ETV Bharat / state

ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆಗೆ ಆರಂಭದಲ್ಲೇ ವಿಘ್ನ: ಕೆಲ ಗ್ರಾಮಗಳಿಂದ ವಿರೋಧ - SEPARATE CORPORATION FOR DHARWAD

ಗ್ರಾಮಗಳಲ್ಲಿ ಶೇ.90ರಷ್ಟು ರೈತರೇ ಇರುವುದರಿಂದ ಪಾಲಿಕೆ ವ್ಯಾಪ್ತಿಗೆ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಪ್ರತ್ಯೇಕ ಪಾಲಿಕೆ ವಿರುದ್ಧ ಧಾರವಾಡ ಮಂದಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

THE VILLAGERS OPPOSE THE FORMATION OF A SEPARATE CORPORATION FOR DHARWAD
ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆಗೆ ಆರಂಭದಲ್ಲಿ ವಿಘ್ನ (ETV Bharat)
author img

By ETV Bharat Karnataka Team

Published : Feb 2, 2025, 1:26 PM IST

ಧಾರವಾಡ: ಸುದೀರ್ಘ ಹೋರಾಟದ ಫಲವಾಗಿ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ರಾಜ್ಯ ಸರ್ಕಾರ ಅಸ್ತು ಅಂದಿದೆ. ಇನ್ನೇನು ಕಾರ್ಯಾರಂಭಿಸಲು ಸಿದ್ಧತೆ ಮಾಡಿಕೊಳ್ಳಬೇಕು ಎನ್ನುವಷ್ಟರಲ್ಲಿ ಹೊಸ ಪಾಲಿಕೆ ಸೇರಲು ಕೆಲ ಗ್ರಾಮಸ್ಥರಿಂದ ವಿರೋಧ ವ್ಯಕ್ತವಾಗಿದೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 82 ವಾರ್ಡ್​ಗಳನ್ನು ವಿಂಗಡಿಸಿ, 26 ವಾರ್ಡ್​​ ಧಾರವಾಡಕ್ಕೆ ನೀಡಿ ಪ್ರತ್ಯೇಕ ಪಾಲಿಕೆ ಘೋಷಿಸಲಾಗಿದೆ. ಈ ಕುರಿತು ಸರ್ಕಾರ ಇತ್ತೀಚೆಗೆ ಗೆಜೆಟ್ ನೋಟಿಪಿಕೇಷನ್​ ಸಹ ಮಾಡಿದೆ. ಇದರ ನಡುವೆ ಧಾರವಾಡ ಸುತ್ತಮುತ್ತಲಿನ ಗ್ರಾಮಗಳನ್ನೂ ಹೊಸ ಪಾಲಿಕೆಗೆ ಸೇರಿಸಿ ಬಿಡುತ್ತಾರೆ ಎಂಬ ಗುಲ್ಲೆದ್ದಿದೆ. ಇದರಿಂದ ರೊಚ್ಚಿಗೆದ್ದಿರುವ ನರೇಂದ್ರ, ಮುಮ್ಮಿಗಟ್ಟಿ ಹಾಗೂ ಇತರೆ ಗ್ರಾಮಗಳ ಜನರು ಹೋರಾಟಕ್ಕೆ ಇಳಿದಿದ್ದಾರೆ.

ಚಕ್ಕಡಿ, ಟ್ರ್ಯಾಕ್ಟರ್​ಗಳ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಸಿದ ಗ್ರಾಮಸ್ಥರು (ETV Bharat)

ಚಕ್ಕಡಿ, ಟ್ರ್ಯಾಕ್ಟರ್​ಗಳ ಮೂಲಕ ಪ್ರತಿಭಟನಾ ಮೆರವಣಿಗೆಯೊಂದಿಗೆ ಧಾರವಾಡಕ್ಕೆ ಬಂದು, ಜಿಲ್ಲಾಧಿಕಾರಿ ಕಚೇರಿ ಎದುರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಗ್ರಾಮಗಳನ್ನು ಪಾಲಿಕೆ ವ್ಯಾಪ್ತಿಗೆ ತೆಗೆದುಕೊಳ್ಳಬೇಕೆಂದರೆ ಅಲ್ಲಿನ ರೈತರ ಸಂಖ್ಯೆ ಶೇ.50ಕ್ಕೂ ಕಡಿಮೆ ಇರಬೇಕು. ಆದರೆ ಈ ಗ್ರಾಮಗಳಲ್ಲಿ ಶೇ.90ರಷ್ಟು ರೈತರೇ ಇದಾರೆ. ಇಲ್ಲಿನ ಬಹುತೇಕ ಜಮೀನು ಕೃಷಿ ಆಧಾರಿತವಾಗಿದೆ. ಹೀಗಾಗಿ ನಿಯಮಗಳ ಪ್ರಕಾರ ನರೇಂದ್ರ ಗ್ರಾಮವನ್ನು ಪಾಲಿಕೆ ವ್ಯಾಪ್ತಿಗೆ ಸೇರಿಸಿಕೊಳ್ಳಲು ಬರೋದಿಲ್ಲ ಅನ್ನೋದು ಗ್ರಾಮಸ್ಥರ ವಾದ.

ಗ್ರಾಮಸ್ಥರ ಆಕ್ಷೇಪ ಹೀಗಿದೆ. (ETV Bharat)

ಒಂದು ವೇಳೆ ಈ ಉದ್ದೇಶಿತ ಪ್ರದೇಶಗಳು ಪಾಲಿಕೆ ವ್ಯಾಪ್ತಿಗೆ ಸೇರದೇ ಇದ್ದರೆ ತೆರಿಗೆ ಸಂಗ್ರಹವೇ ಹೊಸ ಪಾಲಿಕೆಗೆ ದೊಡ್ಡ ಪ್ರಶ್ನೆಯಾಗುತ್ತದೆ. ಹೀಗಾಗಿಯೇ ಸರ್ಕಾರಿ ಅಧಿಕಾರಿಗಳು ಅಕ್ಕಪಕ್ಕದ ಗ್ರಾಮಗಳನ್ನು ಸೇರಿಸಿಕೊಳ್ಳಲು ಪ್ಲ್ಯಾನ್​ ಮಾಡಿರಬಹುದು. ಆದರೆ ಈ ನಿರ್ಧಾರಕ್ಕೆ ಗ್ರಾಮಸ್ಥರಿಂದ ವಿರೋಧ ವ್ಯಕ್ತವಾಗುತ್ತಿದೆ. ನರೇಂದ್ರ ಮಾತ್ರವಲ್ಲ ಮನಸೂರ, ಮಮ್ಮಿಗಟ್ಟಿ ಭಾಗದ ಜನರು ಪಾಲಿಕೆಗೆ ಸೇರುತ್ತವೆ ಎಂಬ ಆತಂಕದಲ್ಲಿ ಆಕ್ಷೇಪ ಎತ್ತಿದ್ದಾರೆ.

THE VILLAGERS OPPOSE THE FORMATION OF A SEPARATE CORPORATION FOR DHARWAD
ಚಕ್ಕಡಿ, ಟ್ರ್ಯಾಕ್ಟರ್​ಗಳ ಮೂಲಕ ಪ್ರತಿಭಟನಾ ಮೆರವಣಿಗೆ (ETV Bharat)

ಹಲವು ದಶಕಗಳ ಹೋರಾಟದ ಫಲವಾಗಿ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಸಿಕ್ಕಿದೆ. ಆದರೆ ಆರಂಭದಲ್ಲಿಯೇ ವಿಘ್ನ ಎದುರಾಗುತ್ತಿದ್ದು, ಸರ್ಕಾರ ಮುಂದೇನು ಮಾಡುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ರಾಜ್ಯದ ಅತೀ ದೊಡ್ಡ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಉದಯ: ಇದರ ವಿಶೇಷತೆ ಹೀಗಿದೆ

ಧಾರವಾಡ: ಸುದೀರ್ಘ ಹೋರಾಟದ ಫಲವಾಗಿ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ರಾಜ್ಯ ಸರ್ಕಾರ ಅಸ್ತು ಅಂದಿದೆ. ಇನ್ನೇನು ಕಾರ್ಯಾರಂಭಿಸಲು ಸಿದ್ಧತೆ ಮಾಡಿಕೊಳ್ಳಬೇಕು ಎನ್ನುವಷ್ಟರಲ್ಲಿ ಹೊಸ ಪಾಲಿಕೆ ಸೇರಲು ಕೆಲ ಗ್ರಾಮಸ್ಥರಿಂದ ವಿರೋಧ ವ್ಯಕ್ತವಾಗಿದೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 82 ವಾರ್ಡ್​ಗಳನ್ನು ವಿಂಗಡಿಸಿ, 26 ವಾರ್ಡ್​​ ಧಾರವಾಡಕ್ಕೆ ನೀಡಿ ಪ್ರತ್ಯೇಕ ಪಾಲಿಕೆ ಘೋಷಿಸಲಾಗಿದೆ. ಈ ಕುರಿತು ಸರ್ಕಾರ ಇತ್ತೀಚೆಗೆ ಗೆಜೆಟ್ ನೋಟಿಪಿಕೇಷನ್​ ಸಹ ಮಾಡಿದೆ. ಇದರ ನಡುವೆ ಧಾರವಾಡ ಸುತ್ತಮುತ್ತಲಿನ ಗ್ರಾಮಗಳನ್ನೂ ಹೊಸ ಪಾಲಿಕೆಗೆ ಸೇರಿಸಿ ಬಿಡುತ್ತಾರೆ ಎಂಬ ಗುಲ್ಲೆದ್ದಿದೆ. ಇದರಿಂದ ರೊಚ್ಚಿಗೆದ್ದಿರುವ ನರೇಂದ್ರ, ಮುಮ್ಮಿಗಟ್ಟಿ ಹಾಗೂ ಇತರೆ ಗ್ರಾಮಗಳ ಜನರು ಹೋರಾಟಕ್ಕೆ ಇಳಿದಿದ್ದಾರೆ.

ಚಕ್ಕಡಿ, ಟ್ರ್ಯಾಕ್ಟರ್​ಗಳ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಸಿದ ಗ್ರಾಮಸ್ಥರು (ETV Bharat)

ಚಕ್ಕಡಿ, ಟ್ರ್ಯಾಕ್ಟರ್​ಗಳ ಮೂಲಕ ಪ್ರತಿಭಟನಾ ಮೆರವಣಿಗೆಯೊಂದಿಗೆ ಧಾರವಾಡಕ್ಕೆ ಬಂದು, ಜಿಲ್ಲಾಧಿಕಾರಿ ಕಚೇರಿ ಎದುರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಗ್ರಾಮಗಳನ್ನು ಪಾಲಿಕೆ ವ್ಯಾಪ್ತಿಗೆ ತೆಗೆದುಕೊಳ್ಳಬೇಕೆಂದರೆ ಅಲ್ಲಿನ ರೈತರ ಸಂಖ್ಯೆ ಶೇ.50ಕ್ಕೂ ಕಡಿಮೆ ಇರಬೇಕು. ಆದರೆ ಈ ಗ್ರಾಮಗಳಲ್ಲಿ ಶೇ.90ರಷ್ಟು ರೈತರೇ ಇದಾರೆ. ಇಲ್ಲಿನ ಬಹುತೇಕ ಜಮೀನು ಕೃಷಿ ಆಧಾರಿತವಾಗಿದೆ. ಹೀಗಾಗಿ ನಿಯಮಗಳ ಪ್ರಕಾರ ನರೇಂದ್ರ ಗ್ರಾಮವನ್ನು ಪಾಲಿಕೆ ವ್ಯಾಪ್ತಿಗೆ ಸೇರಿಸಿಕೊಳ್ಳಲು ಬರೋದಿಲ್ಲ ಅನ್ನೋದು ಗ್ರಾಮಸ್ಥರ ವಾದ.

ಗ್ರಾಮಸ್ಥರ ಆಕ್ಷೇಪ ಹೀಗಿದೆ. (ETV Bharat)

ಒಂದು ವೇಳೆ ಈ ಉದ್ದೇಶಿತ ಪ್ರದೇಶಗಳು ಪಾಲಿಕೆ ವ್ಯಾಪ್ತಿಗೆ ಸೇರದೇ ಇದ್ದರೆ ತೆರಿಗೆ ಸಂಗ್ರಹವೇ ಹೊಸ ಪಾಲಿಕೆಗೆ ದೊಡ್ಡ ಪ್ರಶ್ನೆಯಾಗುತ್ತದೆ. ಹೀಗಾಗಿಯೇ ಸರ್ಕಾರಿ ಅಧಿಕಾರಿಗಳು ಅಕ್ಕಪಕ್ಕದ ಗ್ರಾಮಗಳನ್ನು ಸೇರಿಸಿಕೊಳ್ಳಲು ಪ್ಲ್ಯಾನ್​ ಮಾಡಿರಬಹುದು. ಆದರೆ ಈ ನಿರ್ಧಾರಕ್ಕೆ ಗ್ರಾಮಸ್ಥರಿಂದ ವಿರೋಧ ವ್ಯಕ್ತವಾಗುತ್ತಿದೆ. ನರೇಂದ್ರ ಮಾತ್ರವಲ್ಲ ಮನಸೂರ, ಮಮ್ಮಿಗಟ್ಟಿ ಭಾಗದ ಜನರು ಪಾಲಿಕೆಗೆ ಸೇರುತ್ತವೆ ಎಂಬ ಆತಂಕದಲ್ಲಿ ಆಕ್ಷೇಪ ಎತ್ತಿದ್ದಾರೆ.

THE VILLAGERS OPPOSE THE FORMATION OF A SEPARATE CORPORATION FOR DHARWAD
ಚಕ್ಕಡಿ, ಟ್ರ್ಯಾಕ್ಟರ್​ಗಳ ಮೂಲಕ ಪ್ರತಿಭಟನಾ ಮೆರವಣಿಗೆ (ETV Bharat)

ಹಲವು ದಶಕಗಳ ಹೋರಾಟದ ಫಲವಾಗಿ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಸಿಕ್ಕಿದೆ. ಆದರೆ ಆರಂಭದಲ್ಲಿಯೇ ವಿಘ್ನ ಎದುರಾಗುತ್ತಿದ್ದು, ಸರ್ಕಾರ ಮುಂದೇನು ಮಾಡುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ರಾಜ್ಯದ ಅತೀ ದೊಡ್ಡ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಉದಯ: ಇದರ ವಿಶೇಷತೆ ಹೀಗಿದೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.