ETV Bharat / state

ಮೈಸೂರು: ಅರಮನೆಯಲ್ಲಿ ಸಾಂಪ್ರದಾಯಿಕ ಆಯುಧಪೂಜೆ ನೆರವೇರಿಸಿದ ಯದುವೀರ್

ಮೈಸೂರು ಅರಮನೆಯಲ್ಲಿಂದು ಯದುವೀರ್‌ ಒಡೆಯರ್‌‌ ಅವರು ಸಾಂಪ್ರದಾಯಿಕ ಆಯುಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.

author img

By ETV Bharat Karnataka Team

Published : 3 hours ago

ಅರಮನೆಯಲ್ಲಿ ನಡೆದ ಆಯುಧ ಪೂಜೆ
ಮೈಸೂರು ಅರಮನೆಯಲ್ಲಿ ನಡೆದ ಆಯುಧ ಪೂಜೆ (ETV Bharat)

ಮೈಸೂರು: ಇತಿಹಾಸ ಪ್ರಸಿದ್ಧ ಮೈಸೂರು ಅರಮನೆಯಲ್ಲಿಂದು ರಾಜವಂಶಸ್ಥರ ಆಯುಧಗಳಿಗೆ ಸಂಪ್ರದಾಯದಂತೆ ಪೂಜೆ ನೆರವೇರಿಸಲಾಯಿತು. ಮಧ್ಯಾಹ್ನ 12.20ರಿಂದ 12.40ರ ಶುಭ ಲಗ್ನದಲ್ಲಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌‌ ತಮ್ಮ ಪೂರ್ವಜರು ಬಳಸುತ್ತಿದ್ದ ಆಯುಧಗಳಿಗೆ ಪೂಜೆ ಸಲ್ಲಿಸಿದರು. ಬಳಿಕ ಪಟ್ಟದ ಹಸು, ಪಟ್ಟದ ಕುದುರೆ, ಪಟ್ಟದ ಆನೆ ಹಾಗೂ ಪಲ್ಲಕ್ಕಿಯನ್ನು ಪೂಜಿಸಿದರು.

ಇದಕ್ಕೂ ಮೊದಲು ಆಯುಧಗಳನ್ನು ಕೋಡಿ ಸೋಮೇಶ್ವರ ದೇವಾಲಯದ ಬಳಿ ಸ್ವಚ್ಚಗೊಳಿಸಲಾಯಿತು. ಬಳಿಕ ರಾಜಪರಂಪರೆಯಂತೆ ಪಲ್ಲಕ್ಕಿಯಲ್ಲಿ ಆಯುಧಗಳನ್ನಿಟ್ಟು ಪಟ್ಟದ ಆನೆ, ಪಟ್ಟದ ಹಸುವಿನೊಂದಿಗೆ ಮಂಗಳವಾದ್ಯಗಳ ಮೂಲಕ ಅರಮನೆಯ ಕಲ್ಯಾಣ ಮಂಟಪಕ್ಕೆ ತೆಗೆದುಕೊಂಡು ಬರಲಾಯಿತು.

ಆಯುಧಪೂಜೆ ನೆರವೇರಿಸಿದ ಯದುವೀರ್ (ETV Bharat)

ಯದುವೀರ್‌ ಇಂದು ರಾತ್ರಿ ಖಾಸಗಿ ದರ್ಬಾರ್ ನಡೆಸಿ, ನಾಳೆ ವಿಜಯದಶಮಿ ಪೂಜಾ ವಿಧಿವಿಧಾನಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ: ಆಯುಧ ಪೂಜೆ ದಿನವೇ ಯದುವಂಶಕ್ಕೆ ಸಿಹಿ ಸುದ್ದಿ: ಯದುವೀರ್ - ತ್ರಿಷಿಕಾ ದಂಪತಿಗೆ 2ನೇ ಮಗು ಜನನ

ಮೈಸೂರು: ಇತಿಹಾಸ ಪ್ರಸಿದ್ಧ ಮೈಸೂರು ಅರಮನೆಯಲ್ಲಿಂದು ರಾಜವಂಶಸ್ಥರ ಆಯುಧಗಳಿಗೆ ಸಂಪ್ರದಾಯದಂತೆ ಪೂಜೆ ನೆರವೇರಿಸಲಾಯಿತು. ಮಧ್ಯಾಹ್ನ 12.20ರಿಂದ 12.40ರ ಶುಭ ಲಗ್ನದಲ್ಲಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌‌ ತಮ್ಮ ಪೂರ್ವಜರು ಬಳಸುತ್ತಿದ್ದ ಆಯುಧಗಳಿಗೆ ಪೂಜೆ ಸಲ್ಲಿಸಿದರು. ಬಳಿಕ ಪಟ್ಟದ ಹಸು, ಪಟ್ಟದ ಕುದುರೆ, ಪಟ್ಟದ ಆನೆ ಹಾಗೂ ಪಲ್ಲಕ್ಕಿಯನ್ನು ಪೂಜಿಸಿದರು.

ಇದಕ್ಕೂ ಮೊದಲು ಆಯುಧಗಳನ್ನು ಕೋಡಿ ಸೋಮೇಶ್ವರ ದೇವಾಲಯದ ಬಳಿ ಸ್ವಚ್ಚಗೊಳಿಸಲಾಯಿತು. ಬಳಿಕ ರಾಜಪರಂಪರೆಯಂತೆ ಪಲ್ಲಕ್ಕಿಯಲ್ಲಿ ಆಯುಧಗಳನ್ನಿಟ್ಟು ಪಟ್ಟದ ಆನೆ, ಪಟ್ಟದ ಹಸುವಿನೊಂದಿಗೆ ಮಂಗಳವಾದ್ಯಗಳ ಮೂಲಕ ಅರಮನೆಯ ಕಲ್ಯಾಣ ಮಂಟಪಕ್ಕೆ ತೆಗೆದುಕೊಂಡು ಬರಲಾಯಿತು.

ಆಯುಧಪೂಜೆ ನೆರವೇರಿಸಿದ ಯದುವೀರ್ (ETV Bharat)

ಯದುವೀರ್‌ ಇಂದು ರಾತ್ರಿ ಖಾಸಗಿ ದರ್ಬಾರ್ ನಡೆಸಿ, ನಾಳೆ ವಿಜಯದಶಮಿ ಪೂಜಾ ವಿಧಿವಿಧಾನಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ: ಆಯುಧ ಪೂಜೆ ದಿನವೇ ಯದುವಂಶಕ್ಕೆ ಸಿಹಿ ಸುದ್ದಿ: ಯದುವೀರ್ - ತ್ರಿಷಿಕಾ ದಂಪತಿಗೆ 2ನೇ ಮಗು ಜನನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.