ETV Bharat / state

ಧಾರವಾಡ: ಛತ್ರಿ ಹಿಡಿದು ಬಸ್ ಡ್ರೈವಿಂಗ್ ಮಾಡುವ ವಿಡಿಯೋ ವೈರಲ್​; ಚಾಲಕ, ನಿರ್ವಾಹಕಿ ಅಮಾನತು - Driver And Conductor suspension - DRIVER AND CONDUCTOR SUSPENSION

ಛತ್ರಿ ಹಿಡಿದು ಬಸ್ ಡ್ರೈವಿಂಗ್ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಸ್​ನ ಚಾಲಕ, ನಿರ್ವಾಹಕಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

DRIVING BUS WITH UMBRELLA  DHARWAD  DRIVER AND CONDUCTOR SUSPENSION
ಛತ್ರಿ ಹಿಡಿದು ಬಸ್ ಡ್ರೈವಿಂಗ್ ಮಾಡುವ ವಿಡಿಯೋ ವೈರಲ್ (ETV Bharat)
author img

By ETV Bharat Karnataka Team

Published : May 25, 2024, 12:16 PM IST

Updated : May 25, 2024, 12:32 PM IST

ಛತ್ರಿ ಹಿಡಿದು ಬಸ್ ಡ್ರೈವಿಂಗ್ ಮಾಡುವ ವಿಡಿಯೋ ವೈರಲ್ (ETV Bharat)

ಧಾರವಾಡ: ಬಸ್ ಚಾಲನೆ ಮಾಡುವಾಗ ಕೈಯಲ್ಲಿ ಛತ್ರಿ ಹಿಡಿದು ಚಾಲನೆ ಮಾಡಿದ್ದ ಚಾಲಕ ಮತ್ತು ಬಸ್​ನಲ್ಲಿದ್ದ ನಿರ್ವಾಹಕಿಯನ್ನು ಅಮಾನತುಗೊಳಿಸಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ವಾ.ಕ.ರ.ಸಾ.ಸಂ)ಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ ಆದೇಶ ಹೊರಡಿಸಿದ್ದಾರೆ.

ಚಾಲಕ ಹನುಮಂತಪ್ಪ ಕಿಲ್ಲೇದಾರ, ನಿರ್ವಾಹಕಿ ಅನಿತಾ ಹೆಚ್‌.ಬಿ. ಅಮಾನತುಗೊಂಡ ಸಾರಿಗೆ ಸಂಸ್ಥೆಯ ಸಿಬ್ಬಂದಿ. ಬಸ್ ಚಾಲನೆ ಮಾಡುವಾಗ ಮಳೆ ಸುರಿಯುವಾಗ ಛತ್ರಿ ಹಿಡಿದು ವಿಡಿಯೋ ಮಾಡಲಾಗಿದೆ. ನಂತರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು.

ಮನೋರಂಜನೆಗಾಗಿ ಈ ರೀತಿ ಮಾಡಿದ್ದಾಗಿ ಲಿಖಿತ ರೂಪದಲ್ಲಿ ಚಾಲಕ ಪತ್ರ ಬರೆದಿದ್ದರು. ಅಧಿಕಾರಿಗಳು ತಾಂತ್ರಿಕ ವಿಭಾಗದವರಿಂದ ವಾಹನ ಪರಿಶೀಲನೆ ನಡೆಸಿದ್ದರು. ಬಸ್‌ನಲ್ಲಿ ಎಲ್ಲಿಯೂ ಸೋರಿಕೆಯಾಗುತ್ತಿರಲಿಲ್ಲ ಎಂದು ಖಚಿತಗೊಂಡ ಹಿನ್ನೆಲೆ ಚಾಲಕ ಮತ್ತು ನಿರ್ವಾಹಕಿಯನ್ನು ಅಮಾನತು ಮಾಡಿ ಆದೇಶಿಸಿದ್ದಾರೆ. ಬಸ್ ಧಾರವಾಡ ತಾಲೂಕಿನ ‌ಉಪ್ಪಿನ ಬೆಟಗೇರಿ ಗ್ರಾಮದಿಂದ ಧಾರವಾಡಕ್ಕೆ ಬರುತ್ತಿತ್ತು.

ಇದನ್ನೂ ಓದಿ: ಅನಧಿಕೃತವಾಗಿ ಐಎಎಸ್ ಅಧಿಕಾರಿಯ ಸಿಡಿಆರ್ ಪಡೆದ ಆರೋಪ; ಮಾಜಿ ಐಪಿಎಸ್ ಅಧಿಕಾರಿ, ಇನ್ಸ್‌ಪೆಕ್ಟರ್ ವಿರುದ್ಧ ಎಫ್ಐಆರ್ - CDR Case

ಛತ್ರಿ ಹಿಡಿದು ಬಸ್ ಡ್ರೈವಿಂಗ್ ಮಾಡುವ ವಿಡಿಯೋ ವೈರಲ್ (ETV Bharat)

ಧಾರವಾಡ: ಬಸ್ ಚಾಲನೆ ಮಾಡುವಾಗ ಕೈಯಲ್ಲಿ ಛತ್ರಿ ಹಿಡಿದು ಚಾಲನೆ ಮಾಡಿದ್ದ ಚಾಲಕ ಮತ್ತು ಬಸ್​ನಲ್ಲಿದ್ದ ನಿರ್ವಾಹಕಿಯನ್ನು ಅಮಾನತುಗೊಳಿಸಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ವಾ.ಕ.ರ.ಸಾ.ಸಂ)ಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ ಆದೇಶ ಹೊರಡಿಸಿದ್ದಾರೆ.

ಚಾಲಕ ಹನುಮಂತಪ್ಪ ಕಿಲ್ಲೇದಾರ, ನಿರ್ವಾಹಕಿ ಅನಿತಾ ಹೆಚ್‌.ಬಿ. ಅಮಾನತುಗೊಂಡ ಸಾರಿಗೆ ಸಂಸ್ಥೆಯ ಸಿಬ್ಬಂದಿ. ಬಸ್ ಚಾಲನೆ ಮಾಡುವಾಗ ಮಳೆ ಸುರಿಯುವಾಗ ಛತ್ರಿ ಹಿಡಿದು ವಿಡಿಯೋ ಮಾಡಲಾಗಿದೆ. ನಂತರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು.

ಮನೋರಂಜನೆಗಾಗಿ ಈ ರೀತಿ ಮಾಡಿದ್ದಾಗಿ ಲಿಖಿತ ರೂಪದಲ್ಲಿ ಚಾಲಕ ಪತ್ರ ಬರೆದಿದ್ದರು. ಅಧಿಕಾರಿಗಳು ತಾಂತ್ರಿಕ ವಿಭಾಗದವರಿಂದ ವಾಹನ ಪರಿಶೀಲನೆ ನಡೆಸಿದ್ದರು. ಬಸ್‌ನಲ್ಲಿ ಎಲ್ಲಿಯೂ ಸೋರಿಕೆಯಾಗುತ್ತಿರಲಿಲ್ಲ ಎಂದು ಖಚಿತಗೊಂಡ ಹಿನ್ನೆಲೆ ಚಾಲಕ ಮತ್ತು ನಿರ್ವಾಹಕಿಯನ್ನು ಅಮಾನತು ಮಾಡಿ ಆದೇಶಿಸಿದ್ದಾರೆ. ಬಸ್ ಧಾರವಾಡ ತಾಲೂಕಿನ ‌ಉಪ್ಪಿನ ಬೆಟಗೇರಿ ಗ್ರಾಮದಿಂದ ಧಾರವಾಡಕ್ಕೆ ಬರುತ್ತಿತ್ತು.

ಇದನ್ನೂ ಓದಿ: ಅನಧಿಕೃತವಾಗಿ ಐಎಎಸ್ ಅಧಿಕಾರಿಯ ಸಿಡಿಆರ್ ಪಡೆದ ಆರೋಪ; ಮಾಜಿ ಐಪಿಎಸ್ ಅಧಿಕಾರಿ, ಇನ್ಸ್‌ಪೆಕ್ಟರ್ ವಿರುದ್ಧ ಎಫ್ಐಆರ್ - CDR Case

Last Updated : May 25, 2024, 12:32 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.