ನವೀಲುತೀರ್ಥ ಡ್ಯಾಂನಿಂದ ನೀರು‌ ಬಿಡುಗಡೆ: ಒಂದೆಡೆ ಮೊಸಳೆ ಮತ್ತೊಂದೆಡೆ ಪ್ರವಾಹ ಆತಂಕ - Navilutheertha Reservoir

By ETV Bharat Karnataka Team

Published : Jul 28, 2024, 10:00 AM IST

thumbnail
ನವೀಲುತೀರ್ಥ ಜಲಾಶಯದಿಂದ ನೀರು‌ ಬಿಡುಗಡೆ (ETV Bharat)

ಬೆಳಗಾವಿ: ಖಾನಾಪುರ ಮತ್ತು ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ನವಿಲುತೀರ್ಥ ಜಲಾಶಯದಿಂದ ನೀರು ಹೊರಬಿಡಲಾಗಿದೆ. ಮಲಪ್ರಭಾ ನದಿಗೆ ಅಡ್ಡಲಾಗಿ ಮುನವಳ್ಳಿ ಸಮೀಪ ಕಟ್ಟಲಾಗಿರುವ ಈ ಜಲಾಶಯ 2,079.50 ಅಡಿ ಎತ್ತರವಿದ್ದು, ಈಗಾಗಲೇ 2,072 ಅಡಿ ನೀರು ಸಂಗ್ರಹವಿದೆ. ಜಲಾಶಯ ಭರ್ತಿಗೆ 7 ಅಡಿ ಬಾಕಿ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ನದಿಗೆ ನೀರು ಬಿಡಲಾಗಿದೆ.  

ಮಲಪ್ರಭಾ ನದಿಗೆ 20 ಸಾವಿರ ಕ್ಯೂಸೆಕ್ ಒಳಹರಿವು ಇದೆ. ಹಾಗಾಗಿ, 1,000ದಿಂದ 5,000 ಕ್ಯೂಸೆಕ್ ನೀರು ಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಮದುರ್ಗ, ಮುನವಳ್ಳಿ ಸೇರಿದಂತೆ ಮಲಪ್ರಭಾ ತೀರದ ಜನರು ಪ್ರವಾಹದ ಆತಂಕ ಎದುರಿಸುತ್ತಿದ್ದಾರೆ. 

ಮೊಸಳೆ ಪ್ರತ್ಯಕ್ಷ: ಉಕ್ಕಿ ಹರಿಯುತ್ತಿರುವ ನದಿ ತಟದಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ. ಬೈಲಹೊಂಗಲ ತಾಲೂಕಿನ ಮಾಟೋಳ್ಳಿ ಗ್ರಾಮದ ಬಳಿ ನದಿ ದಂಡೆಯ ಮೇಲೆ ಕಾಣಿಸಿಕೊಂಡಿದ್ದು, ಸ್ಥಳೀಯರು ಮೊಬೈಲ್​ಗಳಲ್ಲಿ ದೃಶ್ಯ ಸೆರೆಹಿಡಿದಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಮೊಸಳೆ ಪತ್ತೆ ಹಚ್ಚಿ ಸ್ಥಳಾಂತರಿಸುವಂತೆ ಜನರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ದೆಹಲಿ: IAS ಕೋಚಿಂಗ್‌ ಕೇಂದ್ರದ ನೆಲಮಾಳಿಗೆಗೆ ನುಗ್ಗಿದ ನೀರು; ಮೂವರು ವಿದ್ಯಾರ್ಥಿಗಳು ಸಾವು - Coaching Centre Flooded

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.