ್ರೇಯಸ್ ಪಟೇಲ್ - Shreyas Patel

Last Updated : Jun 4, 2024, 8:05 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.