ಬಾವಿಯಲ್ಲಿ ಮೊಸಳೆ ಪತ್ತೆ! ಸೆರೆ ಹಿಡಿಯಲು ನಾನಾ ಕಸರತ್ತು- ವಿಡಿಯೋ - Crocodile

By ETV Bharat Karnataka Team

Published : Jul 31, 2024, 11:10 AM IST

thumbnail
ಮೊಸಳೆ ಸೆರೆಗೆ ಹರಸಾಹಸ (ETV Bharat)

ಉಡುಪಿ: ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮ ಪಂಚಾಯತ್​​ ವ್ಯಾಪ್ತಿಯ ನಾಗೂರಿನ ಬಾವಿಯೊಂದರಲ್ಲಿ ಮಂಗಳವಾರ ಮೊಸಳೆ ಪ್ರತ್ಯಕ್ಷವಾಗಿದೆ. ನಾಗೂರು ಗ್ರಾಮದ ಒಡೆಯ ಮಠ ವಿಶ್ವನಾಥ ಉಡುಪರ ಮನೆಯ ಬಾವಿಯಲ್ಲಿ ಮೊಸಳೆ ಕಾಣಿಸಿಕೊಂಡಿದೆ. ಈ ಬಗ್ಗೆ ಮಾಹಿತಿ ಪಡೆದ ಬೈಂದೂರು ಅರಣ್ಯ, ಪೊಲೀಸ್​​ ಇಲಾಖೆ ಸಿಬ್ಬಂದಿ ಅಗ್ನಿಶಾಮಕ ದಳದವರ ಸಹಾಯದೊಂದಿಗೆ ಬಾವಿಗೆ ಬಲೆ ಹಾಕಿ ಕಾರ್ಯಾಚರಣೆ ನಡೆಸಿದರೂ ಮೊಸಳೆ ಬಲೆಗೆ ಬಿದ್ದಿಲ್ಲ.

ಬಳಿಕ ಸ್ಥಳೀಯರ ಸಹಾಯದಿಂದ ಅರಣ್ಯ ಇಲಾಖೆ ಸಿಬ್ಬಂದಿ ಮೊಸಳೆಗೆ ಬೋನ್​ ಇಟ್ಟು ನಾಗೂರು ನೆಟ್ವರ್ಕ್ ಆ್ಯಂಡ್ ಸೆಕ್ಯೂರಿಟಿ ಸೊಲ್ಯೂಷನ್​ ನೆರವಿನೊಂದಿಗೆ ಬಾವಿಯ ಸುತ್ತ ಸಿಸಿ ಕ್ಯಾಮೆರಾ ಅಳವಡಿಸಿದ್ದಾರೆ. ಈ ಮೂಲಕ ದೂರದಿಂದ ಕಂಪ್ಯೂಟರ್​ ಮೂಲಕ ಮೊಸಳೆಯ ಓಡಾಟವನ್ನು ಗಮನಿಸಲಾಗುತ್ತಿದೆ. 

ಮೊಸಳೆ ಬಾವಿಯಿಂದ ಹೊರಬರಲು ಬಾವಿಯ ದಂಡೆಯನ್ನು ನೆಲಸಮಾನಕ್ಕೆ ಒಡೆದು ಬೋನಿಗೆ ಕೋಳಿ ಮಾಂಸ ಇಡಲಾಗಿದೆ. ನೂರಾರು ಜನ ಘಟನಾ ಸ್ಥಳಕ್ಕೆ ಬರುತ್ತಿದ್ದಾರೆ. ಸದ್ಯ ಸಿಸಿ ಕ್ಯಾಮೆರಾ ಮೂಲಕ ಚಲನವಲನದ ಬಗ್ಗೆ ನಿಗಾ ಇಡಲಾಗಿದೆ.

ಇದನ್ನೂ ಓದಿ: ನವೀಲುತೀರ್ಥ ಡ್ಯಾಂನಿಂದ ನೀರು‌ ಬಿಡುಗಡೆ: ಒಂದೆಡೆ ಮೊಸಳೆ ಮತ್ತೊಂದೆಡೆ ಪ್ರವಾಹ ಆತಂಕ - Navilutheertha Reservoir

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.