ETV Bharat / state

ಗಾಳಿಸಹಿತ ಮಳೆಗೆ ಕಾರ್ ಮೇಲೆ ಬಿತ್ತು ಮರ: ಮಂಡ್ಯದಲ್ಲಿ ಯುವಕ ದುರ್ಮರಣ - Tree Crashes On Car

author img

By ETV Bharat Karnataka Team

Published : May 7, 2024, 10:19 AM IST

Updated : May 7, 2024, 12:41 PM IST

ಕಾರಿನ ಮೇಲೆ ಮರ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ಮಂಡ್ಯದಲ್ಲಿ ನಡೆದಿದೆ.

Mandya Death case
ಮಂಡ್ಯ ಯುವಕ ಸಾವು (ETV Bharat)
ಮಂಡ್ಯ ಯುವಕ ಸಾವು (ETV Bharat)

ಮಂಡ್ಯ: ಬಿರುಗಾಳಿಸಹಿತ ಸುರಿದ ಮಳೆಗೆ ಕಾರಿನ ಮೇಲೆ ಮರ ಬಿದ್ದು ಯುವಕ ಸ್ಥಳದಲ್ಲೇ ಅಸುನೀಗಿದ ಘಟನೆ ಮಂಡ್ಯದಲ್ಲಿ ನಡೆದಿದೆ.

ಸೋಮವಾರ ರಾತ್ರಿ ನಗರದ ಆಸ್ಪತ್ರೆ ರಸ್ತೆಯಲ್ಲಿ ನಡೆದ ದುರಂತದಲ್ಲಿ ತಾಲೂಕಿನ ಜಿ.ಬೊಮ್ಮನಹಳ್ಳಿ ಗ್ರಾಮದ ರಾಮಯ್ಯನ ಪುತ್ರ ಕಾರ್ತಿಕ್ (28) ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್, ಇವರ ಜೊತೆ ಕಾರಿನಲ್ಲಿದ್ದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ.

ಮಂಗಳವಾರ ಕಾರ್ತಿಕ್ ಅವರ ಹುಟ್ಟುಹಬ್ಬವಿದ್ದ ಹಿನ್ನೆಲೆಯಲ್ಲಿ ಸ್ನೇಹಿತರಾದ ಸುನೀಲ್ ಮತ್ತು ಚೇರನಹಳ್ಳಿ ಮಂಜು ಅವರೊಂದಿಗೆ ಮಂಡ್ಯ ನಗರಕ್ಕೆ ಓಮ್ನಿ ಕಾರಿನಲ್ಲಿ ಬಟ್ಟೆ ಖರೀದಿಸಲು ಬಂದಿದ್ದರು. ಸೋಮವಾರ ರಾತ್ರಿ 8ರ ಹೊತ್ತಿಗೆ ಗಾಳಿಸಮೇತ ಮಳೆ ಆರಂಭಗೊಂಡಿದ್ದು, ಆಸ್ಪತ್ರೆ ರಸ್ತೆಯ ತಿರುವಿನಲ್ಲಿ ಮರ ಕಾರಿನ ಮೇಲೆ ಬಿದ್ದಿದೆ. ತಕ್ಷಣ ಸಾರ್ವಜನಿಕರು ರಕ್ಷಣೆಗೆ ಮುಂದಾಗಿದ್ದರು. ಆದರೆ ನಜ್ಜುಗುಜ್ಜಾಗಿದ್ದ ಕಾರಿನಲ್ಲಿ ಸಿಲುಕಿದ್ದ ಕಾರ್ತಿಕ್ ಸಾವನ್ನಪ್ಪಿದ್ದು, ಇನ್ನಿಬ್ಬರು ಪಾರಾಗಿದ್ದಾರೆ.

ಅರಣ್ಯ ಇಲಾಖೆ, ನಗರಸಭೆ ವಿರುದ್ಧ ಆಕ್ರೋಶ: ಹೊಣೆ ಪೂರ್ವ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮಿಮ್ಸ್ ಶವಾಗಾರಕ್ಕೆ ರವಾನಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯುವಕ ಸಾವನ್ನಪ್ಪಿರುವುದಕ್ಕೆ ಅರಣ್ಯ ಇಲಾಖೆ ಮತ್ತು ನಗರಸಭೆ ಹೊಣೆ ಎಂದು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದರು. ಮಂಡ್ಯ ನಗರ ಪ್ರದೇಶದ ಹಲವು ರಸ್ತೆಗಳಲ್ಲಿ ಮರಗಳನ್ನು ಬೆಳೆಸಲಾಗಿದೆ. ಆದರೆ ಅದರ ನಿರ್ವಹಣೆಯನ್ನು ಇಲಾಖೆ ಸಮರ್ಪಕವಾಗಿ ಮಾಡುತ್ತಿಲ್ಲ. ಬೇರು ಗಟ್ಟಿ ಇಲ್ಲದ ಮರಗಳನ್ನು ಹಾಗೆಯೇ ಬಿಟ್ಟಿದ್ದು, ಗಾಳಿ ಮಳೆಗೆ ಧರೆಗುರುಳುತ್ತಿವೆ. ದೊಡ್ಡ ಗಾತ್ರದ ಮರಗಳ ಕೊಂಬೆಗಳು ರಸ್ತೆಗಳಿಗೆ ಚಾಚಿಕೊಂಡಿವೆ. ಅದೇ ರೀತಿ ಒಣಗಿದ ಕೊಂಬೆಗಳನ್ನು ಹಾಗೆಯೇ ಬಿಡಲಾಗಿದೆ. ಅರಣ್ಯ ಇಲಾಖೆ ಜೊತೆಗೆ ನಗರಸಭೆ ಬೇಜವಾಬ್ದಾರಿ ತೋರುತ್ತಿರುವುದರಿಂದ ಜೀವ ಬಲಿಯಾಗಿದೆ ಎಂದು ಕಿಡಿಕಾರಿದರು.

ಇದನ್ನೂ ಓದಿ: ಕಾರವಾರ, ಶಿವಮೊಗ್ಗದಲ್ಲಿ ಕೈಕೊಟ್ಟ ಮತಯಂತ್ರ, ತಡವಾದ ಮತದಾನ - Voting Machine Problem

ಮಂಡ್ಯ ಯುವಕ ಸಾವು (ETV Bharat)

ಮಂಡ್ಯ: ಬಿರುಗಾಳಿಸಹಿತ ಸುರಿದ ಮಳೆಗೆ ಕಾರಿನ ಮೇಲೆ ಮರ ಬಿದ್ದು ಯುವಕ ಸ್ಥಳದಲ್ಲೇ ಅಸುನೀಗಿದ ಘಟನೆ ಮಂಡ್ಯದಲ್ಲಿ ನಡೆದಿದೆ.

ಸೋಮವಾರ ರಾತ್ರಿ ನಗರದ ಆಸ್ಪತ್ರೆ ರಸ್ತೆಯಲ್ಲಿ ನಡೆದ ದುರಂತದಲ್ಲಿ ತಾಲೂಕಿನ ಜಿ.ಬೊಮ್ಮನಹಳ್ಳಿ ಗ್ರಾಮದ ರಾಮಯ್ಯನ ಪುತ್ರ ಕಾರ್ತಿಕ್ (28) ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್, ಇವರ ಜೊತೆ ಕಾರಿನಲ್ಲಿದ್ದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ.

ಮಂಗಳವಾರ ಕಾರ್ತಿಕ್ ಅವರ ಹುಟ್ಟುಹಬ್ಬವಿದ್ದ ಹಿನ್ನೆಲೆಯಲ್ಲಿ ಸ್ನೇಹಿತರಾದ ಸುನೀಲ್ ಮತ್ತು ಚೇರನಹಳ್ಳಿ ಮಂಜು ಅವರೊಂದಿಗೆ ಮಂಡ್ಯ ನಗರಕ್ಕೆ ಓಮ್ನಿ ಕಾರಿನಲ್ಲಿ ಬಟ್ಟೆ ಖರೀದಿಸಲು ಬಂದಿದ್ದರು. ಸೋಮವಾರ ರಾತ್ರಿ 8ರ ಹೊತ್ತಿಗೆ ಗಾಳಿಸಮೇತ ಮಳೆ ಆರಂಭಗೊಂಡಿದ್ದು, ಆಸ್ಪತ್ರೆ ರಸ್ತೆಯ ತಿರುವಿನಲ್ಲಿ ಮರ ಕಾರಿನ ಮೇಲೆ ಬಿದ್ದಿದೆ. ತಕ್ಷಣ ಸಾರ್ವಜನಿಕರು ರಕ್ಷಣೆಗೆ ಮುಂದಾಗಿದ್ದರು. ಆದರೆ ನಜ್ಜುಗುಜ್ಜಾಗಿದ್ದ ಕಾರಿನಲ್ಲಿ ಸಿಲುಕಿದ್ದ ಕಾರ್ತಿಕ್ ಸಾವನ್ನಪ್ಪಿದ್ದು, ಇನ್ನಿಬ್ಬರು ಪಾರಾಗಿದ್ದಾರೆ.

ಅರಣ್ಯ ಇಲಾಖೆ, ನಗರಸಭೆ ವಿರುದ್ಧ ಆಕ್ರೋಶ: ಹೊಣೆ ಪೂರ್ವ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮಿಮ್ಸ್ ಶವಾಗಾರಕ್ಕೆ ರವಾನಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯುವಕ ಸಾವನ್ನಪ್ಪಿರುವುದಕ್ಕೆ ಅರಣ್ಯ ಇಲಾಖೆ ಮತ್ತು ನಗರಸಭೆ ಹೊಣೆ ಎಂದು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದರು. ಮಂಡ್ಯ ನಗರ ಪ್ರದೇಶದ ಹಲವು ರಸ್ತೆಗಳಲ್ಲಿ ಮರಗಳನ್ನು ಬೆಳೆಸಲಾಗಿದೆ. ಆದರೆ ಅದರ ನಿರ್ವಹಣೆಯನ್ನು ಇಲಾಖೆ ಸಮರ್ಪಕವಾಗಿ ಮಾಡುತ್ತಿಲ್ಲ. ಬೇರು ಗಟ್ಟಿ ಇಲ್ಲದ ಮರಗಳನ್ನು ಹಾಗೆಯೇ ಬಿಟ್ಟಿದ್ದು, ಗಾಳಿ ಮಳೆಗೆ ಧರೆಗುರುಳುತ್ತಿವೆ. ದೊಡ್ಡ ಗಾತ್ರದ ಮರಗಳ ಕೊಂಬೆಗಳು ರಸ್ತೆಗಳಿಗೆ ಚಾಚಿಕೊಂಡಿವೆ. ಅದೇ ರೀತಿ ಒಣಗಿದ ಕೊಂಬೆಗಳನ್ನು ಹಾಗೆಯೇ ಬಿಡಲಾಗಿದೆ. ಅರಣ್ಯ ಇಲಾಖೆ ಜೊತೆಗೆ ನಗರಸಭೆ ಬೇಜವಾಬ್ದಾರಿ ತೋರುತ್ತಿರುವುದರಿಂದ ಜೀವ ಬಲಿಯಾಗಿದೆ ಎಂದು ಕಿಡಿಕಾರಿದರು.

ಇದನ್ನೂ ಓದಿ: ಕಾರವಾರ, ಶಿವಮೊಗ್ಗದಲ್ಲಿ ಕೈಕೊಟ್ಟ ಮತಯಂತ್ರ, ತಡವಾದ ಮತದಾನ - Voting Machine Problem

Last Updated : May 7, 2024, 12:41 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.