LIVE ಬೆಂಗಳೂರಿನ ಅರಮನೆ ಮೈದಾನದಲ್ಲಿ ಮೋದಿ ಸಮಾವೇಶ - Modi Campaign - MODI CAMPAIGN

🎬 Watch Now: Feature Video

thumbnail

By ETV Bharat Karnataka Team

Published : Apr 20, 2024, 5:22 PM IST

Updated : Apr 20, 2024, 5:51 PM IST

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ 'ವಿಕಸಿತ ಭಾರತಕ್ಕೆ ವಿಜಯ ಸಂಕಲ್ಪ' ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತಬೇಟೆಗೆ ಇಳಿದಿದ್ದಾರೆ. ಸಮಾವೇಶ ಉದ್ದೇಶಿಸಿ ಮೋದಿ ಮಾತನಾಡುತ್ತಿದ್ದಾರೆ. ವೇದಿಕೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ಅಭ್ಯರ್ಥಿ ಶೋಭಾ ಕರಂದ್ಲಾಜೆ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪಿಸಿ ಮೋಹನ್, ಶಾಸಕಿ ಮಂಜುಳಾ ಲಿಂಬಾವಳಿ, ಶಾಸಕರಾದ ಸುರೇಶ್ ಕುಮಾರ್, ಸಿ ರಘು, ಭೈರತಿ ಬಸವರಾಜ್, ಮುನಿರಾಜು, ಸಿಕೆ ರಾಮಮೂರ್ತಿ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪಿಸಿ ಮೋಹನ್,  ಬಿಜೆಪಿ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ತುಳಸಿ ಮುನಿರಾಜು, ಸಪ್ತಗಿರಿಗೌಡ, ಎಸ್ ಹರೀಶ್, ಮಾಜಿ ಸಿಎಂ ಡಿವಿ ಸದಾನಂದಗೌಡ, ಜೆಡಿಎಸ್ ನಾಯಕರಾದ ನಿಖಿಲ್ ಕುಮಾರಸ್ವಾಮಿ, ಶರವಣ ಸೇರಿ ಹಲವರು ಉಪಸ್ಥಿತರಿದ್ದಾರೆ. ಇನ್ನು, ಸಮಾವೇಶದಲ್ಲಿ ಬಿಎಸ್​ ಯಡಿಯೂರಪ್ಪ ಅವರ ಕಾಲಿಗೆ ಬಿದ್ದು ಅಭ್ಯರ್ಥಿಗಳಾದ ಶೋಭಾ ಕರಂದ್ಲಾಜೆ, ಪಿಸಿ ಮೋಹನ್ ಅವರು ಆಶೀರ್ವಾದ ಪಡೆದುಕೊಂಡರು. ಕಾರ್ಯಕ್ರಮದಲ್ಲಿ 60 ಸಾವಿರಕ್ಕೂ ಹೆಚ್ಚು ಆಸನಗಳ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಮಹಿಳೆಯರಿಗೆ ವಿಶೇಷವಾದ ಆಸನ ವ್ಯವಸ್ಥೆ ಮಾಡಲಾಗಿದೆ. 15 ಸಾವಿರ ವಿಶೇಷ ಆಹ್ವಾನಿತರಿಗೆ ಪಾಸ್ ವ್ಯವಸ್ಥೆ ಮಾಡಲಾಗಿದೆ. ಈ ಸಮಾವೇಶಕ್ಕೂ ಮುನ್ನ ಪ್ರಧಾನಿ ಪ್ರಧಾನಿ ಮೋದಿ ಅವರು ಚಿಕ್ಕಬಳ್ಳಾಪುರದಲ್ಲಿ ಸಮಾವೇಶ ಉದ್ದೇಶಿ ಮಾತನಾಡಿದರು. 
Last Updated : Apr 20, 2024, 5:51 PM IST

ABOUT THE AUTHOR

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.