ETV Bharat / state

ಆಗಸ್ಟ್ 16ರಿಂದ ಯುವ ಕಾಂಗ್ರೆಸ್ ಸದಸ್ಯತ್ವ ನೋಂದಣಿ, ಚುನಾವಣೆ: ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ - Youth Congress

ಆಗಸ್ಟ್ 16ರಿಂದ ಸೆಪ್ಟೆಂಬರ್ 16ರ ವರೆಗೆ ಯುವ ಕಾಂಗ್ರೆಸ್​ನಲ್ಲಿ ಸದಸ್ಯತ್ವ ನೋಂದಣಿ ಹಾಗೂ ಪಕ್ಷದ ಆಂತರಿಕ ಚುನಾವಣೆ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

author img

By ETV Bharat Karnataka Team

Published : Jul 27, 2024, 7:21 AM IST

ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್ (ETV Bharat)

ಬೆಂಗಳೂರು: ಹೊಸ ನಾಯಕರನ್ನು ಸೃಷ್ಟಿಸುವ ಉದ್ದೇಶದಿಂದ ಯುವ ಕಾಂಗ್ರೆಸ್​ನಲ್ಲಿ ಆಗಸ್ಟ್ 16ರಿಂದ ಸೆಪ್ಟೆಂಬರ್ 16ರ ವರೆಗೆ ಸದಸ್ಯತ್ವ ನೋಂದಣಿ ಹಾಗೂ ಪಕ್ಷದ ಆಂತರಿಕ ಚುನಾವಣೆ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಮಾಧ್ಯಮಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಜುಲೈ 24ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಆಗಸ್ಟ್ 2ರ ವರೆಗೆ ನಾಮಪತ್ರ ಸಲ್ಲಿಕೆಗೆ ಅಂತಿಮ ದಿನ. ಆಗಸ್ಟ್ 3ರಿಂದ 8ರ ವರೆಗೆ ನಾಮಪತ್ರ ಪರಿಶೀಲನೆ, ಆಗಸ್ಟ್ 9ರಂದು ನಾಮಪತ್ರ ಅಂತಿಮ ಮಾಡಲಾಗುವುದು. ಚುನಾವಣೆಯಲ್ಲಿ ಅತಿ ಹೆಚ್ಚು ಮತ ಪಡೆಯುವವರು ಅಧ್ಯಕ್ಷರಾಗಿ ಆಯ್ಕೆಯಾದರೆ, ಬಳಿಕ ಮತಗಳ ಆಧಾರದ ಮೇಲೆ ನಂತರದ ಸ್ಥಾನ ಪಡೆಯುವರಿಗೆ ಇತರೆ ಸ್ಥಾನ ನೀಡಲಾಗುವುದು. ಈ ವೇಳೆ ಪಕ್ಷವು ಅಗ್ರ ಮೂರು ಸ್ಥಾನ ಪಡೆದವರ ಸಂದರ್ಶನವನ್ನು ಮಾಡಲಿದೆ ಎಂದರು.

ಸದಸ್ಯತ್ವ ನೋಂದಣಿಯನ್ನು ಆಗಸ್ಟ್ 16 ರಿಂದ ಸೆಪ್ಟೆಂಬರ್ 16ರ ವರೆಗೂ ನಡೆಯಲಿದೆ. ಆನ್​ಲೈನ್ ಮೂಲಕ ಸದಸ್ಯತ್ವ ನೋಂದಣಿ ಮಾಡಿಕೊಳ್ಳಬಹುದು. ಸದಸ್ಯತ್ವ ಪಡೆಯಲು 35 ವರ್ಷದೊಳಗಿನವರಾಗಿರಬೇಕು. ಸದಸ್ಯತ್ವ ನೋಂದಣಿ ಶುಲ್ಕ 50 ರೂಪಾಯಿ ಕಟ್ಟಬೇಕು ಸದಸ್ಯತ್ವ ಪಡೆದ ದಿನದಿಂದಲೇ ಬ್ಲಾಕ್, ಜಿಲ್ಲಾ ಹಾಗೂ ರಾಜ್ಯಾಧ್ಯಕ್ಷರ ಆಯ್ಕೆಗೆ ಮತದಾನ ಮಾಡಬಹುದು. ಓರ್ವ ಸದಸ್ಯ ಆರು ಮಂದಿ ಪದಾಧಿಕಾರಿಗಳಿಗೆ ಮತ ಹಾಕುವ ಅಧಿಕಾರವಿರುತ್ತದೆ ಎಂದು ಹೇಳಿದರು.

ಇಡೀ ದೇಶದಲ್ಲಿ ಪಂಚಾಯಿತಿಯಿಂದ ಸಂಸತ್ತಿನವರೆಗೂ ನಾಯಕರು ಇರಬೇಕು. ಅವರಿಗೆ ಜವಾಬ್ದಾರಿ ಇರಬೇಕು ಎಂದು ರಾಜೀವ್ ಗಾಂಧಿ ಅವರು ಒಂದು ಹೊಸ ಚಳವಳಿ ಆರಂಭಿಸಿದ್ದರು. ನಾನು ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷನಾಗಿದ್ದಾಗ ರಾಜೀವ್, ನಾಯಕರನ್ನು ಹುಟ್ಟುಹಾಕುವವನೇ ನಿಜವಾದ ನಾಯಕ ಎಂದು ಹೇಳಿದ್ದರು. ಅದೇ ರೀತಿ ರಾಹುಲ್ ಗಾಂಧಿ ಈಗ ಯುವ ನಾಯಕರನ್ನು ಸೃಷ್ಟಿ ಮಾಡಲು ಈ ಹೆಜ್ಜೆ ಇಟ್ಟಿದ್ದಾರೆ ಎಂದು ತಿಳಿಸಿದರು.

ಎಲ್ಲ ವರ್ಗದವರಿಗೆ ಮೀಸಲಾತಿ: ಈ ಚುನಾವಣೆಯಲ್ಲಿ ಮಹಿಳೆಯರು, ಪರಿಶಿಷ್ಟರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲ ವರ್ಗದವರಿಗೆ ಮೀಸಲಾತಿ ನೀಡಲಾಗುವುದು. ಬಳ್ಳಾರಿ, ಮಂಡ್ಯ, ಬಾಗಲಕೋಟೆ, ಬೆಳಗಾವಿ, ಬೆಂಗಳೂರು ಕೇಂದ್ರ ಸೇರಿದಂತೆ ಐದು ಜಿಲ್ಲೆಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ನೀಡಲಾಗಿದೆ ಎಂದು ಡಿಕೆಶಿ ಮಾಹಿತಿ ನೀಡಿದರು.

ಮಹಾತ್ಮ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿ 100 ವರ್ಷ - ವಿಶೇಷ ಕಾರ್ಯಕ್ರಮ: ಇದೇ ವೇಳೆ ಮಹಾತ್ಮ ಗಾಂಧಿ ಕಾಂಗ್ರೆಸ್ ಪಕ್ಷದ ನಾಯಕತ್ವ ವಹಿಸಿ 100 ವರ್ಷ ಪೂರ್ಣಗೊಂಡಿದೆ. ಕಾಂಗ್ರೆಸ್ ನಾಯಕತ್ವ ವಹಿಸಿಕೊಂಡು ಗಾಂಧೀಜಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರ ಈ ಸುಸಂದರ್ಭವನ್ನು ಉಪಯೋಗಿಸಿಕೊಂಡು ಸಂಭ್ರಮಾಚರಣೆ ಮಾಡಲು ಕಾರ್ಯಕ್ರಮ ರೂಪಿಸಲು ತೀರ್ಮಾನಿಸಿದ್ದೇವೆ ಎಂದು ಡಿಸಿಎಂ ಹೇಳಿದರು.

ಈ ಸಂಬಂಧ ಹೆಚ್.ಕೆ ಪಾಟೀಲ್ ಅಧ್ಯಕ್ಷತೆಯಲ್ಲಿ ವೀರಪ್ಪ ಮೋಯ್ಲಿ ಮಾರ್ಗದರ್ಶಕರಾಗಿ, ಸಲಹಾ ಸಮಿತಿ ರಚಿಸಲಾಗುವುದು. ಬಿ.ಎಲ್ ಶಂಕರ್ ಸಂಯೋಜಕರಾಗಿರಲಿದ್ದು, 15 ಜನ ವಿವಿಧ ಘಟಕಗಳ ಅಧ್ಯಕ್ಷರು ಸೇರಿದಂತೆ 60 ಸದಸ್ಯರುಗಳ ಸಮಿತಿ ಇದಾಗಿದೆ. ಚರ್ಚೆ ಮಾಡಿ ಸರ್ಕಾರದ ವತಿಯಿಂದ ಹಾಗೂ ಪಕ್ಷದ ವತಿಯಿಂದ ಯಾವ ಕಾರ್ಯಕ್ರಮ ಮಾಡಬಹುದು ಎಂದು ಸಲಹೆ ನೀಡಲಿದ್ದಾರೆ ಎಂದರು.

ಇದನ್ನೂ ಓದಿ: ರಾಮ ಅಲ್ಲೇ ಇರುತ್ತಾರೆ, ರಾಮನಗರವೂ ಅಲ್ಲೇ ಇರುತ್ತೆ: ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು: ಹೊಸ ನಾಯಕರನ್ನು ಸೃಷ್ಟಿಸುವ ಉದ್ದೇಶದಿಂದ ಯುವ ಕಾಂಗ್ರೆಸ್​ನಲ್ಲಿ ಆಗಸ್ಟ್ 16ರಿಂದ ಸೆಪ್ಟೆಂಬರ್ 16ರ ವರೆಗೆ ಸದಸ್ಯತ್ವ ನೋಂದಣಿ ಹಾಗೂ ಪಕ್ಷದ ಆಂತರಿಕ ಚುನಾವಣೆ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಮಾಧ್ಯಮಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಜುಲೈ 24ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಆಗಸ್ಟ್ 2ರ ವರೆಗೆ ನಾಮಪತ್ರ ಸಲ್ಲಿಕೆಗೆ ಅಂತಿಮ ದಿನ. ಆಗಸ್ಟ್ 3ರಿಂದ 8ರ ವರೆಗೆ ನಾಮಪತ್ರ ಪರಿಶೀಲನೆ, ಆಗಸ್ಟ್ 9ರಂದು ನಾಮಪತ್ರ ಅಂತಿಮ ಮಾಡಲಾಗುವುದು. ಚುನಾವಣೆಯಲ್ಲಿ ಅತಿ ಹೆಚ್ಚು ಮತ ಪಡೆಯುವವರು ಅಧ್ಯಕ್ಷರಾಗಿ ಆಯ್ಕೆಯಾದರೆ, ಬಳಿಕ ಮತಗಳ ಆಧಾರದ ಮೇಲೆ ನಂತರದ ಸ್ಥಾನ ಪಡೆಯುವರಿಗೆ ಇತರೆ ಸ್ಥಾನ ನೀಡಲಾಗುವುದು. ಈ ವೇಳೆ ಪಕ್ಷವು ಅಗ್ರ ಮೂರು ಸ್ಥಾನ ಪಡೆದವರ ಸಂದರ್ಶನವನ್ನು ಮಾಡಲಿದೆ ಎಂದರು.

ಸದಸ್ಯತ್ವ ನೋಂದಣಿಯನ್ನು ಆಗಸ್ಟ್ 16 ರಿಂದ ಸೆಪ್ಟೆಂಬರ್ 16ರ ವರೆಗೂ ನಡೆಯಲಿದೆ. ಆನ್​ಲೈನ್ ಮೂಲಕ ಸದಸ್ಯತ್ವ ನೋಂದಣಿ ಮಾಡಿಕೊಳ್ಳಬಹುದು. ಸದಸ್ಯತ್ವ ಪಡೆಯಲು 35 ವರ್ಷದೊಳಗಿನವರಾಗಿರಬೇಕು. ಸದಸ್ಯತ್ವ ನೋಂದಣಿ ಶುಲ್ಕ 50 ರೂಪಾಯಿ ಕಟ್ಟಬೇಕು ಸದಸ್ಯತ್ವ ಪಡೆದ ದಿನದಿಂದಲೇ ಬ್ಲಾಕ್, ಜಿಲ್ಲಾ ಹಾಗೂ ರಾಜ್ಯಾಧ್ಯಕ್ಷರ ಆಯ್ಕೆಗೆ ಮತದಾನ ಮಾಡಬಹುದು. ಓರ್ವ ಸದಸ್ಯ ಆರು ಮಂದಿ ಪದಾಧಿಕಾರಿಗಳಿಗೆ ಮತ ಹಾಕುವ ಅಧಿಕಾರವಿರುತ್ತದೆ ಎಂದು ಹೇಳಿದರು.

ಇಡೀ ದೇಶದಲ್ಲಿ ಪಂಚಾಯಿತಿಯಿಂದ ಸಂಸತ್ತಿನವರೆಗೂ ನಾಯಕರು ಇರಬೇಕು. ಅವರಿಗೆ ಜವಾಬ್ದಾರಿ ಇರಬೇಕು ಎಂದು ರಾಜೀವ್ ಗಾಂಧಿ ಅವರು ಒಂದು ಹೊಸ ಚಳವಳಿ ಆರಂಭಿಸಿದ್ದರು. ನಾನು ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷನಾಗಿದ್ದಾಗ ರಾಜೀವ್, ನಾಯಕರನ್ನು ಹುಟ್ಟುಹಾಕುವವನೇ ನಿಜವಾದ ನಾಯಕ ಎಂದು ಹೇಳಿದ್ದರು. ಅದೇ ರೀತಿ ರಾಹುಲ್ ಗಾಂಧಿ ಈಗ ಯುವ ನಾಯಕರನ್ನು ಸೃಷ್ಟಿ ಮಾಡಲು ಈ ಹೆಜ್ಜೆ ಇಟ್ಟಿದ್ದಾರೆ ಎಂದು ತಿಳಿಸಿದರು.

ಎಲ್ಲ ವರ್ಗದವರಿಗೆ ಮೀಸಲಾತಿ: ಈ ಚುನಾವಣೆಯಲ್ಲಿ ಮಹಿಳೆಯರು, ಪರಿಶಿಷ್ಟರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲ ವರ್ಗದವರಿಗೆ ಮೀಸಲಾತಿ ನೀಡಲಾಗುವುದು. ಬಳ್ಳಾರಿ, ಮಂಡ್ಯ, ಬಾಗಲಕೋಟೆ, ಬೆಳಗಾವಿ, ಬೆಂಗಳೂರು ಕೇಂದ್ರ ಸೇರಿದಂತೆ ಐದು ಜಿಲ್ಲೆಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ನೀಡಲಾಗಿದೆ ಎಂದು ಡಿಕೆಶಿ ಮಾಹಿತಿ ನೀಡಿದರು.

ಮಹಾತ್ಮ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿ 100 ವರ್ಷ - ವಿಶೇಷ ಕಾರ್ಯಕ್ರಮ: ಇದೇ ವೇಳೆ ಮಹಾತ್ಮ ಗಾಂಧಿ ಕಾಂಗ್ರೆಸ್ ಪಕ್ಷದ ನಾಯಕತ್ವ ವಹಿಸಿ 100 ವರ್ಷ ಪೂರ್ಣಗೊಂಡಿದೆ. ಕಾಂಗ್ರೆಸ್ ನಾಯಕತ್ವ ವಹಿಸಿಕೊಂಡು ಗಾಂಧೀಜಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರ ಈ ಸುಸಂದರ್ಭವನ್ನು ಉಪಯೋಗಿಸಿಕೊಂಡು ಸಂಭ್ರಮಾಚರಣೆ ಮಾಡಲು ಕಾರ್ಯಕ್ರಮ ರೂಪಿಸಲು ತೀರ್ಮಾನಿಸಿದ್ದೇವೆ ಎಂದು ಡಿಸಿಎಂ ಹೇಳಿದರು.

ಈ ಸಂಬಂಧ ಹೆಚ್.ಕೆ ಪಾಟೀಲ್ ಅಧ್ಯಕ್ಷತೆಯಲ್ಲಿ ವೀರಪ್ಪ ಮೋಯ್ಲಿ ಮಾರ್ಗದರ್ಶಕರಾಗಿ, ಸಲಹಾ ಸಮಿತಿ ರಚಿಸಲಾಗುವುದು. ಬಿ.ಎಲ್ ಶಂಕರ್ ಸಂಯೋಜಕರಾಗಿರಲಿದ್ದು, 15 ಜನ ವಿವಿಧ ಘಟಕಗಳ ಅಧ್ಯಕ್ಷರು ಸೇರಿದಂತೆ 60 ಸದಸ್ಯರುಗಳ ಸಮಿತಿ ಇದಾಗಿದೆ. ಚರ್ಚೆ ಮಾಡಿ ಸರ್ಕಾರದ ವತಿಯಿಂದ ಹಾಗೂ ಪಕ್ಷದ ವತಿಯಿಂದ ಯಾವ ಕಾರ್ಯಕ್ರಮ ಮಾಡಬಹುದು ಎಂದು ಸಲಹೆ ನೀಡಲಿದ್ದಾರೆ ಎಂದರು.

ಇದನ್ನೂ ಓದಿ: ರಾಮ ಅಲ್ಲೇ ಇರುತ್ತಾರೆ, ರಾಮನಗರವೂ ಅಲ್ಲೇ ಇರುತ್ತೆ: ಗೃಹ ಸಚಿವ ಜಿ.ಪರಮೇಶ್ವರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.