ETV Bharat / state

ಸಾಲ ತೀರಿಸಲು ಮನೆ ಮಾಲಕಿಯ ಕತ್ತು ಹಿಸುಕಿ ಕೊಲೆ; ಬಾಡಿಗೆಗಿದ್ದ ಯುವತಿ ಬಂಧನ - House Owner Murder

author img

By ETV Bharat Karnataka Team

Published : May 15, 2024, 8:24 AM IST

ಬಾಡಿಗೆಗಿದ್ದ ಯುವತಿಯೋರ್ವಳು ಸಾಲ ತೀರಿಸಲು ಮನೆ ಮಾಲಕಿಯನ್ನೇ ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

HOUSE OWNER MURDER
ದಿವ್ಯ, ಮೋನಿಕಾ (ETV Bharat)

ಬೆಂಗಳೂರು: ಸಾಲ ತೀರಿಸಲು ಹಾಗೂ ಶೋಕಿ ಜೀವನ ನಡೆಸುವುದಕ್ಕಾಗಿ ವಾಸವಿದ್ದ ಮನೆಯ ಮಾಲಕಿಯನ್ನೇ ಕೊಂದು ಚಿನ್ನದ ಸರ ಕಿತ್ತುಕೊಂಡು ಮನೆಯಂಗಳದಲ್ಲೇ ಓಡಾಡುತ್ತಿದ್ದ ಆರೋಪದಡಿ ಯುವತಿಯನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೆಂಗೇರಿಯ ಕೊನಸಂದ್ರದಲ್ಲಿ ವಾಸವಾಗಿರುವ ಮೋನಿಕಾ (24) ಬಂಧಿತ ಆರೋಪಿ.

ಮೇ 10ರಂದು ಮನೆ ಮಾಲಕಿ ದಿವ್ಯಾ ಅವರನ್ನು ಹತ್ಯೆಗೈದ ಆರೋಪದ ಮೇಲೆ ಅವರ ಪತಿ ಗುರುಮೂರ್ತಿ ನೀಡಿದ ದೂರಿನಡಿ ಪ್ರಕರಣ ದಾಖಲಿಸಿಕೊಂಡು, ಆರೋಪಿತೆಯನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯಜಮಾನಿಯ ಒಡವೆ ಮೇಲೆ ಕಣ್ಣು: ಕೋಲಾರ ಮೂಲದ ಮೋನಿಕಾ ಎಸ್​ಎಸ್​ಎಲ್​ಸಿ ಓದಿದ್ದು, ಕಳೆದ‌‌ ಮೂರು ತಿಂಗಳಿಂದ ದಿವ್ಯಾ ಅವರ ಮನೆಯಲ್ಲಿ ಬಾಡಿಗೆಗೆ ಇದ್ದಳು. ಕಂಪೆನಿಯೊಂದರಲ್ಲಿ ಕಳೆದ ಒಂದು ವರ್ಷದಿಂದ ಡೇಟಾ ಎಂಟ್ರಿ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಕೆಲಸ ತೊರೆದಿದ್ದಳು. ಒಬ್ಬಂಟಿಯಾಗಿ ವಾಸವಾಗಿದ್ದ ಈಕೆ ವಿಪರೀತ ಕೈ ಸಾಲ ಮಾಡಿಕೊಂಡಿದ್ದಳು. ಯುವಕನ ಜೊತೆ ಸಲುಗೆ ಕೂಡ ಬೆಳೆಸಿಕೊಂಡಿದ್ದಳು‌.‌ ಯುವಕ ಆಗಾಗ ಮನೆಗೆ ಬಂದು ಹೋಗುತ್ತಿದ್ದ.

ಇತ್ತ ಕೋನಸಂದ್ರದಲ್ಲಿ ನಾಲ್ಕು ತಿಂಗಳ ಹಿಂದಷ್ಟೇ ಹೊಸದಾಗಿ ಗೃಹ ಪ್ರವೇಶ ಮಾಡಿದ್ದ ದಿವ್ಯಾ ಕುಟುಂಬ ವಾಸವಾಗಿತ್ತು. ಪತಿ ಗುರುಮೂರ್ತಿ, ಕೆಂಗೇರಿ ಉಪನಗರದ ಶಿವನಪಾಳ್ಯದಲ್ಲಿ ಸಲೂನ್ ಶಾಪ್ ನಡೆಸುತ್ತಿದ್ದರೆ, ದಿವ್ಯಾ ಗೃಹಿಣಿಯಾಗಿದ್ದರು. ದಿವ್ಯಾ ಮೈ‌‌ಮೇಲಿದ್ದ ಒಡವೆ ಮೇಲೆ ಮೋನಿಕಾಳ ಕಣ್ಣು ಬಿದ್ದಿತ್ತು. ಯುವತಿ ಜೊತೆ ಸಲುಗೆ ಬೆಳೆಸಿಕೊಂಡಿದ್ದ ಯುವಕ ಟಾಟಾ ಏಸ್​​ ವಾಹನ‌ ಖರೀದಿಗೆ ಹಣದ‌‌ ಮುಗ್ಗಟ್ಟು ಎದುರಿಸಿದ್ದ. ಜೊತೆಗೆ ಮೋನಿಕಾಗೂ ಸಾಲ ಒತ್ತಡ ಸೃಷ್ಟಿಸಿತ್ತು. ಮನೆ ಮಾಲೀಕರ ಚಲನವಲನ ಗಮನಿಸಿದ್ದ ಯುವತಿ, ಹತ್ಯೆಗೆ ಸಂಚು ರೂಪಿಸಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಕತ್ತು ಹಿಸುಕಿ ಕೊಲೆಗೈದ ಯುವತಿ: ಮೇ 10ರಂದು ಬೆಳಗ್ಗೆ ಮಾಲೀಕ ಗುರುಮೂರ್ತಿ ಎಂದಿನಂತೆ ಕೆಲಸಕ್ಕಾಗಿ ಮನೆ ತೊರೆದಿದ್ದರು. ಈ ವೇಳೆ‌ ದಿವ್ಯಾ‌ ಒಬ್ಬಂಟಿಯಾಗಿರುವುದನ್ನು ಅರಿತಿದ್ದ ಮೋನಿಕಾ, ಮನೆಯೊಳಗೆ ತೆರಳಿ ಮಾಲಕಿಯ ಕುತ್ತಿಗೆ ಬಿಗಿದು ಹತ್ಯೆ ಮಾಡಿದ್ದಾಳೆ. ಬಳಿಕ ಆಕೆಯ ಮೈಮೇಲಿದ್ದ 36 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಸುಮ್ಮನಾಗಿದ್ದಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕೆಲಸಕ್ಕೆ ಹೋದ ಕೆಲವೇ ಗಂಟೆಗಳಲ್ಲಿ ಗುರುಮೂರ್ತಿ ನಿರಂತರವಾಗಿ ಫೋನ್ ಮಾಡಿದರೂ ದಿವ್ಯಾ ಕರೆ ಸ್ವೀಕರಿಸದಿದ್ದರಿಂದ ಆತಂಕಕ್ಕೆ‌ ಒಳಗಾಗಿದ್ದ. ಏನೋ ಅಗಿರಬೇಕೆಂಬ ಭೀತಿಯಿಂದಲೇ‌ ಮನೆಗೆ ಬಂದು ನೋಡಿದಾಗ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ಕುತ್ತಿಗೆ ಮೇಲೆ ಗಾಯದ ಗುರುತು ಇರುವುದು ಹಾಗೂ ಚಿನ್ನದ‌ ಸರ ಇಲ್ಲದಿರುವುದನ್ನು ಕಂಡು ಪತ್ನಿಯನ್ನು ಯಾರೋ ಹತ್ಯೆ ಮಾಡಿದ್ದಾರೆಂದು ದೂರು ನೀಡಿದ್ದರು. ಅದರ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬಾಡಿಗೆಗಿದ್ದ ಯುವತಿಯನ್ನು ಬಂಧಿಸಿದ್ದಾರೆ.

ಹೊರಗಡೆ ಇದ್ದೇನೆ ಅಂದಿದ್ದ ಯುವತಿ: ಪತ್ನಿ ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಬಾಡಿಗೆಗಿದ್ದ ಯುವತಿಗೆ ಗುರುಮೂರ್ತಿ ಕರೆ‌ ಮಾಡಿದ್ದರು. ಈ ವೇಳೆ‌, 'ನಾನು ಹೊರಗಡೆ ಇದ್ದೇನೆ. ನನಗೆ ಗೊತ್ತಿಲ್ಲ' ಅಂದಿದ್ದಳು‌. ಕದ್ದ ಚಿನ್ನದ ಸರವನ್ನು ಅಂಗಡಿಯೊಂದರಲ್ಲಿ ಗಿರವಿ ಇಟ್ಟಿದ್ದಳು. ಅಲ್ಲದೇ, ಪೊಲೀಸರು ಬಂದು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂದು ತನಿಖೆ ಕೈಗೊಳ್ಳುವವರೆಗೂ ಯುವತಿ ಮನೆಯಲ್ಲೇ‌ ಇದ್ದರೂ ತಾನೇನೂ‌ ಮಾಡಿಲ್ಲವೆಂಬಂತೆ ನಟಿಸಿದ್ದಳು.

ತನಿಖೆ‌ ಕೈಗೊಂಡ ಇನ್ಸ್​ಪೆಕ್ಟರ್​ ಕೊಟ್ರೇಶಿ‌ ನೇತೃತ್ವದ ತಂಡವು ಅನುಮಾನದ ಮೇರೆಗೆ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದಾಗ ಆರೋಪಿ ಯುವತಿ ಸತ್ಯ ಸಂಗತಿ ಬಾಯ್ಬಿಟ್ಟಿದ್ದಾಳೆ. ಸದ್ಯ ಆರೋಪಿಯನ್ನು ಪೊಲೀಸ್ ವಶಕ್ಕೆ ಪಡೆದು, ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ರಾಮನಗರ: ಕಬ್ಬಿಣದ ರಾಡ್​ನಿಂಡ ಹೊಡೆದು ಪತ್ನಿ ಕೊಲೆ ಮಾಡಿದ ಪತಿ! - Husband Killed Wife

ಬೆಂಗಳೂರು: ಸಾಲ ತೀರಿಸಲು ಹಾಗೂ ಶೋಕಿ ಜೀವನ ನಡೆಸುವುದಕ್ಕಾಗಿ ವಾಸವಿದ್ದ ಮನೆಯ ಮಾಲಕಿಯನ್ನೇ ಕೊಂದು ಚಿನ್ನದ ಸರ ಕಿತ್ತುಕೊಂಡು ಮನೆಯಂಗಳದಲ್ಲೇ ಓಡಾಡುತ್ತಿದ್ದ ಆರೋಪದಡಿ ಯುವತಿಯನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೆಂಗೇರಿಯ ಕೊನಸಂದ್ರದಲ್ಲಿ ವಾಸವಾಗಿರುವ ಮೋನಿಕಾ (24) ಬಂಧಿತ ಆರೋಪಿ.

ಮೇ 10ರಂದು ಮನೆ ಮಾಲಕಿ ದಿವ್ಯಾ ಅವರನ್ನು ಹತ್ಯೆಗೈದ ಆರೋಪದ ಮೇಲೆ ಅವರ ಪತಿ ಗುರುಮೂರ್ತಿ ನೀಡಿದ ದೂರಿನಡಿ ಪ್ರಕರಣ ದಾಖಲಿಸಿಕೊಂಡು, ಆರೋಪಿತೆಯನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯಜಮಾನಿಯ ಒಡವೆ ಮೇಲೆ ಕಣ್ಣು: ಕೋಲಾರ ಮೂಲದ ಮೋನಿಕಾ ಎಸ್​ಎಸ್​ಎಲ್​ಸಿ ಓದಿದ್ದು, ಕಳೆದ‌‌ ಮೂರು ತಿಂಗಳಿಂದ ದಿವ್ಯಾ ಅವರ ಮನೆಯಲ್ಲಿ ಬಾಡಿಗೆಗೆ ಇದ್ದಳು. ಕಂಪೆನಿಯೊಂದರಲ್ಲಿ ಕಳೆದ ಒಂದು ವರ್ಷದಿಂದ ಡೇಟಾ ಎಂಟ್ರಿ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಕೆಲಸ ತೊರೆದಿದ್ದಳು. ಒಬ್ಬಂಟಿಯಾಗಿ ವಾಸವಾಗಿದ್ದ ಈಕೆ ವಿಪರೀತ ಕೈ ಸಾಲ ಮಾಡಿಕೊಂಡಿದ್ದಳು. ಯುವಕನ ಜೊತೆ ಸಲುಗೆ ಕೂಡ ಬೆಳೆಸಿಕೊಂಡಿದ್ದಳು‌.‌ ಯುವಕ ಆಗಾಗ ಮನೆಗೆ ಬಂದು ಹೋಗುತ್ತಿದ್ದ.

ಇತ್ತ ಕೋನಸಂದ್ರದಲ್ಲಿ ನಾಲ್ಕು ತಿಂಗಳ ಹಿಂದಷ್ಟೇ ಹೊಸದಾಗಿ ಗೃಹ ಪ್ರವೇಶ ಮಾಡಿದ್ದ ದಿವ್ಯಾ ಕುಟುಂಬ ವಾಸವಾಗಿತ್ತು. ಪತಿ ಗುರುಮೂರ್ತಿ, ಕೆಂಗೇರಿ ಉಪನಗರದ ಶಿವನಪಾಳ್ಯದಲ್ಲಿ ಸಲೂನ್ ಶಾಪ್ ನಡೆಸುತ್ತಿದ್ದರೆ, ದಿವ್ಯಾ ಗೃಹಿಣಿಯಾಗಿದ್ದರು. ದಿವ್ಯಾ ಮೈ‌‌ಮೇಲಿದ್ದ ಒಡವೆ ಮೇಲೆ ಮೋನಿಕಾಳ ಕಣ್ಣು ಬಿದ್ದಿತ್ತು. ಯುವತಿ ಜೊತೆ ಸಲುಗೆ ಬೆಳೆಸಿಕೊಂಡಿದ್ದ ಯುವಕ ಟಾಟಾ ಏಸ್​​ ವಾಹನ‌ ಖರೀದಿಗೆ ಹಣದ‌‌ ಮುಗ್ಗಟ್ಟು ಎದುರಿಸಿದ್ದ. ಜೊತೆಗೆ ಮೋನಿಕಾಗೂ ಸಾಲ ಒತ್ತಡ ಸೃಷ್ಟಿಸಿತ್ತು. ಮನೆ ಮಾಲೀಕರ ಚಲನವಲನ ಗಮನಿಸಿದ್ದ ಯುವತಿ, ಹತ್ಯೆಗೆ ಸಂಚು ರೂಪಿಸಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಕತ್ತು ಹಿಸುಕಿ ಕೊಲೆಗೈದ ಯುವತಿ: ಮೇ 10ರಂದು ಬೆಳಗ್ಗೆ ಮಾಲೀಕ ಗುರುಮೂರ್ತಿ ಎಂದಿನಂತೆ ಕೆಲಸಕ್ಕಾಗಿ ಮನೆ ತೊರೆದಿದ್ದರು. ಈ ವೇಳೆ‌ ದಿವ್ಯಾ‌ ಒಬ್ಬಂಟಿಯಾಗಿರುವುದನ್ನು ಅರಿತಿದ್ದ ಮೋನಿಕಾ, ಮನೆಯೊಳಗೆ ತೆರಳಿ ಮಾಲಕಿಯ ಕುತ್ತಿಗೆ ಬಿಗಿದು ಹತ್ಯೆ ಮಾಡಿದ್ದಾಳೆ. ಬಳಿಕ ಆಕೆಯ ಮೈಮೇಲಿದ್ದ 36 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಸುಮ್ಮನಾಗಿದ್ದಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕೆಲಸಕ್ಕೆ ಹೋದ ಕೆಲವೇ ಗಂಟೆಗಳಲ್ಲಿ ಗುರುಮೂರ್ತಿ ನಿರಂತರವಾಗಿ ಫೋನ್ ಮಾಡಿದರೂ ದಿವ್ಯಾ ಕರೆ ಸ್ವೀಕರಿಸದಿದ್ದರಿಂದ ಆತಂಕಕ್ಕೆ‌ ಒಳಗಾಗಿದ್ದ. ಏನೋ ಅಗಿರಬೇಕೆಂಬ ಭೀತಿಯಿಂದಲೇ‌ ಮನೆಗೆ ಬಂದು ನೋಡಿದಾಗ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ಕುತ್ತಿಗೆ ಮೇಲೆ ಗಾಯದ ಗುರುತು ಇರುವುದು ಹಾಗೂ ಚಿನ್ನದ‌ ಸರ ಇಲ್ಲದಿರುವುದನ್ನು ಕಂಡು ಪತ್ನಿಯನ್ನು ಯಾರೋ ಹತ್ಯೆ ಮಾಡಿದ್ದಾರೆಂದು ದೂರು ನೀಡಿದ್ದರು. ಅದರ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬಾಡಿಗೆಗಿದ್ದ ಯುವತಿಯನ್ನು ಬಂಧಿಸಿದ್ದಾರೆ.

ಹೊರಗಡೆ ಇದ್ದೇನೆ ಅಂದಿದ್ದ ಯುವತಿ: ಪತ್ನಿ ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಬಾಡಿಗೆಗಿದ್ದ ಯುವತಿಗೆ ಗುರುಮೂರ್ತಿ ಕರೆ‌ ಮಾಡಿದ್ದರು. ಈ ವೇಳೆ‌, 'ನಾನು ಹೊರಗಡೆ ಇದ್ದೇನೆ. ನನಗೆ ಗೊತ್ತಿಲ್ಲ' ಅಂದಿದ್ದಳು‌. ಕದ್ದ ಚಿನ್ನದ ಸರವನ್ನು ಅಂಗಡಿಯೊಂದರಲ್ಲಿ ಗಿರವಿ ಇಟ್ಟಿದ್ದಳು. ಅಲ್ಲದೇ, ಪೊಲೀಸರು ಬಂದು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂದು ತನಿಖೆ ಕೈಗೊಳ್ಳುವವರೆಗೂ ಯುವತಿ ಮನೆಯಲ್ಲೇ‌ ಇದ್ದರೂ ತಾನೇನೂ‌ ಮಾಡಿಲ್ಲವೆಂಬಂತೆ ನಟಿಸಿದ್ದಳು.

ತನಿಖೆ‌ ಕೈಗೊಂಡ ಇನ್ಸ್​ಪೆಕ್ಟರ್​ ಕೊಟ್ರೇಶಿ‌ ನೇತೃತ್ವದ ತಂಡವು ಅನುಮಾನದ ಮೇರೆಗೆ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದಾಗ ಆರೋಪಿ ಯುವತಿ ಸತ್ಯ ಸಂಗತಿ ಬಾಯ್ಬಿಟ್ಟಿದ್ದಾಳೆ. ಸದ್ಯ ಆರೋಪಿಯನ್ನು ಪೊಲೀಸ್ ವಶಕ್ಕೆ ಪಡೆದು, ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ರಾಮನಗರ: ಕಬ್ಬಿಣದ ರಾಡ್​ನಿಂಡ ಹೊಡೆದು ಪತ್ನಿ ಕೊಲೆ ಮಾಡಿದ ಪತಿ! - Husband Killed Wife

ETV Bharat Logo

Copyright © 2024 Ushodaya Enterprises Pvt. Ltd., All Rights Reserved.