thumbnail

ಕರ್ನಾಟಕ ವಿಧಾನಸಭೆ ಮುಂಗಾರು ಅಧಿವೇಶನ: ನೇರಪ್ರಸಾರ - Assembly session Live

By ETV Bharat Karnataka Team

Published : Jul 15, 2024, 11:19 AM IST

Updated : Jul 15, 2024, 1:26 PM IST

ಬೆಂಗಳೂರು: ಇಂದಿನಿಂದ ರಾಜ್ಯ ವಿಧಾನಮಂಡಲ ಮುಂಗಾರು ಅಧಿವೇಶನವು ನಡೆಯುತ್ತಿದೆ. ಜುಲೈ 26ರವರೆಗೆ ಒಟ್ಟು 9 ದಿನಗಳ ಕಾಲ ರಾಜ್ಯ ಮುಂಗಾರು ಅಧಿವೇಶನ ಇರಲಿದೆ. ಈ ಬಾರಿಯ ಕಲಾಪದಲ್ಲಿ ಶಾಸಕರ ಹಾಜರಾತಿಯನ್ನು ಗುರುತಿಸಲು ಎಐ ಆಧಾರಿತ ಕ್ಯಾಮರಾ ಬಳಕೆ ಮಾಡಲಾಗುತ್ತಿದೆ. ಅಧಿವೇಶನ ಆರಂಭದ ದಿನವಾದ ಇಂದು ಇತ್ತೀಚೆಗೆ ನಿಧನ ಹೊಂದಿರುವ ಗಣ್ಯರಿಗೆ ಸಂತಾಪ ಸೂಚಿಸುವ ನಿರ್ಣಯ ಮಂಡನೆ ಮಾಡಲಾಗುತ್ತಿದೆ. ಬಳಿಕ ಅಧಿವೇಶನದಲ್ಲಿ ಸರ್ಕಾರದಿಂದ ಸ್ವೀಕರಿಸಲಾಗುವ ವಿಧೇಯಕಗಳನ್ನು ಪರ್ಯಾಲೋಚನೆಗೆ ಹಾಗೂ ಅಂಗೀಕಾರಕ್ಕೆ ತೆಗೆದುಕೊಳ್ಳಲಾಗುವುದು. ಈ ಅಧಿವೇಶನದಲ್ಲಿ ಒಟ್ಟು 9 ದಿನಗಳ ಕಾಲ ಪ್ರಶ್ನೋತ್ತರ ಕಲಾಪ ನಿಗದಿಪಡಿಸಲಾಗಿದೆ. ಜೊತೆಗೆ ಗಮನ ಸೆಳೆಯುವ ಸೂಚನೆ, ಶೂನ್ಯ ವೇಳೆ, ನಿಲುವಳಿ ಸೂಚನೆ, ನಿಯಮ 69ರ ಸೂಚನೆಗಳು, ಖಾಸಗಿ ಸದಸ್ಯರುಗಳ ಕಾರ್ಯಕ್ರಮಗಳು ಇರಲಿವೆ. 2023-24ನೇ‌ ಸಾಲಿನ ವಿಧಾನಮಂಡಲ, ವಿಧಾನಸಭೆಯ ಸ್ಥಾಯಿ ಸಮಿತಿಗಳ ಅವಧಿ ಆಗಸ್ಟ್ 8ರಂದು ಮುಕ್ತಾಯಗೊಳ್ಳಲಿದೆ. ಹೀಗಾಗಿ, 2024-25ನೇ ಸಾಲಿಗೆ ಹೊಸದಾಗಿ ಸಮಿತಿಗಳನ್ನು ರಚಿಸುವ ಸಂಬಂಧ ಚುನಾವಣಾ ಪ್ರಸ್ತಾವ ಮಂಡಿಸಿ ಕ್ರಮ ಕೈಗೊಳ್ಳಲಾಗುತ್ತಿದೆ. ಅಧಿವೇಶನದ ಸಮಯಕ್ಕೆ ಸರಿಯಾಗಿ ಹಾಜರಾಗುವ ಶಾಸಕರಿಗೆ ಟೀ ಕಪ್ ನೀಡಲಾಗುವುದು. ಕಳೆದ ಬಾರಿ ನೀಡಿದ ಅವಕಾಶ ಈ ಬಾರಿಯೂ ಇರಲಿದೆ. ಇಡೀ‌ ದಿನ ಹಾಜರಿರುವ ಸದಸ್ಯರುಗಳಿಗೆ ವಿಶೇಷ ಅವಕಾಶ ಕೊಡಲಾಗುತ್ತಿದೆ.
Last Updated : Jul 15, 2024, 1:26 PM IST

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.