thumbnail

ಕರ್ನಾಟಕ ವಿಧಾನಸಭೆ ಕಲಾಪದ ನೇರಪ್ರಸಾರ - Assembly Session Live

By ETV Bharat Karnataka Team

Published : Jul 25, 2024, 11:16 AM IST

Updated : Jul 25, 2024, 12:08 PM IST

ಬೆಂಗಳೂರು: ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ನಡೆಯುತ್ತಿದೆ. ಇಂದು ವಿಧಾನಸಭೆಯಲ್ಲಿ 8ನೇ ದಿನದ ಕಲಾಪ ನಡೆಯುತ್ತಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸುತ್ತಿದ್ದ ಪ್ರತಿಪಕ್ಷಗಳು ಬುಧವಾರ ಸದನದಲ್ಲಿ ಮುಡಾ ಹಗರಣ ಸಂಬಂಧ ಚರ್ಚೆಗೆ ಅವಕಾಶ ನೀಡುವಂತೆ ನಿಲುವಳಿ ಮಂಡಿಸಿದ್ದವು. ಸ್ಪೀಕರ್ ಈ ನಿಲುವಳಿಯನ್ನು ತಿರಸ್ಕರಿಸಿದರು. ಇದರಿಂದ ಬಿಜೆಪಿ ಸದಸ್ಯರು ಆಕ್ರೋಶಗೊಂಡು, ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದಾಗ ಸ್ಪೀಕರ್ ಕಲಾಪ ಮುಂದೂಡಿದರು. ಹೀಗಾಗಿ ಸರ್ಕಾರದ ವಿರುದ್ಧ ಸದನದಲ್ಲೇ ಪ್ರತಿಪಕ್ಷ ಸದಸ್ಯರು ಅಹೋರಾತ್ರಿ ಧರಣಿ ನಡೆಸಿದ್ದಾರೆ. ವಿಧಾನಸಭೆ, ವಿಧಾನ ಪರಿಷತ್​ನಲ್ಲಿ ಹಾಸಿಗೆ, ದಿಂಬುಗಳ ಸಮೇತವಾಗಿ ಪ್ರತಿಭಟಿಸಿ ಇಡೀ ರಾತ್ರಿ ಸೋಫಾ ಮತ್ತು ನೆಲದ ಮೇಲೆ ನಿದ್ರಿಸಿದರು.  ಧರಣಿಯಲ್ಲಿ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್​.ಅಶೋಕ್, ವಿಧಾನ ಪರಿಷತ್​ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್​ ಶಾಸಕರು ಪಾಲ್ಗೊಂಡಿದ್ದರು.  ಇಂದು ಕೂಡ ಸದನದಲ್ಲಿ ಪ್ರತಿಪಕ್ಷಗಳು ಮತ್ತು ಸರ್ಕಾರದ ಮಧ್ಯೆ ವಾಕ್ಸಮರ ಮುಂದುವರಿಯುವ ಸಾಧ್ಯತೆ ಇದೆ. ಮುಂಗಾರು ಅಧಿವೇಶನ ನಾಳೆ ಮುಗಿಯಲಿದ್ದು, ಇಂದಿನ ಕಲಾಪದಲ್ಲಿ ಏನಾಗಲಿದೆ ಎಂಬ ಕುತೂಹಲ ಮೂಡಿದೆ.
Last Updated : Jul 25, 2024, 12:08 PM IST

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.