ETV Bharat / state

ವಾಲ್ಮೀಕಿ ನಿಗಮ ಹಗರಣ: ವೈನ್ ಶಾಪ್​, ಚಿನ್ನದಂಗಡಿ ಖಾತೆಗಳಿಗೆ ಹಣ ವರ್ಗಾಯಿಸಿಕೊಂಡು ನಗದೀಕರಿಸಿದ್ದ ಆರೋಪಿಗಳು - Valmiki Corporation Scam

author img

By ETV Bharat Karnataka Team

Published : Jun 14, 2024, 1:23 PM IST

ಪ್ರಕರಣದ ಆರೋಪಿಗಳಾದ ಸತ್ಯನಾರಾಯಣ ವರ್ಮಾ ಮತ್ತು ಚಂದ್ರಮೋಹನ್‌ ಎಂಬವರನ್ನು ಎಸ್​ಐಟಿ ವಿಚಾರಣೆಗೊಳಪಡಿಸಿದಾಗ ಈ ವಿಚಾರ ಬಯಲಾಗಿದೆ.

Vidhana Soudha
ವಿಧಾನಸೌಧ (ETV Bharat)

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮದಲ್ಲಿ 18 ನಕಲಿ ಖಾತೆಗಳಿಗೆ ವರ್ಗಾವಣೆಯಾಗಿದ್ದ 94.73 ಕೋಟಿ ರೂ. ಹಣವನ್ನು ಆರೋಪಿಗಳು ನಂತರ ಬಾರ್, ವೈನ್ ಶಾಪ್​, ಚಿನ್ನದ ಮಳಿಗೆಗಳು ಹಾಗೂ ಸಣ್ಣಸಣ್ಣ ಕಂಪನಿಗಳ ಖಾತೆಗಳಿಗೆ ವರ್ಗಾಯಿಸಿಕೊಂಡು ನಗದು ರೂಪದಲ್ಲಿ ಪಡೆದಿರುವುದು ಎಸ್ಐಟಿ ತನಿಖೆಯಲ್ಲಿ ಬಹಿರಂಗವಾಗಿದೆ.

ಪ್ರಕರಣದಲ್ಲಿ ಹೈದರಾಬಾದ್‌ನ ಫಸ್ಟ್ ಫೈನಾನ್ಸ್ ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ನಕಲಿ ಖಾತೆಗಳನ್ನು ತೆರೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸತ್ಯನಾರಾಯಣ ವರ್ಮಾ ಮತ್ತು ಚಂದ್ರಮೋಹನ್‌ ಎಂಬಾತನನ್ನು ಬಂಧಿಸಿದ್ದ ಎಸ್ಐಟಿ, ವಿಚಾರಣೆಗೊಳಪಡಿಸಿದಾಗ ಈ ವಿಚಾರ ಬಯಲಾಗಿದೆ. ಆರೋಪಿಗಳು ತೆರೆದಿದ್ದ 18 ನಕಲಿ ಖಾತೆಗಳಿಗೆ ವರ್ಗಾವಣೆಯಾಗಿದ್ದ ನಿಗಮದ ಹಣವನ್ನು ಹೈದರಾಬಾದ್ ಮತ್ತು ಬೆಂಗಳೂರಿನ ವೈನ್ ಶಾಪ್‌ಗಳು, ಬಾರ್‌ಗಳು, ಚಿನ್ನಾಭರಣ ಮಾರಾಟ ಮಳಿಗೆಗಳು ಹಾಗೂ ಸಣ್ಣ ಕಂಪನಿಗಳು ಸೇರಿದಂತೆ ನೂರಕ್ಕೂ ಅಧಿಕ ಖಾತೆಗಳಿಗೆ ವರ್ಗಾಯಿಸಿಕೊಂಡು ಬಳಿಕ ನಗದು ರೂಪದಲ್ಲಿ ಪಡೆದಿರುವುದು ತಿಳಿದು ಬಂದಿದೆ.

ಇನ್ನು ಸತ್ಯನಾರಾಯಣ ವರ್ಮಾಗೆ ಸಂಬಂಧಿಸಿದ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದ ಎಸ್ಐಟಿ, ಆತನ ಸಂಬಂಧಿಯೊಬ್ಬರ ಮನೆಯಲ್ಲಿ 4 ಸೂಟ್ ಕೇಸ್​ನಲ್ಲಿ ತುಂಬಿರಿಸಲಾಗಿದ್ದ 8.21 ಕೋಟಿ ರೂ. ಹಣ, ಆತನ ಐಷಾರಾಮಿ ಲ್ಯಾಂಬೋರ್ಗಿನಿ ಕಾರನ್ನು ಜಪ್ತಿ ಮಾಡಿದ್ದಾರೆ. ಒಟ್ಟಾರೆ ಇದುವರೆಗೂ 11.83 ಕೋಟಿ ರೂ. ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಇದನ್ನೂ ಓದಿ: ನಾಗೇಂದ್ರ ಬಲಿಪಶು, 80% ತಿಂದಿರುವ ಸಿದ್ದರಾಮಯ್ಯ & ಕಂಪನಿ ರಾಜೀನಾಮೆ ನೀಡಲಿ: ಅಶೋಕ್ - R Ashok

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮದಲ್ಲಿ 18 ನಕಲಿ ಖಾತೆಗಳಿಗೆ ವರ್ಗಾವಣೆಯಾಗಿದ್ದ 94.73 ಕೋಟಿ ರೂ. ಹಣವನ್ನು ಆರೋಪಿಗಳು ನಂತರ ಬಾರ್, ವೈನ್ ಶಾಪ್​, ಚಿನ್ನದ ಮಳಿಗೆಗಳು ಹಾಗೂ ಸಣ್ಣಸಣ್ಣ ಕಂಪನಿಗಳ ಖಾತೆಗಳಿಗೆ ವರ್ಗಾಯಿಸಿಕೊಂಡು ನಗದು ರೂಪದಲ್ಲಿ ಪಡೆದಿರುವುದು ಎಸ್ಐಟಿ ತನಿಖೆಯಲ್ಲಿ ಬಹಿರಂಗವಾಗಿದೆ.

ಪ್ರಕರಣದಲ್ಲಿ ಹೈದರಾಬಾದ್‌ನ ಫಸ್ಟ್ ಫೈನಾನ್ಸ್ ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ನಕಲಿ ಖಾತೆಗಳನ್ನು ತೆರೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸತ್ಯನಾರಾಯಣ ವರ್ಮಾ ಮತ್ತು ಚಂದ್ರಮೋಹನ್‌ ಎಂಬಾತನನ್ನು ಬಂಧಿಸಿದ್ದ ಎಸ್ಐಟಿ, ವಿಚಾರಣೆಗೊಳಪಡಿಸಿದಾಗ ಈ ವಿಚಾರ ಬಯಲಾಗಿದೆ. ಆರೋಪಿಗಳು ತೆರೆದಿದ್ದ 18 ನಕಲಿ ಖಾತೆಗಳಿಗೆ ವರ್ಗಾವಣೆಯಾಗಿದ್ದ ನಿಗಮದ ಹಣವನ್ನು ಹೈದರಾಬಾದ್ ಮತ್ತು ಬೆಂಗಳೂರಿನ ವೈನ್ ಶಾಪ್‌ಗಳು, ಬಾರ್‌ಗಳು, ಚಿನ್ನಾಭರಣ ಮಾರಾಟ ಮಳಿಗೆಗಳು ಹಾಗೂ ಸಣ್ಣ ಕಂಪನಿಗಳು ಸೇರಿದಂತೆ ನೂರಕ್ಕೂ ಅಧಿಕ ಖಾತೆಗಳಿಗೆ ವರ್ಗಾಯಿಸಿಕೊಂಡು ಬಳಿಕ ನಗದು ರೂಪದಲ್ಲಿ ಪಡೆದಿರುವುದು ತಿಳಿದು ಬಂದಿದೆ.

ಇನ್ನು ಸತ್ಯನಾರಾಯಣ ವರ್ಮಾಗೆ ಸಂಬಂಧಿಸಿದ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದ ಎಸ್ಐಟಿ, ಆತನ ಸಂಬಂಧಿಯೊಬ್ಬರ ಮನೆಯಲ್ಲಿ 4 ಸೂಟ್ ಕೇಸ್​ನಲ್ಲಿ ತುಂಬಿರಿಸಲಾಗಿದ್ದ 8.21 ಕೋಟಿ ರೂ. ಹಣ, ಆತನ ಐಷಾರಾಮಿ ಲ್ಯಾಂಬೋರ್ಗಿನಿ ಕಾರನ್ನು ಜಪ್ತಿ ಮಾಡಿದ್ದಾರೆ. ಒಟ್ಟಾರೆ ಇದುವರೆಗೂ 11.83 ಕೋಟಿ ರೂ. ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಇದನ್ನೂ ಓದಿ: ನಾಗೇಂದ್ರ ಬಲಿಪಶು, 80% ತಿಂದಿರುವ ಸಿದ್ದರಾಮಯ್ಯ & ಕಂಪನಿ ರಾಜೀನಾಮೆ ನೀಡಲಿ: ಅಶೋಕ್ - R Ashok

ETV Bharat Logo

Copyright © 2024 Ushodaya Enterprises Pvt. Ltd., All Rights Reserved.