ETV Bharat / state

ಪ್ರೇಮ ವೈಫಲ್ಯ: ಧಾರವಾಡದಲ್ಲಿ ಚಿಕ್ಕಮಗಳೂರಿನ ಯುವಕ ಆತ್ಮಹತ್ಯೆ - Young Man Committed Suicide

author img

By ETV Bharat Karnataka Team

Published : Sep 8, 2024, 4:16 PM IST

ಪ್ರೇಮ‌ ವೈಫಲ್ಯದಿಂದ ನೊಂದು ಚಿಕ್ಕಮಗಳೂರಿನ ಯುವಕ ಧಾರವಾಡದ ಲಾಡ್ಜ್​ವೊಂದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ (ETV Bharat)

ಧಾರವಾಡ: ಪ್ರೇಮ‌ ವೈಫಲ್ಯ ಹಿನ್ನೆಲೆಯಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ರೈಲ್ವೆ ನಿಲ್ದಾಣ ಸಮೀಪದ ಲಾಡ್ಜ್​ವೊಂದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಸಿಗೆಹಡ್ಲು ಕಾಮನಕೆರೆ ನಿವಾಸಿ ಚಿನ್ಮಯ್ ಸಾವನ್ನಪ್ಪಿದ ಯುವಕ.

ಚಿನ್ಮಯ್ ಸೆ.04ರಂದು ಲಾಡ್ಜ್​ನ ರೂಮ್ ನಂ.212ರಲ್ಲಿ ತಂಗಿದ್ದ. ಸೆ.6ರಂದು ಸಂಜೆ ರೂಮ್ ಕ್ಲೀನ್ ಮಾಡಲು ಲಾಡ್ಜ್ ಸಿಬ್ಬಂದಿ ಹೋಗಿದ್ದ ವೇಳೆ ರೂಮ್ ಒಳಗಿನಿಂದ ಲಾಕ್ ಆಗಿತ್ತು. ಮಾರನೇ ದಿನ(ಸೆ.7) ರಾತ್ರಿ ಲಾಡ್ಜ್ ಸಿಬ್ಬಂದಿ ಮತ್ತೆ ರೂಮ್ ಬಾಗಿಲು ತಟ್ಟಿದ್ದಾರೆ. ಆದರೂ ಚಿನ್ಮಯ್ ಬಾಗಿಲು ತೆರೆಯದ ಕಾರಣ ಅನುಮಾನಗೊಂಡು ಮತ್ತೊಂದು ಬೀಗ ಬಳಸಿ ಲಾಕ್ ತೆರೆದಾಗ ಘಟನೆ ಬೆಳಕಿಗೆ ಬಂದಿದೆ.

ತಕ್ಷಣ ಲಾಡ್ಜ್ ಮಾಲೀಕ ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಯುವಕನ ಕುಟುಂಬಸ್ಥರನ್ನು ಸಂಪರ್ಕಿಸಿ ವಿಷಯ ತಿಳಿಸಿದ್ದಾರೆ. ಮೃತದೇಹವನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ.

ಯುವಕ ಡೆತ್​ನೋಟ್ ಬರೆದಿಟ್ಟು, ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ. ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ ಸಾವು! ಚಿತಾಗಾರದ ಬಳಿ ಎರಡೂ ಕುಟುಂಬಸ್ಥರ ಗಲಾಟೆ - Woman Suicide Case

ಧಾರವಾಡ: ಪ್ರೇಮ‌ ವೈಫಲ್ಯ ಹಿನ್ನೆಲೆಯಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ರೈಲ್ವೆ ನಿಲ್ದಾಣ ಸಮೀಪದ ಲಾಡ್ಜ್​ವೊಂದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಸಿಗೆಹಡ್ಲು ಕಾಮನಕೆರೆ ನಿವಾಸಿ ಚಿನ್ಮಯ್ ಸಾವನ್ನಪ್ಪಿದ ಯುವಕ.

ಚಿನ್ಮಯ್ ಸೆ.04ರಂದು ಲಾಡ್ಜ್​ನ ರೂಮ್ ನಂ.212ರಲ್ಲಿ ತಂಗಿದ್ದ. ಸೆ.6ರಂದು ಸಂಜೆ ರೂಮ್ ಕ್ಲೀನ್ ಮಾಡಲು ಲಾಡ್ಜ್ ಸಿಬ್ಬಂದಿ ಹೋಗಿದ್ದ ವೇಳೆ ರೂಮ್ ಒಳಗಿನಿಂದ ಲಾಕ್ ಆಗಿತ್ತು. ಮಾರನೇ ದಿನ(ಸೆ.7) ರಾತ್ರಿ ಲಾಡ್ಜ್ ಸಿಬ್ಬಂದಿ ಮತ್ತೆ ರೂಮ್ ಬಾಗಿಲು ತಟ್ಟಿದ್ದಾರೆ. ಆದರೂ ಚಿನ್ಮಯ್ ಬಾಗಿಲು ತೆರೆಯದ ಕಾರಣ ಅನುಮಾನಗೊಂಡು ಮತ್ತೊಂದು ಬೀಗ ಬಳಸಿ ಲಾಕ್ ತೆರೆದಾಗ ಘಟನೆ ಬೆಳಕಿಗೆ ಬಂದಿದೆ.

ತಕ್ಷಣ ಲಾಡ್ಜ್ ಮಾಲೀಕ ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಯುವಕನ ಕುಟುಂಬಸ್ಥರನ್ನು ಸಂಪರ್ಕಿಸಿ ವಿಷಯ ತಿಳಿಸಿದ್ದಾರೆ. ಮೃತದೇಹವನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ.

ಯುವಕ ಡೆತ್​ನೋಟ್ ಬರೆದಿಟ್ಟು, ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ. ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ ಸಾವು! ಚಿತಾಗಾರದ ಬಳಿ ಎರಡೂ ಕುಟುಂಬಸ್ಥರ ಗಲಾಟೆ - Woman Suicide Case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.