ETV Bharat / snippets

ಅಂತ್ಯಕ್ರಿಯೆ ವೇಳೆ ಹೆಜ್ಜೇನು ದಾಳಿ: 42 ಮಂದಿಗೆ ಗಾಯ

author img

By ETV Bharat Karnataka Team

Published : Jul 6, 2024, 4:10 PM IST

bee attack
ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿದ ಅಧಿಕಾರಿಗಳು (Etv Bharat)

ಚಾಮರಾಜನಗರ: ಅಂತ್ಯಕ್ರಿಯೆಗೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ 42 ಮಂದಿ ಗಾಯಗೊಂಡ ಘಟನೆ ಗುಂಡ್ಲುಪೇಟೆ ತಾಲೂಕಿನ ಬಸವಾಪುರ ಗ್ರಾಮದಲ್ಲಿ ನಡೆದಿದೆ.

ಬಸವಾಪುರ ಗ್ರಾಮದ ಮಹಾದೇವಯ್ಯ(65) ಎಂಬವರು ವಯೋಸಹಜ ಕಾರಣದಿಂದ ಶುಕ್ರವಾರ ಮೃತಪಟ್ಟಿದ್ದರು‌. ಇವರ ಅಂತ್ಯಕ್ರಿಯೆ ನಡೆಸುವಾಗ ಬೆಂಕಿ ಹಾಕಿದ್ದ ವೇಳೆಗೆ ಮರದಲ್ಲಿ ಗೂಡು ಕಟ್ಟಿದ್ದ ಹೆಜ್ಜೇನು ಸುಮಾರು 42 ಜನರ ಮೇಲೆ ದಾಳಿ ನಡೆಸಿದೆ. ಇದರಲ್ಲಿ 19 ಮಂದಿ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಉಳಿದವರು ಹಂಗಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ‌.

ಕಡಿತಕ್ಕೊಳಗಾದವರ ಮುಖ, ಕೈ ಊದಿಕೊಂಡಿದೆ. ಆಸ್ಪತ್ರೆಗೆ ಡಿಹೆಚ್ಒ ಡಾ.ಚಿದಂಬರ, ಟಿಹೆಚ್ಒ ಡಾ.ಅಲೀಂ ಪಾಷಾ ಹಾಗೂ ಇತರರು ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

ಚಾಮರಾಜನಗರ: ಅಂತ್ಯಕ್ರಿಯೆಗೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ 42 ಮಂದಿ ಗಾಯಗೊಂಡ ಘಟನೆ ಗುಂಡ್ಲುಪೇಟೆ ತಾಲೂಕಿನ ಬಸವಾಪುರ ಗ್ರಾಮದಲ್ಲಿ ನಡೆದಿದೆ.

ಬಸವಾಪುರ ಗ್ರಾಮದ ಮಹಾದೇವಯ್ಯ(65) ಎಂಬವರು ವಯೋಸಹಜ ಕಾರಣದಿಂದ ಶುಕ್ರವಾರ ಮೃತಪಟ್ಟಿದ್ದರು‌. ಇವರ ಅಂತ್ಯಕ್ರಿಯೆ ನಡೆಸುವಾಗ ಬೆಂಕಿ ಹಾಕಿದ್ದ ವೇಳೆಗೆ ಮರದಲ್ಲಿ ಗೂಡು ಕಟ್ಟಿದ್ದ ಹೆಜ್ಜೇನು ಸುಮಾರು 42 ಜನರ ಮೇಲೆ ದಾಳಿ ನಡೆಸಿದೆ. ಇದರಲ್ಲಿ 19 ಮಂದಿ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಉಳಿದವರು ಹಂಗಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ‌.

ಕಡಿತಕ್ಕೊಳಗಾದವರ ಮುಖ, ಕೈ ಊದಿಕೊಂಡಿದೆ. ಆಸ್ಪತ್ರೆಗೆ ಡಿಹೆಚ್ಒ ಡಾ.ಚಿದಂಬರ, ಟಿಹೆಚ್ಒ ಡಾ.ಅಲೀಂ ಪಾಷಾ ಹಾಗೂ ಇತರರು ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.