ETV Bharat / state

ಅಭಿವೃದ್ಧಿ ಕೆಲಸಗಳನ್ನು ಜನರ ಮುಂದೆ ಇಡುವುದರಲ್ಲಿ ತಪ್ಪೇನಿದೆ?: ಕಾಂಗ್ರೆಸ್​ಗೆ ಜೋಶಿ ಟಾಂಗ್ - Prahlad Joshi

author img

By ETV Bharat Karnataka Team

Published : Apr 5, 2024, 1:48 PM IST

ನಾವು ಮಾಡಿದ ಅಭಿವೃದ್ಧಿ ಕೆಲಸಗಳನ್ನು ಜನರ ಮುಂದೆ ಇಡೋದ್ರಲ್ಲಿ ತಪ್ಪೇನಿದೆ ಎಂದು ಹೇಳುವ ಮೂಲಕ ಪ್ರಹ್ಲಾದ್​ ಜೋಶಿ ಕಾಂಗ್ರೆಸ್​ಗೆ ಟಾಂಗ್ ಕೊಟ್ಟರು.

PRAHLAD JOSHI QUESTION TO CONGRESS  HUBLI  BABU JAGJIVAN RAM JAYANTI
ಬಾಬು ಜಗಜೀವನ ರಾಮ್ ಅವರ ಜಯಂತಿ ಆಚರಣೆ
ಕಾಂಗ್ರೆಸ್​ಗೆ ಜೋಶಿ ಟಾಂಗ್

ಹುಬ್ಬಳ್ಳಿ: ನಾವು ಮಾಡಿದ ಅಭಿವೃದ್ಧಿ ಕೆಲಸಗಳನ್ನು ಜನರ ಮುಂದೆ ಇಡೋದ್ರಲ್ಲಿ ತಪ್ಪೇನಿದೆ?. ಹಾಗಾದರೆ ಗ್ಯಾರಂಟಿ ಕೊಟ್ಟ ಮೇಲೆ ಕಾಂಗ್ರೆಸ್ ಏಕೆ ಪ್ರಚಾರ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನಿಸಿದರು. ನಗರದಲ್ಲಿಂದು ಮಾತನಾಡಿದ ಅವರು, ಲಾಡ್ ಅವರು ಮನಸ್ಸಿಗೆ ಬಂದ ರೀತಿಯಲ್ಲಿ ಮಾತನಾಡುತ್ತಾರೆ. ಮೇಲಿನಿಂದ ನಿರ್ದೇಶನ ಇರೋ ಕಾರಣಕ್ಕೆ ಹಾಗೇ ಮಾತನಾಡಿರಬೇಕು. ಕಾಂಗ್ರೆಸ್​ನವರು ಉದ್ರಿ ಭಾಗ್ಯಗಳ ಬಗ್ಗೆ ಪ್ರಚಾರ ಮಾಡಿದರೇ ನಡೆಯುತ್ತದೆಯೇ ಎಂದು ಅವರು ಪ್ರಶ್ನಿಸಿದರು.

ಕೋಲಾರದ ಅನ್ನ ಭಾಗ್ಯ ಬಗ್ಗೆ ಪ್ರಚಾರ ಮಾಡುತ್ತಾರೆ. ಕಾಂಗ್ರೆಸ್ ಒಂದು ಕಾಳು ಅಕ್ಕಿ ಕೊಡಲಾಗಿಲ್ಲ. ಕೇಂದ್ರದ ಅಕ್ಕಿಯನ್ನು ನಾವೇ ಕೊಟ್ಟಿದ್ದೇವೆ ಎಂದು ಹೇಳುತ್ತಾರೆ. ಮುದ್ರಾಂಕ ಶುಲ್ಕ, ವಾಹನ ತೆರಿಗೆ ಸೇರಿ ಎಲ್ಲ ಶುಲ್ಕ ಏರಿಕೆಯಾಗಿದೆ. ಉಚಿತ ಗ್ಯಾರಂಟಿ ಕೊಟ್ಟ ಮೇಲೆ ಪ್ರಚಾರ ಏಕೆ ಮಾಡುತ್ತೀರಾ. ನಾವೇನು ಕೆಲಸ ಮಾಡಿದ್ದೇವೆ ಎಂದು ಹೇಳುವುದು ಸಹಜ ಪ್ರಕ್ರಿಯೆ. ನಾವು ಅಭಿವೃದ್ಧಿ ನೀಡಿದ್ದರ ಬಗ್ಗೆ ಹೇಳುತ್ತಿದ್ದೇವೆ. ಕಾಂಗ್ರೆಸ್​​ನವರು ಕೊಡದೇ ಇರೋದರ ಬಗ್ಗೆ ಹೇಳುತ್ತಿದ್ದಾರೆ ಎಂದು ಹರಿಹಾಯ್ದರು.

PRAHLAD JOSHI QUESTION TO CONGRESS  HUBLI  BABU JAGJIVAN RAM JAYANTI
ಬಾಬು ಜಗಜೀವನ ರಾಮ್ ಅವರ ಜಯಂತಿ ಆಚರಣೆ

ನಾಲ್ಕು ಕೋಟಿ ಮನೆ ನಿರ್ಮಾಣ ಸುಳ್ಳು ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರಧಾನಮಂತ್ರಿ ಅವಾಸ್ ಯೋಜನೆ ಅಡಿ ಮನೆ ನಿರ್ಮಾಣವಾಗಿವೆ. ಲಾಡ್ ಅವರು ಹಳ್ಳಿಗೆ ಹೋಗಿಲ್ಲ. ಹಾಗಾಗಿ ಅವರಿಗೆ ಗೊತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. ಜೋಶಿ ಅವರು ಹುಬ್ಬಳ್ಳಿ ಇಂದಿರಾ ಗಾಜಿನ ಮನೆ ಅವರಣದಲ್ಲಿ ಬಾಬುಜಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಮರ್ಪಣೆ ಮಾಡಿದರು. ದೇಶದಲ್ಲಿ ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಧೀಮಂತ ನಾಯಕ ಬಾಬು ಜಗಜೀವನ ರಾಮ್ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಮರಿಸಿದರು.

ಭಾರತದ ಉಪ ಪ್ರಧಾನಮಂತ್ರಿ ಆಗಿದ್ದ ಬಾಬು ಜಗಜೀವನ ರಾಮ್ ಅವರ ಜಯಂತಿ ಆಚರಣೆ ಇಂದು ಅರ್ಥಪೂರ್ಣವಾಗಿದೆ. ದೀನ ದಲಿತರ ಮೇಲೆ ಅವರಿಗಿದ್ದ ಪ್ರೀತಿ, ಕಾಳಜಿ ಇಂದಿನ ಸಮಾಜಕ್ಕೆ ಮಾದರಿಯಾಗಿದೆ ಎಂದು ಜೋಶಿ ಪ್ರತಿಪಾದಿಸಿದರು. ಹಿಂದುಳಿದ ವರ್ಗಗಳ ಜನರ ಶ್ರೇಯೋಭಿವೃದ್ಧಿಗಾಗಿ ಜಗಜೀವನ ರಾಮ್ ಅವರು ಅವಿರತ ಹೋರಾಟ ನಡೆಸಿದರು. ಅಲ್ಲದೇ, ಹಸಿರು ಕ್ರಾಂತಿಯ ಹರಿಕಾರರಾಗಿ ಮೆರೆದರು. ಇವರ ವ್ಯಕ್ತಿತ್ವ ನಮ್ಮೆಲ್ಲರಿಗೂ ಆದರ್ಶಪ್ರಾಯವಾಗಿದೆ ಎಂದು ಸಚಿವ ಜೋಶಿ ಅಭಿಪ್ರಾಯಪಟ್ಟರು.

ಸ್ವಾತಂತ್ರ್ಯ ಹೋರಾಟಗಾರರಾಗಿ, ಭಾರತದ ಉಪ ಪ್ರಧಾನಿಯಾಗಿ, ಹಿಂದುಳಿದ ವರ್ಗದ ನೇತಾರರಾಗಿ, ಹಸಿರು ಕ್ರಾಂತಿಯ ಹರಿಕಾರರಾಗಿ ಅವರು ನಿರ್ವಹಿಸಿದ ಹೊಣೆಗಾರಿಕೆ, ಜವಾಬ್ದಾರಿ ನಿಜಕ್ಕೂ ಅವಿಸ್ಮರಣೀಯ ಮತ್ತು ಅಜರಾಮರ ಎಂದು ಜೋಶಿ ಸ್ಮರಿಸಿದರು.

ಓದಿ: ಚನ್ನಪಟ್ಟಣ ನಗರಸಭೆ ಅಧ್ಯಕ್ಷ ಸೇರಿ 9 ಸದಸ್ಯರು ಜೆಡಿಎಸ್​ ತೊರೆದು ಕಾಂಗ್ರೆಸ್​ ಸೇರ್ಪಡೆ - Join Congress from JDS

ಕಾಂಗ್ರೆಸ್​ಗೆ ಜೋಶಿ ಟಾಂಗ್

ಹುಬ್ಬಳ್ಳಿ: ನಾವು ಮಾಡಿದ ಅಭಿವೃದ್ಧಿ ಕೆಲಸಗಳನ್ನು ಜನರ ಮುಂದೆ ಇಡೋದ್ರಲ್ಲಿ ತಪ್ಪೇನಿದೆ?. ಹಾಗಾದರೆ ಗ್ಯಾರಂಟಿ ಕೊಟ್ಟ ಮೇಲೆ ಕಾಂಗ್ರೆಸ್ ಏಕೆ ಪ್ರಚಾರ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನಿಸಿದರು. ನಗರದಲ್ಲಿಂದು ಮಾತನಾಡಿದ ಅವರು, ಲಾಡ್ ಅವರು ಮನಸ್ಸಿಗೆ ಬಂದ ರೀತಿಯಲ್ಲಿ ಮಾತನಾಡುತ್ತಾರೆ. ಮೇಲಿನಿಂದ ನಿರ್ದೇಶನ ಇರೋ ಕಾರಣಕ್ಕೆ ಹಾಗೇ ಮಾತನಾಡಿರಬೇಕು. ಕಾಂಗ್ರೆಸ್​ನವರು ಉದ್ರಿ ಭಾಗ್ಯಗಳ ಬಗ್ಗೆ ಪ್ರಚಾರ ಮಾಡಿದರೇ ನಡೆಯುತ್ತದೆಯೇ ಎಂದು ಅವರು ಪ್ರಶ್ನಿಸಿದರು.

ಕೋಲಾರದ ಅನ್ನ ಭಾಗ್ಯ ಬಗ್ಗೆ ಪ್ರಚಾರ ಮಾಡುತ್ತಾರೆ. ಕಾಂಗ್ರೆಸ್ ಒಂದು ಕಾಳು ಅಕ್ಕಿ ಕೊಡಲಾಗಿಲ್ಲ. ಕೇಂದ್ರದ ಅಕ್ಕಿಯನ್ನು ನಾವೇ ಕೊಟ್ಟಿದ್ದೇವೆ ಎಂದು ಹೇಳುತ್ತಾರೆ. ಮುದ್ರಾಂಕ ಶುಲ್ಕ, ವಾಹನ ತೆರಿಗೆ ಸೇರಿ ಎಲ್ಲ ಶುಲ್ಕ ಏರಿಕೆಯಾಗಿದೆ. ಉಚಿತ ಗ್ಯಾರಂಟಿ ಕೊಟ್ಟ ಮೇಲೆ ಪ್ರಚಾರ ಏಕೆ ಮಾಡುತ್ತೀರಾ. ನಾವೇನು ಕೆಲಸ ಮಾಡಿದ್ದೇವೆ ಎಂದು ಹೇಳುವುದು ಸಹಜ ಪ್ರಕ್ರಿಯೆ. ನಾವು ಅಭಿವೃದ್ಧಿ ನೀಡಿದ್ದರ ಬಗ್ಗೆ ಹೇಳುತ್ತಿದ್ದೇವೆ. ಕಾಂಗ್ರೆಸ್​​ನವರು ಕೊಡದೇ ಇರೋದರ ಬಗ್ಗೆ ಹೇಳುತ್ತಿದ್ದಾರೆ ಎಂದು ಹರಿಹಾಯ್ದರು.

PRAHLAD JOSHI QUESTION TO CONGRESS  HUBLI  BABU JAGJIVAN RAM JAYANTI
ಬಾಬು ಜಗಜೀವನ ರಾಮ್ ಅವರ ಜಯಂತಿ ಆಚರಣೆ

ನಾಲ್ಕು ಕೋಟಿ ಮನೆ ನಿರ್ಮಾಣ ಸುಳ್ಳು ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರಧಾನಮಂತ್ರಿ ಅವಾಸ್ ಯೋಜನೆ ಅಡಿ ಮನೆ ನಿರ್ಮಾಣವಾಗಿವೆ. ಲಾಡ್ ಅವರು ಹಳ್ಳಿಗೆ ಹೋಗಿಲ್ಲ. ಹಾಗಾಗಿ ಅವರಿಗೆ ಗೊತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. ಜೋಶಿ ಅವರು ಹುಬ್ಬಳ್ಳಿ ಇಂದಿರಾ ಗಾಜಿನ ಮನೆ ಅವರಣದಲ್ಲಿ ಬಾಬುಜಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಮರ್ಪಣೆ ಮಾಡಿದರು. ದೇಶದಲ್ಲಿ ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಧೀಮಂತ ನಾಯಕ ಬಾಬು ಜಗಜೀವನ ರಾಮ್ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಮರಿಸಿದರು.

ಭಾರತದ ಉಪ ಪ್ರಧಾನಮಂತ್ರಿ ಆಗಿದ್ದ ಬಾಬು ಜಗಜೀವನ ರಾಮ್ ಅವರ ಜಯಂತಿ ಆಚರಣೆ ಇಂದು ಅರ್ಥಪೂರ್ಣವಾಗಿದೆ. ದೀನ ದಲಿತರ ಮೇಲೆ ಅವರಿಗಿದ್ದ ಪ್ರೀತಿ, ಕಾಳಜಿ ಇಂದಿನ ಸಮಾಜಕ್ಕೆ ಮಾದರಿಯಾಗಿದೆ ಎಂದು ಜೋಶಿ ಪ್ರತಿಪಾದಿಸಿದರು. ಹಿಂದುಳಿದ ವರ್ಗಗಳ ಜನರ ಶ್ರೇಯೋಭಿವೃದ್ಧಿಗಾಗಿ ಜಗಜೀವನ ರಾಮ್ ಅವರು ಅವಿರತ ಹೋರಾಟ ನಡೆಸಿದರು. ಅಲ್ಲದೇ, ಹಸಿರು ಕ್ರಾಂತಿಯ ಹರಿಕಾರರಾಗಿ ಮೆರೆದರು. ಇವರ ವ್ಯಕ್ತಿತ್ವ ನಮ್ಮೆಲ್ಲರಿಗೂ ಆದರ್ಶಪ್ರಾಯವಾಗಿದೆ ಎಂದು ಸಚಿವ ಜೋಶಿ ಅಭಿಪ್ರಾಯಪಟ್ಟರು.

ಸ್ವಾತಂತ್ರ್ಯ ಹೋರಾಟಗಾರರಾಗಿ, ಭಾರತದ ಉಪ ಪ್ರಧಾನಿಯಾಗಿ, ಹಿಂದುಳಿದ ವರ್ಗದ ನೇತಾರರಾಗಿ, ಹಸಿರು ಕ್ರಾಂತಿಯ ಹರಿಕಾರರಾಗಿ ಅವರು ನಿರ್ವಹಿಸಿದ ಹೊಣೆಗಾರಿಕೆ, ಜವಾಬ್ದಾರಿ ನಿಜಕ್ಕೂ ಅವಿಸ್ಮರಣೀಯ ಮತ್ತು ಅಜರಾಮರ ಎಂದು ಜೋಶಿ ಸ್ಮರಿಸಿದರು.

ಓದಿ: ಚನ್ನಪಟ್ಟಣ ನಗರಸಭೆ ಅಧ್ಯಕ್ಷ ಸೇರಿ 9 ಸದಸ್ಯರು ಜೆಡಿಎಸ್​ ತೊರೆದು ಕಾಂಗ್ರೆಸ್​ ಸೇರ್ಪಡೆ - Join Congress from JDS

ETV Bharat Logo

Copyright © 2024 Ushodaya Enterprises Pvt. Ltd., All Rights Reserved.