thumbnail

LIVE: ಬೆಂಗಳೂರಲ್ಲಿ ವಿಜಯ ಸಂಕಲ್ಪ ಸಮಾವೇಶ; ಅಮಿತ್ ಶಾ ಭಾಗಿ - Amith shah meeting

By ETV Bharat Karnataka Team

Published : Apr 2, 2024, 12:21 PM IST

Updated : Apr 2, 2024, 2:00 PM IST

ಬೆಂಗಳೂರು: ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ,‌ ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಶಕ್ತಿ ಪ್ರಮುಖರ ಸಮ್ಮೇಳನ. ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬೆಂಗಳೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಡಾ. ಸಿ ಎನ್ ಮಂಜುನಾಥ್, ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ. ಸುಧಾಕರ್‌, ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ, ಬೆಂಗಳೂರು ಕೇಂದ್ರ ಬಿಜೆಪಿ ಅಭ್ಯರ್ಥಿ ಪಿ.ಸಿ ಮೋಹನ್, ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್, ಎಸ್. ರಘು, ರವಿ ಸುಬ್ರಹ್ಮಣ್ಯ, ಸತೀಶ್ ರೆಡ್ಡಿ, ಉದಯ್ ಗರುಡಾಚಾರ್, ಎಮ್ ಕೃಷ್ಣಪ್ಪ, ಗೋಪಾಲಯ್ಯ, ಧೀರಜ್ ಮುನಿರಾಜು, ಸುರೇಶ್ ಕುಮಾರ್, ಮುನಿರತ್ನ, ಪರಿಷತ್ ಸದಸ್ಯ ರವಿಕುಮಾರ್, ಗೋಪಿನಾಥ್ ರೆಡ್ಡಿ, ಭಾರತಿ ಶೆಟ್ಟಿ, ಮಾಜಿ ಸಚಿವ ಎಂ.ಟಿ ಬಿ ನಾಗರಾಜ್, ಬೆಂಗಳೂರು ಉತ್ತರ ಲೋಕಸಭಾ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಭಾಗಿಯಾಗಿದ್ದಾರೆ.ಹಾಗೆಯೇ ಐದು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಬೂತ್ ಅಧ್ಯಕ್ಷರು, ವಾರ್ಡ್ ಸಮಿತಿ ಸದಸ್ಯರು, ಮಂಡಲ ಅಧ್ಯಕ್ಷರು, ಜಿಲ್ಲಾಧ್ಯಕ್ಷರು, ಜಿಲ್ಲೆಯ ಎಲ್ಲಾ ಸಂಘಟನಾತ್ಮಕ ಪದಾಧಿಕಾರಿಗಳು ಹಾಗೂ ಹಾಲಿ‌ ಮಾಜಿ ಶಾಸಕರು, ಸಂಸದರು ಭಾಗಿಯಾಗಿದ್ದಾರೆ.
Last Updated : Apr 2, 2024, 2:00 PM IST

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.