thumbnail

By ETV Bharat Karnataka Team

Published : Apr 6, 2024, 6:13 PM IST

ETV Bharat / Videos

ಬಸ್ ಅಡ್ಡಗಟ್ಟಿ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ: ಯುವಕನ ವಿರುದ್ಧ ಪ್ರಕರಣ - crime news

ಕಾರವಾರ: ಕ್ಷುಲ್ಲಕ ಕಾರಣಕ್ಕಾಗಿ ಬಸ್ ಅಡ್ಡಗಟ್ಟಿ ಯುವಕನೊಬ್ಬನು ದಾಂಧಲೆ ನಡೆಸಿ‌ದ್ದಲ್ಲದೇ ಚಾಲಕ ನಿರ್ವಾಹಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಕಾರವಾರ ತಾಲೂಕಿನ ಶಿರವಾಡದ ಜಾಂಬಾ ಕ್ರಾಸ್ ಬಳಿ ನಡೆದಿದೆ.

ಶಿರವಾಡ ಮೂಲದ ಸುಭಾಷ್ ಬಾಡ್ಕರ್ ಎಂಬ ಯುವಕ ಬಸ್​ ಚಾಲಕ ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವ ಆರೋಪಿ. ಕುಡಿದ ಮತ್ತಿನಲ್ಲಿ ರಸ್ತೆಯಲ್ಲಿ ಅಡ್ಡಾದಿಡ್ಡಿ ಸ್ಕೂಟಿ ಚಲಾಯಿಸಿದ್ದಲ್ಲದೇ, ಈತ ಕಾರವಾರದಿಂದ ಕಡವಾಡ ಗ್ರಾಮಕ್ಕೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್​​ಗೆ ಹೋಗಲು ದಾರಿ ಬಿಡದೇ ಕಾಡಿಸಿದ್ದಾನೆ. ಈ ಯುವಕ ಬೇಕಂತಲೇ ಬಸ್ ಮುಂದೆ ಬೈಕ್ ಸ್ಲೋ ಆಗಿ ಓಡಿಸುತ್ತ, ಅಲ್ಲಲ್ಲಿ ಬೈಕ್ ನಿಲ್ಲಿಸುತ್ತ ಬಸ್ ಸಂಚಾರಕ್ಕೆ ಅಡತಡೆ ಮಾಡಿದ್ದಲ್ಲದೇ ಉದ್ಧಟತನ ಪ್ರದರ್ಶಿಸಿದ್ದಾನೆ.  

ಕೊನೆಗೆ ಬಸ್ ಮುಂದೆಯೇ ಸ್ಕೂಟಿ ನಿಲ್ಲಿಸಿ ಚಾಲಕ, ನಿರ್ವಾಹಕರೊಂದಿಗೆ ವಾಗ್ವಾದಕ್ಕೆ ಇಳಿದು ಹಲ್ಲೆ ಕೂಡ ನಡೆಸಿದ್ದಾನೆ. ಈ
ಘಟನೆಯಲ್ಲಿ ಚಾಲಕ ಮಹ್ಮದ್ ಇಸಾಕ್ ಹಲ್ಲೆಗೊಳಗಾಗಿದ್ದು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು, ಯುವಕ ನಡೆಸಿರುವ ದಾಂಧಲೆ ಮೊಬೈಲ್​ದಲ್ಲಿ ಸೆರೆ ಹಿಡಿಯಲಾಗಿದ್ದು, ಈ ಬಗ್ಗೆ ಕಾರವಾರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಗುಂಡು ಹಾರಿಸಿ ದರೋಡೆ: ಆರೋಪಿಗಳ ಬಂಧನ - House Robbery Case

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.