ETV Bharat / state

ಕರಾವಳಿ ಜಿಲ್ಲೆಗಳಲ್ಲಿ ಕೊಂಚ ತಗ್ಗಿದ ಮಳೆ: ಮೂರು ದಿನಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ - Rain Alert In Karnataka

author img

By ETV Bharat Karnataka Team

Published : Jun 29, 2024, 6:51 AM IST

ಕರಾವಳಿ ಜಿಲ್ಲೆಗಳಲ್ಲಿ ಕೊಂಚ ಮಳೆ ತಗ್ಗಿದರೂ ಮುಂದಿನ ಮೂರು ದಿನಗಳವರೆಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

RAIN ALERT IN KARNATAKA
ಸಂಗ್ರಹ ಚಿತ್ರ (IANS)

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದರೂ ಕೊಂಚ ಇಳಿಮುಖ ಕಾಣುವ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ವಾರ ರೆಡ್ ಮತ್ತು ಆರಂಜ್ ಅಲರ್ಟ್ ನೀಡಿದ್ದ ಹವಾಮಾನ ಇಲಾಖೆ, ಶನಿವಾರದಿಂದ ಮೂರು ದಿನಗಳಿಗೆ ಅನ್ವಯವಾಗುವಂತೆ ಯೆಲ್ಲೋ ಅಲರ್ಟ್ ನೀಡಿದೆ. ಮೀನುಗಾರರಿಗೆ ಎಚ್ಚರಿಕೆಯಿಂದ ಇರುವಂತೆ ಕೂಡ ಸೂಚಿಸಿದೆ.

ಕರಾವಳಿ ಜಿಲ್ಲೆಯ ಹಲವು ಸ್ಥಳಗಳಲ್ಲಿ, ಉತ್ತರ ಒಳನಾಡಿನ ಕೆಲವು ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆ ಮಳೆ ಮುಂದುವರೆಯಲಿದೆ. ಶುಕ್ರವಾರ ಬೆಳಗ್ಗೆಯವರೆಗೆ ಅತಿ ಹೆಚ್ಚು ಮಳೆ ಉತ್ತರ ಕನ್ನಡ ಜಿಲ್ಲೆಯ ಕದ್ರಾ ಮತ್ತು ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ ತಲಾ 8 ಸೆ.ಮೀ ಮಳೆಯಾಗಿದೆ. ಇನ್ನು ಉಡುಪಿಯ ಕೋಟದಲ್ಲಿ 7, ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲಿ 6, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ 5 ಸೆ.ಮೀ, ಉಪ್ಪಿನಂಗಡಿಯಲ್ಲಿ 4 ಸೆ.ಮೀ ಮಳೆ ಬಂದಿದೆ. ಉಳಿದಂತೆ ಪುತ್ತೂರಿನ ಹೆಚ್ಎಂ​ಎಸ್, ಮೂಲ್ಕಿ, ಉಡುಪಿ ಜಿಲ್ಲೆಯ ಸಿದ್ದಾಪುರ, ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕಮ್ಮರಡಿಯಲ್ಲೂ ಉತ್ತಮ ಮಳೆ ಸುರಿದಿದೆ.

ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ಆಕಾಶ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು 30 ರಿಂದ 31 ಡಿಗ್ರಿ ಇರಲಿದೆ ಎಂದು ಹೇಳಿದೆ.

ನೈಋತ್ಯ ಮಾನ್ಸೂನ್ ಕರಾವಳಿ ಮತ್ತು ದಕ್ಷಿಣ ಒಳನಾಡು ಮೇಲೆ ಸಾಧಾರಣವಾಗಿದೆ. ಉತ್ತರ ಒಳನಾಡು ಮೇಲೆ ದುರ್ಬಲವಾಗಿದೆ. ಶನಿವಾರ ಕರಾವಳಿಯ ಬಹುತೇಶ ಕಡೆಗಳಲ್ಲಿ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ.ಎನ್.ಪುವಿಯರಸನ್ ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ಭಾರೀ ಮಳೆ, ರಸ್ತೆಗಳು ಜಲಾವೃತ; ಜನಜೀವನ ಅಸ್ತವ್ಯಸ್ತ - Rain Submerges Delhi

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದರೂ ಕೊಂಚ ಇಳಿಮುಖ ಕಾಣುವ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ವಾರ ರೆಡ್ ಮತ್ತು ಆರಂಜ್ ಅಲರ್ಟ್ ನೀಡಿದ್ದ ಹವಾಮಾನ ಇಲಾಖೆ, ಶನಿವಾರದಿಂದ ಮೂರು ದಿನಗಳಿಗೆ ಅನ್ವಯವಾಗುವಂತೆ ಯೆಲ್ಲೋ ಅಲರ್ಟ್ ನೀಡಿದೆ. ಮೀನುಗಾರರಿಗೆ ಎಚ್ಚರಿಕೆಯಿಂದ ಇರುವಂತೆ ಕೂಡ ಸೂಚಿಸಿದೆ.

ಕರಾವಳಿ ಜಿಲ್ಲೆಯ ಹಲವು ಸ್ಥಳಗಳಲ್ಲಿ, ಉತ್ತರ ಒಳನಾಡಿನ ಕೆಲವು ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆ ಮಳೆ ಮುಂದುವರೆಯಲಿದೆ. ಶುಕ್ರವಾರ ಬೆಳಗ್ಗೆಯವರೆಗೆ ಅತಿ ಹೆಚ್ಚು ಮಳೆ ಉತ್ತರ ಕನ್ನಡ ಜಿಲ್ಲೆಯ ಕದ್ರಾ ಮತ್ತು ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ ತಲಾ 8 ಸೆ.ಮೀ ಮಳೆಯಾಗಿದೆ. ಇನ್ನು ಉಡುಪಿಯ ಕೋಟದಲ್ಲಿ 7, ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲಿ 6, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ 5 ಸೆ.ಮೀ, ಉಪ್ಪಿನಂಗಡಿಯಲ್ಲಿ 4 ಸೆ.ಮೀ ಮಳೆ ಬಂದಿದೆ. ಉಳಿದಂತೆ ಪುತ್ತೂರಿನ ಹೆಚ್ಎಂ​ಎಸ್, ಮೂಲ್ಕಿ, ಉಡುಪಿ ಜಿಲ್ಲೆಯ ಸಿದ್ದಾಪುರ, ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕಮ್ಮರಡಿಯಲ್ಲೂ ಉತ್ತಮ ಮಳೆ ಸುರಿದಿದೆ.

ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ಆಕಾಶ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು 30 ರಿಂದ 31 ಡಿಗ್ರಿ ಇರಲಿದೆ ಎಂದು ಹೇಳಿದೆ.

ನೈಋತ್ಯ ಮಾನ್ಸೂನ್ ಕರಾವಳಿ ಮತ್ತು ದಕ್ಷಿಣ ಒಳನಾಡು ಮೇಲೆ ಸಾಧಾರಣವಾಗಿದೆ. ಉತ್ತರ ಒಳನಾಡು ಮೇಲೆ ದುರ್ಬಲವಾಗಿದೆ. ಶನಿವಾರ ಕರಾವಳಿಯ ಬಹುತೇಶ ಕಡೆಗಳಲ್ಲಿ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ.ಎನ್.ಪುವಿಯರಸನ್ ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ಭಾರೀ ಮಳೆ, ರಸ್ತೆಗಳು ಜಲಾವೃತ; ಜನಜೀವನ ಅಸ್ತವ್ಯಸ್ತ - Rain Submerges Delhi

ETV Bharat Logo

Copyright © 2024 Ushodaya Enterprises Pvt. Ltd., All Rights Reserved.