ETV Bharat / state

ಗಣೇಶೋತ್ಸವ-ಈದ್​​ ಮಿಲಾದ್​​ ಶಾಂತಿ ಸಭೆ: ವಿಜಯಪುರ ಪೊಲೀಸರಿಂದ ಖಡಕ್​​ ಎಚ್ಚರಿಕೆ - Ganesh Utsav Eid Milad Meeting

author img

By ETV Bharat Karnataka Team

Published : Sep 1, 2024, 12:21 PM IST

ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳನ್ನು ಶಾಂತಿ, ಸೌಹಾರ್ದತೆಯಿಂದ ನಡೆಸಬೇಕೆಂದು ವಿಜಯಪುರ ಜಿಲ್ಲಾಧಿಕಾರಿ ಹಾಗೂ ಪೊಲೀಸ್​ ಅಧಿಕಾರಿಗಳು ಸಾರ್ವಜನಿಕರಿಗೆ ಸೂಚಿಸಿದ್ದಾರೆ.

ಗಣೇಶೋತ್ಸವ-ಈದ್​​ ಮಿಲಾದ್​​ ಶಾಂತಿ ಸಭೆ
ಗಣೇಶೋತ್ಸವ-ಈದ್​​ ಮಿಲಾದ್​​ ಶಾಂತಿ ಸಭೆ (ETV Bharat)
ಗಣೇಶೋತ್ಸವ-ಈದ್​​ ಮಿಲಾದ್​​ ಶಾಂತಿ ಸಭೆ (ETV Bharat)

ವಿಜಯಪುರ: ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಶನಿವಾರ ಜಿಲ್ಲಾಧಿಕಾರಿ ಹಾಗೂ ಎಸ್​ಪಿ ನೇತೃತ್ವದಲ್ಲಿ ಸಮಾಜದ ಮುಖಂಡರೊಂದಿಗೆ ಕೋಮು ಸೌಹಾರ್ದತೆಗಾಗಿ ಶಾಂತಿ ಸಭೆ ನಡೆಯಿತು. ಈ ಸಭೆಯಲ್ಲಿ ಸಮಾಜದ ಮುಖಂಡರ ಬೇಡಿಕೆಗಳನ್ನು ಆಲಿಸಿದ ಅಧಿಕಾರಿಗಳು, ಖಡಕ್ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ವಿಜಯಪುರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳ ಪ್ರಯುಕ್ತವಾಗಿ ಪೂರ್ವಭಾವಿ ಸಭೆ ನಡೆಯಿತು. ಹಿಂದೂ, ಮುಸ್ಲಿಂ ಸಮಾಜದ ಮುಖಂಡರುಗಳು ತಮ್ಮ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಗಣೇಶ ಮಂಡಳಿಗಳಿಗೆ ಉಚಿತ ವಿದ್ಯುತ್ ಸಂಪರ್ಕ ನೀಡಬೇಕು. ಗಣೇಶ ಪ್ರತಿಷ್ಠಾಪನೆ, ವಿಸರ್ಜನೆ ಮೆರವಣಿಗೆ ತೆರಳುವ ಮಾರ್ಗ ಸುಧಾರಣೆ ಮಾಡಬೇಕು ಎಂದು ಕಾರ್ಪೊರೇಟರ್ ಶಿವರುದ್ರಪ್ಪ ಬಾಗಲಕೋಟೆ ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಂಡರು. ಈ ಬಗ್ಗೆ ಪರಿಶೀಲಿಸುವುದಾಗಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.

ಬಳಿಕ ಪರಿಸರಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ಹಸಿರು ಪಟಾಕಿ, ಡಿಜೆ ಸೌಂಡ್ ಬಳಕೆಯ ನಿಷೇಧದ ಬಗ್ಗೆ ಗಣೇಶ ಮಂಡಳಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಶಾಂತಿ ಸೌಹಾರ್ದತೆಯಿಂದ ಗಣೇಶೋತ್ಸವ, ಈದ್​ ಮಿಲಾದ್​ ಹಬ್ಬಾಚರಣೆ ಮಾಡುವಂತೆ ಸೂಚಿಸಿದರು. ಹಬ್ಬದ ಸಂದರ್ಭದಲ್ಲಿ ಮದ್ಯ ಮಾರಾಟ ನಿಷೇಧಿಸಬೇಕು. ಹಿಂಬಾಗಿಲಿನಿಂದ ಮಾರಾಟಕ್ಕೆ ಕಡಿವಾಣ ಹಾಕಬೇಕು. ಹಾಗೆಯೇ ಬ್ಯಾನರ್​ ಅಳವಡಿಕೆಗೆ ಉಚಿತ ಅನುಮತಿ ಕೊಡಬೇಕೆಂದು ಮಂಡಳಿ ಸದಸ್ಯರು ಆಗ್ರಹಿಸಿದರು.

"ಸದ್ಯ ಗಣೇಶ ಮೂರ್ತಿ ವಿಸರ್ಜನೆಗೆ ತಾಜ್​ ಬಾವಡಿ ಬಳಿ ತಾತ್ಕಾಲಿಕ ಹೊಂಡ ನಿರ್ಮಿಸುತ್ತಿದ್ದು, ಮುಂದಿನ ದಿನಗಳಲ್ಲಿ ಶಾಶ್ವತ ಹೊಂಡ ನಿರ್ಮಾಣದ ಬಗ್ಗೆ ಮಹಾನಗರ ಪಾಲಿಕೆ ಕ್ರಮ ಕೈಗೊಳ್ಳಲಿದೆ. ಕಾನೂನು ಪಾಲನೆ ಜೊತೆಗೆ ಪೊಲೀಸರೊಂದಿಗೆ ಸಹಕರಿಸಿ ಹಬ್ಬಾಚರಣೆಗೆ ಮುಂದಾಗಿ" ಎಂದು‌ ಡಿಸಿ ತಿಳಿಸಿದ್ದಾರೆ.

ಹಬ್ಬಗಳ ಆಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಮನವಿ ಮಾಡಿಕೊಂಡಿರುವ ಪೊಲೀಸರು, ಕಾನೂನು ಸುವ್ಯವಸ್ಥೆಗೆ ಅಡ್ಡಿಯುಂಟು ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆಯನ್ನೂ ನೀಡಿದ್ದಾರೆ.

ಇದನ್ನೂ ಓದಿ: ಹಾವೇರಿಯ ಮಾರುಕಟ್ಟೆಗಳಲ್ಲಿ ದೇವಗಿರಿ ಗ್ರಾಮದ ಕಲಾವಿದರ ಗಣೇಶ ಮೂರ್ತಿಗಳ ಆಕರ್ಷಣೆ - Haveri Ganesh Chaturthi Preparation

ಗಣೇಶೋತ್ಸವ-ಈದ್​​ ಮಿಲಾದ್​​ ಶಾಂತಿ ಸಭೆ (ETV Bharat)

ವಿಜಯಪುರ: ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಶನಿವಾರ ಜಿಲ್ಲಾಧಿಕಾರಿ ಹಾಗೂ ಎಸ್​ಪಿ ನೇತೃತ್ವದಲ್ಲಿ ಸಮಾಜದ ಮುಖಂಡರೊಂದಿಗೆ ಕೋಮು ಸೌಹಾರ್ದತೆಗಾಗಿ ಶಾಂತಿ ಸಭೆ ನಡೆಯಿತು. ಈ ಸಭೆಯಲ್ಲಿ ಸಮಾಜದ ಮುಖಂಡರ ಬೇಡಿಕೆಗಳನ್ನು ಆಲಿಸಿದ ಅಧಿಕಾರಿಗಳು, ಖಡಕ್ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ವಿಜಯಪುರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳ ಪ್ರಯುಕ್ತವಾಗಿ ಪೂರ್ವಭಾವಿ ಸಭೆ ನಡೆಯಿತು. ಹಿಂದೂ, ಮುಸ್ಲಿಂ ಸಮಾಜದ ಮುಖಂಡರುಗಳು ತಮ್ಮ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಗಣೇಶ ಮಂಡಳಿಗಳಿಗೆ ಉಚಿತ ವಿದ್ಯುತ್ ಸಂಪರ್ಕ ನೀಡಬೇಕು. ಗಣೇಶ ಪ್ರತಿಷ್ಠಾಪನೆ, ವಿಸರ್ಜನೆ ಮೆರವಣಿಗೆ ತೆರಳುವ ಮಾರ್ಗ ಸುಧಾರಣೆ ಮಾಡಬೇಕು ಎಂದು ಕಾರ್ಪೊರೇಟರ್ ಶಿವರುದ್ರಪ್ಪ ಬಾಗಲಕೋಟೆ ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಂಡರು. ಈ ಬಗ್ಗೆ ಪರಿಶೀಲಿಸುವುದಾಗಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.

ಬಳಿಕ ಪರಿಸರಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ಹಸಿರು ಪಟಾಕಿ, ಡಿಜೆ ಸೌಂಡ್ ಬಳಕೆಯ ನಿಷೇಧದ ಬಗ್ಗೆ ಗಣೇಶ ಮಂಡಳಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಶಾಂತಿ ಸೌಹಾರ್ದತೆಯಿಂದ ಗಣೇಶೋತ್ಸವ, ಈದ್​ ಮಿಲಾದ್​ ಹಬ್ಬಾಚರಣೆ ಮಾಡುವಂತೆ ಸೂಚಿಸಿದರು. ಹಬ್ಬದ ಸಂದರ್ಭದಲ್ಲಿ ಮದ್ಯ ಮಾರಾಟ ನಿಷೇಧಿಸಬೇಕು. ಹಿಂಬಾಗಿಲಿನಿಂದ ಮಾರಾಟಕ್ಕೆ ಕಡಿವಾಣ ಹಾಕಬೇಕು. ಹಾಗೆಯೇ ಬ್ಯಾನರ್​ ಅಳವಡಿಕೆಗೆ ಉಚಿತ ಅನುಮತಿ ಕೊಡಬೇಕೆಂದು ಮಂಡಳಿ ಸದಸ್ಯರು ಆಗ್ರಹಿಸಿದರು.

"ಸದ್ಯ ಗಣೇಶ ಮೂರ್ತಿ ವಿಸರ್ಜನೆಗೆ ತಾಜ್​ ಬಾವಡಿ ಬಳಿ ತಾತ್ಕಾಲಿಕ ಹೊಂಡ ನಿರ್ಮಿಸುತ್ತಿದ್ದು, ಮುಂದಿನ ದಿನಗಳಲ್ಲಿ ಶಾಶ್ವತ ಹೊಂಡ ನಿರ್ಮಾಣದ ಬಗ್ಗೆ ಮಹಾನಗರ ಪಾಲಿಕೆ ಕ್ರಮ ಕೈಗೊಳ್ಳಲಿದೆ. ಕಾನೂನು ಪಾಲನೆ ಜೊತೆಗೆ ಪೊಲೀಸರೊಂದಿಗೆ ಸಹಕರಿಸಿ ಹಬ್ಬಾಚರಣೆಗೆ ಮುಂದಾಗಿ" ಎಂದು‌ ಡಿಸಿ ತಿಳಿಸಿದ್ದಾರೆ.

ಹಬ್ಬಗಳ ಆಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಮನವಿ ಮಾಡಿಕೊಂಡಿರುವ ಪೊಲೀಸರು, ಕಾನೂನು ಸುವ್ಯವಸ್ಥೆಗೆ ಅಡ್ಡಿಯುಂಟು ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆಯನ್ನೂ ನೀಡಿದ್ದಾರೆ.

ಇದನ್ನೂ ಓದಿ: ಹಾವೇರಿಯ ಮಾರುಕಟ್ಟೆಗಳಲ್ಲಿ ದೇವಗಿರಿ ಗ್ರಾಮದ ಕಲಾವಿದರ ಗಣೇಶ ಮೂರ್ತಿಗಳ ಆಕರ್ಷಣೆ - Haveri Ganesh Chaturthi Preparation

ETV Bharat Logo

Copyright © 2024 Ushodaya Enterprises Pvt. Ltd., All Rights Reserved.