ಮಾರಾಟಕ್ಕಿಟ್ಟಿದ್ದ ಗಣೇಶ ಮೂರ್ತಿಯನ್ನೂ ಬಿಡದೇ ಕದ್ದೊಯ್ದ ಕಳ್ಳರು - Ganesha Idol Theft

By ETV Bharat Karnataka Team

Published : Sep 13, 2024, 3:39 PM IST

thumbnail
ಮಾರಾಟಕ್ಕಿಟ್ಟಿದ್ದ ಗಣೇಶ ಮೂರ್ತಿಯನ್ನೂ ಬಿಡದೆ ಕದ್ದೊಯ್ದ ಕಳ್ಳರು (ETV Bharat)

ಬೆಂಗಳೂರು: ಗಣೇಶ ಹಬ್ಬದ ಸಂದರ್ಭದಲ್ಲಿ ಮಾರಾಟ ಮಾಡಲು ಇರಿಸಿದ್ದ ಗಣೇಶ ಮೂರ್ತಿಯನ್ನೂ ಬಿಡದೆ ಕಳ್ಳರು ಕದ್ದೊಯ್ದಿರುವ ಘಟನೆ ಬ್ಯಾಡರಹಳ್ಳಿ ಠಾಣೆ ವ್ಯಾಪ್ತಿಯ ಆಂಧ್ರಹಳ್ಳಿ ಮುಖ್ಯ ರಸ್ತೆಯಲ್ಲಿ ನಡೆದಿದೆ. ಸೆಪ್ಟೆಂಬರ್ 12 ರಂದು ಮಧ್ಯರಾತ್ರಿ 12.45 ರ ಸುಮಾರಿಗೆ ನಡೆದಿರುವ ಘಟನೆ ಪಕ್ಕದ ಅಂಗಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇದುವರೆಗೆ ಯಾವುದೇ ದೂರು ದಾಖಲಾಗಿಲ್ಲ: ಗಣಪತಿ ಉತ್ಸವಗಳಿಗಾಗಿ ಮಾರಾಟ ಮಾಡಲು ಸುಮಾರು 20-30 ವಿಗ್ರಹಗಳನ್ನು ಅವುಗಳ ಮಾರಾಟಗಾರರು ಆಂಧ್ರಹಳ್ಳಿ ಮುಖ್ಯ ರಸ್ತೆಯಲ್ಲಿ ಇರಿಸಿದ್ದರು. ರಾತ್ರೋರಾತ್ರಿ ಬೈಕ್‌ನಲ್ಲಿ ಬಂದಿದ್ದ ಇಬ್ಬರು ಖದೀಮರು, ಮಾರಾಟಕ್ಕೆಂದು ಟರ್ಪಾಲು ಮುಚ್ಚಿ ಇರಿಸಿದ್ದ ಗಣೇಶ ಮೂರ್ತಿಯನ್ನು ಕ್ಷಣಾರ್ಧದಲ್ಲಿ ಕದ್ದು ಒಯ್ದಿದ್ದಾರೆ. ಕಳ್ಳತನ ಆಗಿರುವ ಬಗ್ಗೆ ಇದುವರೆಗೂ ಯಾವುದೇ ದೂರು ದಾಖಲಾಗಿಲ್ಲ. ಘಟನೆ ಸಂಬಂಧ ಸಿಸಿಟಿವಿ ಕ್ಯಾಮರಾದ ದೃಶ್ಯಗಳನ್ನು ಆಧರಿಸಿ ಮಾಹಿತಿ ಪಡೆಯುತ್ತಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಭುವನೇಶ್ವರಿ ಜ್ಯುವೆಲರ್ಸ್ ಅಂಗಡಿ ಕಳ್ಳತನ ಪ್ರಕರಣ: ಐವರು ಅಂತರರಾಜ್ಯ ಕಳ್ಳರ ಬಂಧನ, 77 ಲಕ್ಷ ರೂ. ಮೌಲ್ಯದ ವಸ್ತುಗಳು ಜಪ್ತಿ - jewellery shop stolen

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.