ETV Bharat / state

ಬೆಂಗಳೂರು: ನೀರಿನ ಟ್ಯಾಂಕರ್ ಹರಿದು ಯುವಕ ಸಾವು - Young man died in accident

author img

By ETV Bharat Karnataka Team

Published : Jul 2, 2024, 12:06 PM IST

ಹಿಂದಿನಿಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ನೀರಿನ ಟ್ಯಾಂಕರ್​, ಕೆಳಗೆ ಬಿದ್ದ ಯುವನ ತಲೆ ಮೇಲೆ ಹರಿದು, ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ (ETV Bharat)

ಬೆಂಗಳೂರು: ವಾಟರ್ ಟ್ಯಾಂಕರ್ ಹರಿದು ಯುವಕ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ಕೊತ್ತನೂರು ದಿಣ್ಣೆಯ ಆರ್​ಬಿಐ ಲೇಔಟ್​ನಲ್ಲಿ ನಡೆದಿದೆ. ಮೃತನನ್ನು ಕಿರಣ್ ಕುಮಾರ್ (21) ಎಂದು ಗುರುತಿಸಲಾಗಿದೆ. ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಕಿರಣ್‌ ಕುಮಾರ್, ಇಂದು ಬೆಳಗ್ಗೆ 9.30 ಸುಮಾರಿಗೆ ಕೆಲಸಕ್ಕೆ ತೆರಳುತ್ತಿದ್ದ. ಈ ಸಂದರ್ಭದಲ್ಲಿ ಹಿಂಬದಿಯಿಂದ ಬಂದ ವಾಟರ್ ಟ್ಯಾಂಕರ್ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ. ಈ ವೇಳೆ ನೆಲಕ್ಕೆ ಬಿದ್ದ ಕಿರಣ್ ಕುಮಾರ್ ತಲೆ ಮೇಲೆ ಟ್ಯಾಂಕರ್ ಹರಿದ ಪರಿಣಾಮ, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಘಟನಾ ಸ್ಥಳಕ್ಕೆ ಕೆ.ಎಸ್. ಲೇಔಟ್ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಬೆಂಗಳೂರು: ವಾಟರ್ ಟ್ಯಾಂಕರ್ ಹರಿದು ಯುವಕ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ಕೊತ್ತನೂರು ದಿಣ್ಣೆಯ ಆರ್​ಬಿಐ ಲೇಔಟ್​ನಲ್ಲಿ ನಡೆದಿದೆ. ಮೃತನನ್ನು ಕಿರಣ್ ಕುಮಾರ್ (21) ಎಂದು ಗುರುತಿಸಲಾಗಿದೆ. ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಕಿರಣ್‌ ಕುಮಾರ್, ಇಂದು ಬೆಳಗ್ಗೆ 9.30 ಸುಮಾರಿಗೆ ಕೆಲಸಕ್ಕೆ ತೆರಳುತ್ತಿದ್ದ. ಈ ಸಂದರ್ಭದಲ್ಲಿ ಹಿಂಬದಿಯಿಂದ ಬಂದ ವಾಟರ್ ಟ್ಯಾಂಕರ್ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ. ಈ ವೇಳೆ ನೆಲಕ್ಕೆ ಬಿದ್ದ ಕಿರಣ್ ಕುಮಾರ್ ತಲೆ ಮೇಲೆ ಟ್ಯಾಂಕರ್ ಹರಿದ ಪರಿಣಾಮ, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಘಟನಾ ಸ್ಥಳಕ್ಕೆ ಕೆ.ಎಸ್. ಲೇಔಟ್ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: ಹಾಸನ: ಓವರ್ ಟೇಕ್ ವೇಳೆ ಭೀಕರ ಅಪಘಾತ, ಕಾರಿನಲ್ಲಿದ್ದ ಇಬ್ಬರು ದಾರುಣ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.