ETV Bharat / state

ಬಸ್ ಡೋರ್ ಲಾಕ್ ತುಂಡು; ಕೆಳಗೆ ಬಿದ್ದ ಮಹಿಳೆ ಸ್ಥಿತಿ ಗಂಭೀರ - woman passenger fall down

author img

By ETV Bharat Karnataka Team

Published : Jul 2, 2024, 11:02 PM IST

ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಸ್​ ಡೋರ್ ಲಾಕ್ ತುಂಡಾದ ಪರಿಣಾಮ ಕೆಳಗೆ ಬಿದ್ದ ಮಹಿಳಾ ಪ್ರಯಾಣಿಕರೊಬ್ಬರ ಸ್ಥಿತಿ ಗಂಭೀರವಾಗಿದೆ.

woman-passenger
ಬಸ್ ಡೋರ್ ಲಾಕ್ ತುಂಡು (ETV Bharat)

ಚಿಕ್ಕಮಗಳೂರು : ಬಸ್ ಹತ್ತುವ ವೇಳೆ ಡೋರ್ ಲಾಕ್ ತುಂಡಾಗಿ ಪ್ರಯಾಣಿಕರೊಬ್ಬರು ನೆಲಕ್ಕೆ ಬಿದ್ದಿರುವ ಘಟನೆ ತಾಲೂಕಿನ ಐದಳ್ಳಿ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದ KSRTC ಬಸ್​ನಲ್ಲಿ ಅವಘಡ ಜರುಗಿದೆ. ಮಹಿಳಾ ಪ್ರಯಾಣಿಕರೊಬ್ಬರು ಬಾಳೆಹೊನ್ನೂರಿಗೆ ತೆರಳಲು ಬಸ್ ಹತ್ತುವಾಗ ಈ ಅವಘಡ ಜರುಗಿದೆ.

ಈ ವೇಳೆ ಐದಳ್ಳಿ ಗ್ರಾಮದ ಶಕುಂತಲಮ್ಮ (60)ಗೆ ಗಂಭೀರ ಗಾಯವಾಗಿದ್ದು, ಕೂಡಲೇ ಬಸ್ ಪ್ರಯಾಣಿಕರು ಹಾಗೂ ಸ್ಥಳೀಯರು ಗಾಯಾಳು ಶಕುಂತಲಾ ಅವರಿಗೆ ಆಲ್ದೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ, ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ.

ಬಸ್​ನಲ್ಲಿ ಸರಿಯಾದ ನಿರ್ವಹಣೆ ಇಲ್ಲದಿದ್ದಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೀಗಾಗಿ ಬಸ್ ಸಂಚಾರ ಸ್ಥಗಿತ ಮಾಡಲಾಗಿದೆ. ಕಳೆದ ಕೆಲ ದಿನಗಳಿಂದ ಮಲೆನಾಡು ಭಾಗಕ್ಕೆ ಹಾಗೂ ಜಿಲ್ಲೆಯ ವಿವಿಧ ಭಾಗಕ್ಕೆ ಹೋಗುವ ಬಸ್​ಗಳು ದುರಸ್ತಿ ಹಂತಕ್ಕೆ ತಲುಪಿದ್ದು, ಆಗಾಗ ಈ ರೀತಿಯ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಆದರೆ, ಕೆಎಸ್​ಆರ್​ಟಿಸಿ ಇಲಾಖೆ ಮಾತ್ರ ಇದರ ಬಗ್ಗೆ ಯಾವುದೇ ಗಮನ ಹರಿಸುತ್ತಿಲ್ಲ ಎಂದು ಆರೋಪ ಕೇಳಿಬಂದಿದೆ.

ಪ್ರಯಾಣಿಕರ ಜೊತೆ ಹಾಗೂ ಅವರ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿದ್ದು, ಕೂಡಲೇ ಇದರ ಬಗ್ಗೆ ಗಮನಹರಿಸಿ ಮತ್ತೊಮ್ಮೆ ಈ ರೀತಿಯ ಪ್ರಕರಣಗಳು ಜರುಗದಂತೆ ಜಾಗರೂಕತೆ ವಹಿಸಬೇಕು ಎಂದು ಸಾರ್ವಜನಿಕರು ಆಗ್ರಹ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಗುಡ್ಡದಿಂದ ಹೆದ್ದಾರಿಗೆ ಉರುಳಿದ ಕಲ್ಲು: ಅದೃಷ್ಟವಶಾತ್ ಬೈಕ್ ಸವಾರ ಪಾರು!

ಚಿಕ್ಕಮಗಳೂರು : ಬಸ್ ಹತ್ತುವ ವೇಳೆ ಡೋರ್ ಲಾಕ್ ತುಂಡಾಗಿ ಪ್ರಯಾಣಿಕರೊಬ್ಬರು ನೆಲಕ್ಕೆ ಬಿದ್ದಿರುವ ಘಟನೆ ತಾಲೂಕಿನ ಐದಳ್ಳಿ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದ KSRTC ಬಸ್​ನಲ್ಲಿ ಅವಘಡ ಜರುಗಿದೆ. ಮಹಿಳಾ ಪ್ರಯಾಣಿಕರೊಬ್ಬರು ಬಾಳೆಹೊನ್ನೂರಿಗೆ ತೆರಳಲು ಬಸ್ ಹತ್ತುವಾಗ ಈ ಅವಘಡ ಜರುಗಿದೆ.

ಈ ವೇಳೆ ಐದಳ್ಳಿ ಗ್ರಾಮದ ಶಕುಂತಲಮ್ಮ (60)ಗೆ ಗಂಭೀರ ಗಾಯವಾಗಿದ್ದು, ಕೂಡಲೇ ಬಸ್ ಪ್ರಯಾಣಿಕರು ಹಾಗೂ ಸ್ಥಳೀಯರು ಗಾಯಾಳು ಶಕುಂತಲಾ ಅವರಿಗೆ ಆಲ್ದೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ, ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ.

ಬಸ್​ನಲ್ಲಿ ಸರಿಯಾದ ನಿರ್ವಹಣೆ ಇಲ್ಲದಿದ್ದಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೀಗಾಗಿ ಬಸ್ ಸಂಚಾರ ಸ್ಥಗಿತ ಮಾಡಲಾಗಿದೆ. ಕಳೆದ ಕೆಲ ದಿನಗಳಿಂದ ಮಲೆನಾಡು ಭಾಗಕ್ಕೆ ಹಾಗೂ ಜಿಲ್ಲೆಯ ವಿವಿಧ ಭಾಗಕ್ಕೆ ಹೋಗುವ ಬಸ್​ಗಳು ದುರಸ್ತಿ ಹಂತಕ್ಕೆ ತಲುಪಿದ್ದು, ಆಗಾಗ ಈ ರೀತಿಯ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಆದರೆ, ಕೆಎಸ್​ಆರ್​ಟಿಸಿ ಇಲಾಖೆ ಮಾತ್ರ ಇದರ ಬಗ್ಗೆ ಯಾವುದೇ ಗಮನ ಹರಿಸುತ್ತಿಲ್ಲ ಎಂದು ಆರೋಪ ಕೇಳಿಬಂದಿದೆ.

ಪ್ರಯಾಣಿಕರ ಜೊತೆ ಹಾಗೂ ಅವರ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿದ್ದು, ಕೂಡಲೇ ಇದರ ಬಗ್ಗೆ ಗಮನಹರಿಸಿ ಮತ್ತೊಮ್ಮೆ ಈ ರೀತಿಯ ಪ್ರಕರಣಗಳು ಜರುಗದಂತೆ ಜಾಗರೂಕತೆ ವಹಿಸಬೇಕು ಎಂದು ಸಾರ್ವಜನಿಕರು ಆಗ್ರಹ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಗುಡ್ಡದಿಂದ ಹೆದ್ದಾರಿಗೆ ಉರುಳಿದ ಕಲ್ಲು: ಅದೃಷ್ಟವಶಾತ್ ಬೈಕ್ ಸವಾರ ಪಾರು!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.