ETV Bharat / state

'ಮತದಾರರ ನಿರ್ಧಾರವಿದು': ಗೆಲುವಿನ ಖುಷಿ ಹಂಚಿಕೊಂಡ ವಿ. ಸೋಮಣ್ಣ - V Somanna

author img

By ETV Bharat Karnataka Team

Published : Jun 4, 2024, 4:05 PM IST

ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಕಂಡ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

V Somanna
ವಿಜೇತ ಅಭ್ಯರ್ಥಿ ವಿ. ಸೋಮಣ್ಣ (ETV Bharat)

ವಿಜೇತ ಅಭ್ಯರ್ಥಿ ವಿ. ಸೋಮಣ್ಣ (ETV Bharat)

ತುಮಕೂರು: ಎರಡೂ ವಿಧಾನಸಭೆ ಚುನಾವಣೆಯಲ್ಲಿ ಸೋತ ನನಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಿಕೊಟ್ಟ ರಾಷ್ಟ್ರದ ನಾಯಕರು ಹಾಗೂ ಪಕ್ಷದ ಮುಖಂಡರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ವಿಜೇತ ಅಭ್ಯರ್ಥಿ ವಿ. ಸೋಮಣ್ಣ ತಿಳಿಸಿದ್ದಾರೆ.

ತೀವ್ರ ಕುತೂಹಲ ಮೂಡಿಸಿದ್ದ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿ. ಸೋಮಣ್ಣ ಗೆಲುವಿನ ನಗೆ ಬೀರಿದ್ದಾರೆ. ಕಾಂಗ್ರೆಸ್​ ಅಭ್ಯರ್ಥಿ ಎಸ್‌. ಪಿ ಮುದ್ದಹನುಮೇಗೌಡ ಅವರನ್ನು ಸತತವಾಗಿ ಹಿಂದಿಕ್ಕಿ, ಭರ್ಜರಿ ಗೆಲುವು ಕಂಡಿದ್ದಾರೆ.

ಫಲಿತಾಂಶದ ಬಳಿಕ ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವಕುಮಾರ್​​​ ಸ್ವಾಮೀಜಿ ಹಾಗೂ ಆದಿಚುಂಚನಗಿರಿಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಆಶೀರ್ವಾದದಿಂದ ಪುನಃ ರಾಜಕೀಯವಾಗಿ ಗೆಲುವು ಸಾಧಿಸಲು ಹಾಗೂ ಜನರ ಕೆಲಸ ಮಾಡಲು ಅವಕಾಶ ಸಿಕ್ಕಿದೆ ಎಂದು ತಿಳಿಸಿದರು.

ದೇಶದ ವ್ಯವಸ್ಥೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನಪರ ಕಾರ್ಯಕ್ರಮಗಳು ಹಾಗೂ ಈ ಹಿಂದಿನ ಸಂಸದ ಬಸವರಾಜ ಅವರ ಮಾರ್ಗದರ್ಶನದಲ್ಲಿ ಈ ಗೆಲುವು ಲಭಿಸಿದೆ. ರಾಜ್ಯದ ಜೆಡಿಎಸ್ ಹಾಗೂ ಬಿಜೆಪಿ ಎರಡೂ ಪಕ್ಷದ ಮುಖಂಡರಿಗೆ ಧನ್ಯವಾದ ಅರ್ಪಿಸುತ್ತೇನೆ. ಹೊರಗಿನವರು ಎಂದು ನನಗೆ ಚುನಾವಣೆ ಸಂದರ್ಭದಲ್ಲಿ ಹೇಳಿದ್ದು ಒಳ್ಳೆಯದೇ ಆಯಿತು. ಈ ರೀತಿ ಹೇಳಿದವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಮತದಾರರು ಅಂತಿಮವಾಗಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದರು.

ಇದನ್ನೂ ಓದಿ: ರಾಜವಂಶಸ್ಥನಿಗೆ ಒಲಿದ ಪ್ರಜಾಪ್ರಭುತ್ವದ ಅಧಿಕಾರ: ಮೈಸೂರು ಕ್ಷೇತ್ರದಲ್ಲಿ ಯದುವೀರ್ ಗೆಲುವು - Mysuru Loksabha Constituency

ಇಂಡಿಯಾ ಒಕ್ಕೂಟವು ನಡೆಸಿದ ಅಪಪ್ರಚಾರ ನಡುವೆಯೂ ಮೋದಿಯವರು ಪ್ರಧಾನಿಯಾಗಲಿದ್ದಾರೆ. ಸುಳ್ಳು ಕೂಡ ನಿಜವಾಗುತ್ತದೆ ಎಂಬುದಕ್ಕೆ ಮತದಾರರು ತಕ್ಕ ಉತ್ತರ ನೀಡಿದ್ದಾರೆ. ನನ್ನ ಕೆಲಸ ನೋಡಿ ತುಮಕೂರಿನ ಮತದಾರರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಮತದಾರರ ನಿರೀಕ್ಷೆಗೆ ತಕ್ಕಂತೆ ನಾನು ಕೆಲಸ ಮಾಡುತ್ತೇನೆ, ಅವರೊಂದಿಗೆ ಹೆಜ್ಜೆ ಹಾಕುತ್ತೇನೆ. ಜೆಡಿಎಸ್, ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನಿಜಕ್ಕೂ ಅಭಿನಂದನೆಗೆ ಅರ್ಹ ಎಂದು ಸೋಮಣ್ಣ ತಿಳಿಸಿದರು.

ವಿಜೇತ ಅಭ್ಯರ್ಥಿ ವಿ. ಸೋಮಣ್ಣ (ETV Bharat)

ತುಮಕೂರು: ಎರಡೂ ವಿಧಾನಸಭೆ ಚುನಾವಣೆಯಲ್ಲಿ ಸೋತ ನನಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಿಕೊಟ್ಟ ರಾಷ್ಟ್ರದ ನಾಯಕರು ಹಾಗೂ ಪಕ್ಷದ ಮುಖಂಡರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ವಿಜೇತ ಅಭ್ಯರ್ಥಿ ವಿ. ಸೋಮಣ್ಣ ತಿಳಿಸಿದ್ದಾರೆ.

ತೀವ್ರ ಕುತೂಹಲ ಮೂಡಿಸಿದ್ದ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿ. ಸೋಮಣ್ಣ ಗೆಲುವಿನ ನಗೆ ಬೀರಿದ್ದಾರೆ. ಕಾಂಗ್ರೆಸ್​ ಅಭ್ಯರ್ಥಿ ಎಸ್‌. ಪಿ ಮುದ್ದಹನುಮೇಗೌಡ ಅವರನ್ನು ಸತತವಾಗಿ ಹಿಂದಿಕ್ಕಿ, ಭರ್ಜರಿ ಗೆಲುವು ಕಂಡಿದ್ದಾರೆ.

ಫಲಿತಾಂಶದ ಬಳಿಕ ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವಕುಮಾರ್​​​ ಸ್ವಾಮೀಜಿ ಹಾಗೂ ಆದಿಚುಂಚನಗಿರಿಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಆಶೀರ್ವಾದದಿಂದ ಪುನಃ ರಾಜಕೀಯವಾಗಿ ಗೆಲುವು ಸಾಧಿಸಲು ಹಾಗೂ ಜನರ ಕೆಲಸ ಮಾಡಲು ಅವಕಾಶ ಸಿಕ್ಕಿದೆ ಎಂದು ತಿಳಿಸಿದರು.

ದೇಶದ ವ್ಯವಸ್ಥೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನಪರ ಕಾರ್ಯಕ್ರಮಗಳು ಹಾಗೂ ಈ ಹಿಂದಿನ ಸಂಸದ ಬಸವರಾಜ ಅವರ ಮಾರ್ಗದರ್ಶನದಲ್ಲಿ ಈ ಗೆಲುವು ಲಭಿಸಿದೆ. ರಾಜ್ಯದ ಜೆಡಿಎಸ್ ಹಾಗೂ ಬಿಜೆಪಿ ಎರಡೂ ಪಕ್ಷದ ಮುಖಂಡರಿಗೆ ಧನ್ಯವಾದ ಅರ್ಪಿಸುತ್ತೇನೆ. ಹೊರಗಿನವರು ಎಂದು ನನಗೆ ಚುನಾವಣೆ ಸಂದರ್ಭದಲ್ಲಿ ಹೇಳಿದ್ದು ಒಳ್ಳೆಯದೇ ಆಯಿತು. ಈ ರೀತಿ ಹೇಳಿದವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಮತದಾರರು ಅಂತಿಮವಾಗಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದರು.

ಇದನ್ನೂ ಓದಿ: ರಾಜವಂಶಸ್ಥನಿಗೆ ಒಲಿದ ಪ್ರಜಾಪ್ರಭುತ್ವದ ಅಧಿಕಾರ: ಮೈಸೂರು ಕ್ಷೇತ್ರದಲ್ಲಿ ಯದುವೀರ್ ಗೆಲುವು - Mysuru Loksabha Constituency

ಇಂಡಿಯಾ ಒಕ್ಕೂಟವು ನಡೆಸಿದ ಅಪಪ್ರಚಾರ ನಡುವೆಯೂ ಮೋದಿಯವರು ಪ್ರಧಾನಿಯಾಗಲಿದ್ದಾರೆ. ಸುಳ್ಳು ಕೂಡ ನಿಜವಾಗುತ್ತದೆ ಎಂಬುದಕ್ಕೆ ಮತದಾರರು ತಕ್ಕ ಉತ್ತರ ನೀಡಿದ್ದಾರೆ. ನನ್ನ ಕೆಲಸ ನೋಡಿ ತುಮಕೂರಿನ ಮತದಾರರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಮತದಾರರ ನಿರೀಕ್ಷೆಗೆ ತಕ್ಕಂತೆ ನಾನು ಕೆಲಸ ಮಾಡುತ್ತೇನೆ, ಅವರೊಂದಿಗೆ ಹೆಜ್ಜೆ ಹಾಕುತ್ತೇನೆ. ಜೆಡಿಎಸ್, ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನಿಜಕ್ಕೂ ಅಭಿನಂದನೆಗೆ ಅರ್ಹ ಎಂದು ಸೋಮಣ್ಣ ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.