ಉಡುಪಿ: ವೃದ್ಧೆಯೊಬ್ಬರ ಬಲಭುಜದಿಂದ ಸುಮಾರು 8 ಕೆಜಿ ದುರ್ಮಾಂಸದ ಗಡ್ಡೆಯನ್ನು ಬೇರ್ಪಡಿಸುವಲ್ಲಿ ಉಡುಪಿ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಾ ತಜ್ಞರು ಯಶಸ್ವಿಯಾಗಿದ್ದಾರೆ. ಕಾರ್ಕಳದ ನಿವಾಸಿ 71 ವರ್ಷದ ಪುಷ್ಪಾ (71) ಎಂಬ ವೃದ್ಧೆ ಸುಮಾರು 32 ವರ್ಷಗಳಿಂದ ದುರ್ಮಾಂಸ ಗಡ್ಡೆಯಿಂದ ಬಳಲುತ್ತಿದ್ದರು. ಅವರ ಭುಜದ ಭಾಗದಲ್ಲಿ ಈ ಗಡ್ಡೆ ಇತ್ತು. ಅವರನ್ನು ಚಿಕಿತ್ಸೆಗಾಗಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.
32 ವರ್ಷದಿಂದ ದುರ್ಮಾಂಸ: ವೃದ್ಧೆಯ ಭುಜದಿಂದ 8 ಕೆಜಿ ಗಡ್ಡೆ ಹೊರತೆಗೆದ ಉಡುಪಿ ಜಿಲ್ಲಾಸ್ಪತ್ರೆ ವೈದ್ಯರು
![ETV Bharat Karnataka Team author img](https://etvbharatimages.akamaized.net/etvbharat/prod-images/authors/karnataka-1716535795.jpeg?imwidth=128)
Published : Jun 30, 2024, 5:31 PM IST
![32 ವರ್ಷದಿಂದ ದುರ್ಮಾಂಸ: ವೃದ್ಧೆಯ ಭುಜದಿಂದ 8 ಕೆಜಿ ಗಡ್ಡೆ ಹೊರತೆಗೆದ ಉಡುಪಿ ಜಿಲ್ಲಾಸ್ಪತ್ರೆ ವೈದ್ಯರು ವೃದ್ಧೆಯ ಬಲಭುಜದಲ್ಲಿ 8 ಕೆಜಿ ತೂಕದ ಗಡ್ಡೆ:](https://etvbharatimages.akamaized.net/etvbharat/prod-images/30-06-2024/1200-675-21833595-thumbnail-16x9-tumor.jpg?imwidth=3840)
ಉಡುಪಿ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸ ತಜ್ಞ ಡಾ. ಸುಜಿತ್ ಅವರು ತಮ್ಮ ತಂಡದೊಂದಿಗೆ ಸುಮಾರು 3 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿ ಈ ಗಡ್ಡೆಯನ್ನು ಹೊರತೆಗೆದಿದ್ದಾರೆ. ಆಸ್ಪತ್ರೆಯ ಜನರಲ್ ಸರ್ಜನ್ ಆಗಿರುವ ಡಾ. ಸುಜಿತ್ ಅವರ ನೇತೃತ್ವದಲ್ಲಿ ಅರವಳಿಕೆ ತಜ್ಞರಾದ ಡಾ. ಉಮೇಶ್ ಉಪಾಧ್ಯಾಯ ಹಾಗೂ ಡಾ. ವಿಶ್ವನಾಥ್ ಶೆಟ್ಟಿ ಹಾಗೂ ನುರಿತ ಶುಶ್ರೂಷಕ ಅಧಿಕಾರಿಗಳು ಸಹಕರಿಸಿದರು. ಸದ್ಯ ಮಹಿಳೆ ಆರೋಗ್ಯವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.
ಉಡುಪಿ: ವೃದ್ಧೆಯೊಬ್ಬರ ಬಲಭುಜದಿಂದ ಸುಮಾರು 8 ಕೆಜಿ ದುರ್ಮಾಂಸದ ಗಡ್ಡೆಯನ್ನು ಬೇರ್ಪಡಿಸುವಲ್ಲಿ ಉಡುಪಿ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಾ ತಜ್ಞರು ಯಶಸ್ವಿಯಾಗಿದ್ದಾರೆ. ಕಾರ್ಕಳದ ನಿವಾಸಿ 71 ವರ್ಷದ ಪುಷ್ಪಾ (71) ಎಂಬ ವೃದ್ಧೆ ಸುಮಾರು 32 ವರ್ಷಗಳಿಂದ ದುರ್ಮಾಂಸ ಗಡ್ಡೆಯಿಂದ ಬಳಲುತ್ತಿದ್ದರು. ಅವರ ಭುಜದ ಭಾಗದಲ್ಲಿ ಈ ಗಡ್ಡೆ ಇತ್ತು. ಅವರನ್ನು ಚಿಕಿತ್ಸೆಗಾಗಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.
ಉಡುಪಿ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸ ತಜ್ಞ ಡಾ. ಸುಜಿತ್ ಅವರು ತಮ್ಮ ತಂಡದೊಂದಿಗೆ ಸುಮಾರು 3 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿ ಈ ಗಡ್ಡೆಯನ್ನು ಹೊರತೆಗೆದಿದ್ದಾರೆ. ಆಸ್ಪತ್ರೆಯ ಜನರಲ್ ಸರ್ಜನ್ ಆಗಿರುವ ಡಾ. ಸುಜಿತ್ ಅವರ ನೇತೃತ್ವದಲ್ಲಿ ಅರವಳಿಕೆ ತಜ್ಞರಾದ ಡಾ. ಉಮೇಶ್ ಉಪಾಧ್ಯಾಯ ಹಾಗೂ ಡಾ. ವಿಶ್ವನಾಥ್ ಶೆಟ್ಟಿ ಹಾಗೂ ನುರಿತ ಶುಶ್ರೂಷಕ ಅಧಿಕಾರಿಗಳು ಸಹಕರಿಸಿದರು. ಸದ್ಯ ಮಹಿಳೆ ಆರೋಗ್ಯವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.