thumbnail

ಉಡುಪಿಯಲ್ಲಿ ಕ್ರಿಕೆಟರ್‌ ಸೂರ್ಯಕುಮಾರ್ ಯಾದವ್ ದಂಪತಿ; ದೈವಸ್ಥಾನದ ದರ್ಶನ- ವಿಡಿಯೋ - Suryakumar Yadav Visits Udupi

By ETV Bharat Karnataka Team

Published : Jul 9, 2024, 2:27 PM IST

ಉಡುಪಿ: ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೈವಸ್ಥಾನಕ್ಕೆ ಇಂದು ಭಾರತೀಯ ಕ್ರಿಕೆಟ್ ತಂಡದ ಆಟಗಾರ ಸೂರ್ಯಕುಮಾರ್ ಯಾದವ್ ಭೇಟಿ ನೀಡಿದರು. ಪತ್ನಿ ದೇವಿಶಾ ಶೆಟ್ಟಿ ಜೊತೆಗಿದ್ದರು.

2024ರ ಟಿ20 ವಿಶ್ವಕಪ್ ಅನ್ನು ಭಾರತ ತನ್ನ ಮುಡಿಗೇರಿಸಿಕೊಂಡಿದ್ದು, ಈ ಗೆಲುವಿಗೆ ಕಾರಣೀಕರ್ತರಲ್ಲೋರ್ವರು ಸೂರ್ಯಕುಮಾರ್ ಯಾದವ್. 

ದಂಪತಿಯನ್ನು ಶಾಸಕ, ಕಾಪು ಶ್ರೀ ಹೊಸಮಾರಿಗುಡಿ ದೈವಸ್ಥಾನದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ ಅಭಿನಂದಿಸಿದರು. ದೈವಸ್ಥಾನದಲ್ಲಿ ದಂಪತಿ ವಿಶೇಷ ಪೂಜೆ ಸಲ್ಲಿಸಿದರು. 

ಇದನ್ನೂ ಓದಿ: ಮಕ್ಕಳಿಗೆ ಡೆಂಗ್ಯೂ ಬಾಧೆ​: ರಾಜ್ಯದಲ್ಲಿ ಪ್ರಕರಣಗಳು ಏರಿಕೆ; ಝಿಕಾ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ, ಉಚಿತ ಚಿಕಿತ್ಸೆ - Dengue Cases

ಕಾಪು ಶ್ರೀ ಹೊಸ ಮಾರಿಗುಡಿ ಉಡುಪಿಯ ಪ್ರಸಿದ್ಧ ದೈವಸ್ಥಾನವಾಗಿದ್ದು, ಹೆಚ್ಚಿನ ಸಂಖ್ಯೆಯ ಭಕ್ತರು ಇಲ್ಲಿಗೆ ಭೇಟಿ ಕೊಡುತ್ತಾರೆ.

ಟಿ20 ವಿಶ್ವಕಪ್‌ ಫೈನಲ್‌ನಲ್ಲಿ ಸೂರ್ಯಕುಮಾರ್ ಅದ್ಭುತ ಕ್ಯಾಚ್‌ ಇಂಟರ್‌ನೆಟ್‌ನಲ್ಲಿ ವ್ಯಾಪಕವಾಗಿ ಧೂಳೆಬ್ಬಿಸಿತ್ತು. 

ಇದನ್ನೂ ಓದಿ: ದರ್ಶನ್ ಜೈಲುವಾಸದ ಮಧ್ಯೆ 2005ರ ಮಾಸ್‌ ಹಿಟ್‌ 'ಶಾಸ್ತ್ರೀ' ಶುಕ್ರವಾರ ಮರು ಬಿಡುಗಡೆ - Shastri Re Release

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.