ETV Bharat / state

ಶಸ್ತ್ರಚಿಕಿತ್ಸೆಗೊಳಗಾದ ಯುವಕ ಸಾವು: ಆರೋಗ್ಯ ಇಲಾಖೆಯಿಂದ ತನಿಖೆ - Mangaluru Youth Dies

author img

By ETV Bharat Karnataka Team

Published : 17 hours ago

Updated : 16 hours ago

ಶಸ್ತ್ರಚಿಕಿತ್ಸೆಗೊಳಗಾದ ಯುವಕನೊಬ್ಬ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ.

MANGALURU YOUTH DIES
ಸಾಂದರ್ಭಿಕ ಚಿತ್ರ (ETV Bharat)

ಮಂಗಳೂರು: ಶಸ್ತ್ರಚಿಕಿತ್ಸೆಗೊಳಗಾದ ಉಳ್ಳಾಲದ 32 ವರ್ಷದ ಯುವಕನೊಬ್ಬ ಮೃತಪಟ್ಟ ಘಟನೆ ನಗರದ ಬೆಂದೂರ್‌ವೆಲ್‌ನಲ್ಲಿರುವ ಕಾಸ್ಮೆಟಿಕ್ ಸರ್ಜರಿ ಕೇಂದ್ರದಲ್ಲಿ ಸೆ.21ರಂದು ನಡೆದಿದೆ.

ತಾಯಿಯ ದೂರಿನ ವಿವರ: 'ಸರ್ಜರಿ ಮಾಡಿಸಲು ನಮ್ಮ ಪುತ್ರನನ್ನು ಕ್ಲಿನಿಕ್​ಗೆ ಕರೆದುಕೊಂಡು ಬರಲಾಗಿತ್ತು. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ ಬಳಿಕ ಆತನಿಗೆ ಪ್ರಜ್ಞೆ ಬಂದಿರಲಿಲ್ಲ. ಆ ಬಳಿಕ ಆತನನ್ನು ಮಂಗಳೂರಿನ ಮತ್ತೊಂದು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿಯ ವೈದ್ಯರು ಮೃತಪಟ್ಟಿದ್ದಾನೆಂದು ತಿಳಿಸಿದರು' ಎಂದು ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆತನಿಗೆ ಹೇರ್ ಟ್ರಾನ್ಸ್‌ಪ್ಲ್ಯಾಂಟ್ ಕ್ಲಿನಿಕ್​ನ ವೈದ್ಯರು ಚಿಕಿತ್ಸೆಯ ಸಮಯದಲ್ಲಿ ತೋರಿದ ನಿರ್ಲಕ್ಷ್ಯತದಿಂದ ಮೃತಪಟ್ಟಿರುವ ಸಂಶಯವಿದ್ದು, ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಂಬಂಧಿ ಕೂಡ ದೂರಿನಲ್ಲಿ ಆಗ್ರಹಿಸಿದ್ದಾರೆ.

ಈ ಕುರಿತು ಕದ್ರಿ ಪೊಲೀಸ್‌ ಠಾಣೆಯಲ್ಲಿ ಸಂಬಂಧಿಕರು ದೂರು ನೀಡಿದ್ದು, ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಆರೋಗ್ಯಾಧಿಕಾರಿ: ಜಿಲ್ಲಾ ಆರೋಗ್ಯಾಧಿಕಾರಿ ಡಾ. ಹೆಚ್​.ಆರ್.ತಿಮ್ಮಯ್ಯ ತಮ್ಮ ತಂಡದೊಂದಿಗೆ ಕ್ಲಿನಿಕ್​ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, "ಸೆ.21ರಂದು ಶಸ್ತ್ರಚಿಕಿತ್ಸೆಗೆ ಅವರು ಬಂದಿದ್ದರು. ಚಿಕಿತ್ಸೆಯ ಬಳಿಕ ಮೃತಪಟ್ಟಿರುವುದು ತಿಳಿದು ಬಂದಿದೆ. ಆರೋಗ್ಯ ಇಲಾಖೆಯ ತಂಡ ಪರಿಶೀಲನೆ ನಡೆಸಿ ಪ್ರಾಥಮಿಕ ವರದಿಯನ್ನು ದ.ಕ ಜಿಲ್ಲಾಧಿಕಾರಿಗೆ ನೀಡಲಿದೆ. ಸಮಗ್ರ ತನಿಖೆಗೆ ತಜ್ಞರ ತಂಡ ರಚಿಸಿ ವರದಿ ಕೊಡಲು ಸೂಚಿಸಲಾಗುವುದು. ಅವರು ನೀಡಿದ ವರದಿಯ‌ನ್ನು ಜಿಲ್ಲಾಧಿಕಾರಿ ಮತ್ತು ಆರೋಗ್ಯ ಇಲಾಖೆಯ ಸಚಿವರಿಗೆ ನೀಡಲಾಗುವುದು" ಎಂದು ತಿಳಿಸಿದ್ದಾರೆ.

ಜಿಲ್ಲಾ ಆರೋಗ್ಯಾಧಿಕಾರಿ ಪ್ರತಿಕ್ರಿಯೆ: ಈ ಸಂಬಂಧ 'ಈಟಿವಿ ಭಾರತ' ಜೊತೆಗೆ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಹೆಚ್.ಆರ್. ತಿಮ್ಮಯ್ಯ, ''ಘಟನೆ ಹಿನ್ನೆಲೆಯಲ್ಲಿ ಹೇರ್ ಟ್ರಾನ್ಸ್​ಪ್ಲ್ಯಾಂಟ್ ಕ್ಲಿನಿಕ್​ನಲ್ಲಿ ಪರಿಶೀಲನೆ ನಡೆಸಿ, ಅದನ್ನು ಬಂದ್ ಮಾಡಲಾಗಿದೆ. ಈ ಬಗ್ಗೆ ವರದಿ ನೀಡಲು ಆರೋಗ್ಯಾಧಿಕಾರಿಗಳ ನೇತೃತ್ವದ 8 ಮಂದಿ ತಜ್ಞ ವೈದ್ಯರ ತಂಡ ರಚಿಸಲಾಗಿದೆ. ಇವರು ಪರಿಶೀಲನೆ ನಡೆಸಿ ವರದಿ ನೀಡಲಿದ್ದಾರೆ'' ಎಂದು ತಿಳಿಸಿದರು.

ಇದನ್ನೂ ಓದಿ: ಸುಳ್ಯ ಆಸ್ಪತ್ರೆ ವೈದ್ಯರ ವರ್ತನೆಗೆ ಬೇಸತ್ತು ಕೇರಳ ನ್ಯಾಯಾಧೀಶರಿಂದಲೇ ಪೊಲೀಸ್ ದೂರು: ಏನಿದು ಘಟನೆ? - Complaint Against Doctors

ಮಂಗಳೂರು: ಶಸ್ತ್ರಚಿಕಿತ್ಸೆಗೊಳಗಾದ ಉಳ್ಳಾಲದ 32 ವರ್ಷದ ಯುವಕನೊಬ್ಬ ಮೃತಪಟ್ಟ ಘಟನೆ ನಗರದ ಬೆಂದೂರ್‌ವೆಲ್‌ನಲ್ಲಿರುವ ಕಾಸ್ಮೆಟಿಕ್ ಸರ್ಜರಿ ಕೇಂದ್ರದಲ್ಲಿ ಸೆ.21ರಂದು ನಡೆದಿದೆ.

ತಾಯಿಯ ದೂರಿನ ವಿವರ: 'ಸರ್ಜರಿ ಮಾಡಿಸಲು ನಮ್ಮ ಪುತ್ರನನ್ನು ಕ್ಲಿನಿಕ್​ಗೆ ಕರೆದುಕೊಂಡು ಬರಲಾಗಿತ್ತು. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ ಬಳಿಕ ಆತನಿಗೆ ಪ್ರಜ್ಞೆ ಬಂದಿರಲಿಲ್ಲ. ಆ ಬಳಿಕ ಆತನನ್ನು ಮಂಗಳೂರಿನ ಮತ್ತೊಂದು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿಯ ವೈದ್ಯರು ಮೃತಪಟ್ಟಿದ್ದಾನೆಂದು ತಿಳಿಸಿದರು' ಎಂದು ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆತನಿಗೆ ಹೇರ್ ಟ್ರಾನ್ಸ್‌ಪ್ಲ್ಯಾಂಟ್ ಕ್ಲಿನಿಕ್​ನ ವೈದ್ಯರು ಚಿಕಿತ್ಸೆಯ ಸಮಯದಲ್ಲಿ ತೋರಿದ ನಿರ್ಲಕ್ಷ್ಯತದಿಂದ ಮೃತಪಟ್ಟಿರುವ ಸಂಶಯವಿದ್ದು, ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಂಬಂಧಿ ಕೂಡ ದೂರಿನಲ್ಲಿ ಆಗ್ರಹಿಸಿದ್ದಾರೆ.

ಈ ಕುರಿತು ಕದ್ರಿ ಪೊಲೀಸ್‌ ಠಾಣೆಯಲ್ಲಿ ಸಂಬಂಧಿಕರು ದೂರು ನೀಡಿದ್ದು, ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಆರೋಗ್ಯಾಧಿಕಾರಿ: ಜಿಲ್ಲಾ ಆರೋಗ್ಯಾಧಿಕಾರಿ ಡಾ. ಹೆಚ್​.ಆರ್.ತಿಮ್ಮಯ್ಯ ತಮ್ಮ ತಂಡದೊಂದಿಗೆ ಕ್ಲಿನಿಕ್​ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, "ಸೆ.21ರಂದು ಶಸ್ತ್ರಚಿಕಿತ್ಸೆಗೆ ಅವರು ಬಂದಿದ್ದರು. ಚಿಕಿತ್ಸೆಯ ಬಳಿಕ ಮೃತಪಟ್ಟಿರುವುದು ತಿಳಿದು ಬಂದಿದೆ. ಆರೋಗ್ಯ ಇಲಾಖೆಯ ತಂಡ ಪರಿಶೀಲನೆ ನಡೆಸಿ ಪ್ರಾಥಮಿಕ ವರದಿಯನ್ನು ದ.ಕ ಜಿಲ್ಲಾಧಿಕಾರಿಗೆ ನೀಡಲಿದೆ. ಸಮಗ್ರ ತನಿಖೆಗೆ ತಜ್ಞರ ತಂಡ ರಚಿಸಿ ವರದಿ ಕೊಡಲು ಸೂಚಿಸಲಾಗುವುದು. ಅವರು ನೀಡಿದ ವರದಿಯ‌ನ್ನು ಜಿಲ್ಲಾಧಿಕಾರಿ ಮತ್ತು ಆರೋಗ್ಯ ಇಲಾಖೆಯ ಸಚಿವರಿಗೆ ನೀಡಲಾಗುವುದು" ಎಂದು ತಿಳಿಸಿದ್ದಾರೆ.

ಜಿಲ್ಲಾ ಆರೋಗ್ಯಾಧಿಕಾರಿ ಪ್ರತಿಕ್ರಿಯೆ: ಈ ಸಂಬಂಧ 'ಈಟಿವಿ ಭಾರತ' ಜೊತೆಗೆ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಹೆಚ್.ಆರ್. ತಿಮ್ಮಯ್ಯ, ''ಘಟನೆ ಹಿನ್ನೆಲೆಯಲ್ಲಿ ಹೇರ್ ಟ್ರಾನ್ಸ್​ಪ್ಲ್ಯಾಂಟ್ ಕ್ಲಿನಿಕ್​ನಲ್ಲಿ ಪರಿಶೀಲನೆ ನಡೆಸಿ, ಅದನ್ನು ಬಂದ್ ಮಾಡಲಾಗಿದೆ. ಈ ಬಗ್ಗೆ ವರದಿ ನೀಡಲು ಆರೋಗ್ಯಾಧಿಕಾರಿಗಳ ನೇತೃತ್ವದ 8 ಮಂದಿ ತಜ್ಞ ವೈದ್ಯರ ತಂಡ ರಚಿಸಲಾಗಿದೆ. ಇವರು ಪರಿಶೀಲನೆ ನಡೆಸಿ ವರದಿ ನೀಡಲಿದ್ದಾರೆ'' ಎಂದು ತಿಳಿಸಿದರು.

ಇದನ್ನೂ ಓದಿ: ಸುಳ್ಯ ಆಸ್ಪತ್ರೆ ವೈದ್ಯರ ವರ್ತನೆಗೆ ಬೇಸತ್ತು ಕೇರಳ ನ್ಯಾಯಾಧೀಶರಿಂದಲೇ ಪೊಲೀಸ್ ದೂರು: ಏನಿದು ಘಟನೆ? - Complaint Against Doctors

Last Updated : 16 hours ago
ETV Bharat Logo

Copyright © 2024 Ushodaya Enterprises Pvt. Ltd., All Rights Reserved.