thumbnail

By ETV Bharat Karnataka Team

Published : Jun 6, 2024, 4:43 PM IST

Updated : Jun 6, 2024, 5:21 PM IST

ETV Bharat / Videos

ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ: ಸಚಿವ ಬಿ.ನಾಗೇಂದ್ರ ಮಾಧ್ಯಮಗೋಷ್ಟಿ- LIVE - MINISTER NAGENDRA PRESS MEET

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಣ ಅಕ್ರಮ ವರ್ಗಾವಣೆಯಲ್ಲಿ ಭಾಗಿಯಾದ ಆರೋ‍ಪಕ್ಕೆ ಗುರಿಯಾಗಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ದಿಢೀರ್​ ಮಾಧ್ಯಮಗೋಷ್ಟಿ ನಡೆಸಿದ್ದಾರೆ. ನಿಗಮದ ಹಗರಣ ಪ್ರಕರಣ ಸಂಬಂಧ ಸಚಿವ ಸ್ಥಾನದಿಂದ ನಾಗೇಂದ್ರ ಅವರನ್ನು ವಜಾಗೊಳಿಸುವಂತೆ ಪ್ರತಿಪಕ್ಷಗಳು ಒತ್ತಾಯ ನಡೆಸುತ್ತಿದ್ದು, ಇದರ ನಡುವೆ ಬಿ.ನಾಗೇಂದ್ರ ಅವರ ಪ್ರೆಸ್​ಮೀಟ್​ ಕುತೂಹಲ ಮೂಡಿಸಿದೆ.ರಾಜ್ಯದಲ್ಲಿ ಹಗರಣ ಸ್ವರೂಪ ಪಡೆದುಕೊಂಡಿರುವ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಅವ್ಯವಹಾರ ಹಾಗೂ ನಿಗಮದ‌ ಲೆಕ್ಕಾಧಿಕಾರಿಯಾಗಿದ್ದ ಚಂದ್ರಶೇಖರನ್ ಆತ್ಮಹತ್ಯೆ ಸಂಬಂಧ ಸಮಗ್ರ ತನಿಖೆ‌‌ ನಡೆಸಲು ರಾಜ್ಯ ಸರ್ಕಾರ ಇತ್ತೀಚಿಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿ ಆದೇಶ ಹೊರಡಿಸಿತ್ತು. ಬಳಿಕ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎಂಟ್ರಿಯಾಗಿದ್ದು, ಹಲವರ ವಿರುದ್ಧ ಕೇಸ್​ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ನಿಗಮದಲ್ಲಿ ಅನುದಾನದ ಹಣ ಅಕ್ರಮ ವರ್ಗಾವಣೆ ಮತ್ತು ದುರುಪಯೋಗವಾಗಿದೆ ಎಂದು ಆರೋಪಿಸಿದ್ದ ಅದರ ಅಧೀಕ್ಷಕ ಚಂದ್ರಶೇಖರನ್‌ ಡೆತ್‌ನೋಟ್‌ ಬರೆದಿಟ್ಟು ಮೇ 26 ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಚಂದ್ರಶೇಖರನ್ ಅವರ ಪತ್ನಿಯ ದೂರಿನ ಅನ್ವಯ ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Jun 6, 2024, 5:21 PM IST

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.