ಹಾಲಿನ ದರ ಏರಿಕೆ, ವಿದ್ಯುತ್ ಬಿಲ್ ಹೆಚ್ಚಳ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಿನೂತನ ಪ್ರತಿಭಟನೆ - BJP conduct innovative protest

By ETV Bharat Karnataka Team

Published : Jul 1, 2024, 4:32 PM IST

thumbnail
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಿನೂತನ ಪ್ರತಿಭಟನೆ (ETV Bharat)

ದಾವಣಗೆರೆ: ಹಾಲಿನ ದರ ಏರಿಕೆ ಹಾಗೂ ವಿದ್ಯುತ್ ಬಿಲ್ ಹೆಚ್ಚು ಬಂದಿದ್ದರಿಂದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡು, ರಾಜ್ಯ ಸರ್ಕಾರದ ನಡೆಯನ್ನು ಬಿಜೆಪಿ ರೈತ ಮೋರ್ಚಾ ಖಂಡಿಸಿತು. ರೈತಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ್, ಮಾಜಿ ಸಚಿವ ಎಸ್ ಎ ರವೀಂದ್ರನಾಥ್ ನೇತೃತ್ವದಲ್ಲಿ ಪ್ರತಿಭಟನೆ ಜರುಗಿತು.‌ 

ರಾಜ್ಯ ಸರ್ಕಾರ ಹಾಲಿನ‌ದರ ಏರಿಕೆ ಮಾಡಿದ ಹಿನ್ನೆಲೆ ಮೂರು ಆಕಳು ಹಿಡಿದು ಮೆರವಣಿಗೆ ಮಾಡಿ, ವಿನೂತನವಾಗಿ ಪ್ರತಿಭಟಿಸಲಾಯಿತು. ಅಲ್ಲದೇ ವಿದ್ಯುತ್ ಬಿಲ್ ಹೆಚ್ಚು ಬಂದಿರುವ ಬೆನ್ನಲ್ಲೇ ಟ್ರ್ಯಾಕ್ಟರ್​​​ನಲ್ಲಿ ಟ್ರಾನ್ಸ್​ಫಾರಂ ಇಟ್ಟು ಮೆರವಣಿಗೆ ಮಾಡಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.  

ದಾವಣಗೆರೆ ನಗರದ ಜಯದೇವ ವೃತ್ತದಿಂದ ಎಸಿ ಕಚೇರಿತನಕ ಪ್ರತಿಭಟನೆ ಮೆರವಣಿಗೆ ನಡೆಸಿ, ಮಹಾನಗರ ಪಾಲಿಕೆ, ಎಸಿ ಕಚೇರಿ ಬಳಿ ಸರಪಳಿ ವೃತ್ತ ನಿರ್ಮಿಸಿ ವಾಹನ ತಡೆಗಟ್ಟಿ ರಾಜ್ಯ ಸರ್ಕಾರದ ನಡೆಯ ವಿರುದ್ಧ ಘೋಷಣೆ ಕೂಗಲಾಯಿತು. ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ಬಿಜೆಪಿ ಕಾರ್ಯಕರ್ತರು ಎಸಿಯವರಿಗೆ ಮನವಿ ಸಲ್ಲಿಸಿದರು. 

ಇದನ್ನೂ ಓದಿ :  ಹಾಲಿನ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಹಸುಗಳೊಂದಿಗೆ ಬಿಜೆಪಿ ಪ್ರತಿಭಟನೆ - BJp protest

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.