ಬಿಆರ್ಟಿಯಲ್ಲಿ ಬೆಂಕಿ: 50ಕ್ಕೂ ಹೆಚ್ಚು ಎಕರೆ ಕಾಡು ಭಸ್ಮ - DCF Deep J Contractor
🎬 Watch Now: Feature Video
Published : Mar 4, 2024, 9:17 PM IST
ಚಾಮರಾಜನಗರ : ಬಿಆರ್ಟಿ ಸಂರಕ್ಷಿತ ಪ್ರದೇಶದಲ್ಲಿ ಇಂದು ಬೆಂಕಿ ಕಾಣಿಸಿಕೊಂಡು 50ಕ್ಕೂ ಹೆಚ್ಚು ಎಕರೆ ಪ್ರದೇಶ ಸುಟ್ಟು ಕರಕಲಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಪುಣಜನೂರು ವಲಯದಲ್ಲಿ ನಡೆದಿದೆ. ಬಿಳಿಗಿರಿರಂಗನಾಥ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯದ 3 ಕಡೆ ಬೆಂಕಿ ಬಿದ್ದಿದ್ದು, ಎರಡು ಕಡೆ ಬೆಂಕಿ ಹತೋಟಿಗೆ ಬಂದಿದೆ. ಒಂದು ಕಡೆ ಬೆಂಕಿ ನಂದಿಸಲು ಅರಣ್ಯ ಇಲಾಖೆ ಹರಸಾಹಸ ಪಡುತ್ತಿದೆ.
ಈ ಕುರಿತು ಬಿಆರ್ಟಿ ಡಿಸಿಎಫ್ ದೀಪ್ ಜೆ ಕಂಟ್ರಾಕ್ಟರ್ ಮಾತನಾಡಿ, ಪುಣಜನೂರು ವಲಯದ ಮೂರು ಕಡೆ ಬೆಂಕಿ ಬಿದ್ದಿತ್ತು. 2 ಕಡೆ ಬೆಂಕಿ ನಂದಿಸಲಾಗಿದ್ದು, 1 ಕಡೆ ಬೆಂಕಿ ನಂದಿಸಲಾಗುತ್ತಿದೆ. ಗ್ರೌಂಡ್ ಫೈರ್ ಆಗಿದ್ದು, 40 - 50 ಎಕರೆ ಪ್ರದೇಶದಲ್ಲಿ ಬೆಂಕಿ ಬಿದ್ದಿದೆ ಎಂದು ತಿಳಿಸಿದ್ದಾರೆ.
ಕೆಮ್ಮಣ್ಣುಗುಂಡಿ ಅರಣ್ಯ ಪ್ರದೇಶದಲ್ಲಿ ಕಾಳ್ಗಿಚ್ಚು: ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕೆಮ್ಮಣ್ಣು ಗುಂಡಿಯ ಗುಡ್ಡದಲ್ಲಿ ಬೆಂಕಿ ಹೊತ್ತಿ ಉರಿದು ನೂರಾರು ಎಕರೆ ಪ್ರದೇಶ ಸಂಪೂರ್ಣ (ಫೆಬ್ರವರಿ 19, 24) ನಾಶವಾಗಿತ್ತು. ಕೆಮ್ಮಣ್ಣುಗುಂಡಿ ಝಡ್ ಪಾಯಿಂಟ್ ಸಮೀಪದ ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ಗುಡ್ಡ ಭದ್ರ ಹುಲಿ ಸಂರಕ್ಷಿತಾರಣ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಬೆಂಕಿ ಧಗಧಗನೆ ಹೊತ್ತಿ ಉರಿಯುತ್ತಿರುವ ಕಾರಣ ಸಸ್ಯ ರಾಶಿ ಸೇರಿದಂತೆ ನೂರಾರು ಎಕರೆ ಗುಡ್ಡ ಪ್ರದೇಶ ನಾಶವಾಗಿತ್ತು.
ಇದನ್ನೂ ಓದಿ : ಕೆಮ್ಮಣ್ಣುಗುಂಡಿ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು : ವಿಡಿಯೋ