ETV Bharat / snippets

ಹುಬ್ಬಳ್ಳಿ: ಮೊಬೈಲ್‌ ಹೆಚ್ಚಿಗೆ ಬಳಸಬೇಡ ಎಂದಿದ್ದಕ್ಕೆ ಮನನೊಂದು ಬಾಲಕ ಆತ್ಮಹತ್ಯೆ

author img

By ETV Bharat Karnataka Team

Published : Sep 3, 2024, 1:54 PM IST

BOY COMMITS SUICIDE IN HUBLI
ಸಂಗ್ರಹ ಚಿತ್ರ (ETV Bharat)

ಹುಬ್ಬಳ್ಳಿ: ಹೆಚ್ಚು ಮೊಬೈಲ್‌ ಬಳಸಬೇಡ ಎಂದು ಪಾಲಕರು ಬುದ್ಧಿಮಾತು ಹೇಳಿದ್ದಕ್ಕೆ ಬೇಸತ್ತ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಇಲ್ಲಿನ ಬೈರಿದೇವರಕೊಪ್ಪದ ಗಾಮನಗಟ್ಟಿ ರಸ್ತೆಯಲ್ಲಿನ ರಾಧಿಕಾ ಪಾರ್ಕ್​ನಲ್ಲಿ ಈ ಘಟನೆ ನಡೆದಿದೆ.

ಈತನಿಗೆ ಪೋಷಕರು ಭಾನುವಾರ ರಾತ್ರಿ ಮೊಬೈಲ್ ಹೆಚ್ಚು ಬಳಸಬೇಡ, ಸರಿಯಾಗಿ ವಿದ್ಯಾಭ್ಯಾಸ ಮಾಡು ಎಂದು ಬುದ್ಧಿವಾದ ಹೇಳಿದ್ದರಂತೆ. ಪೋಷಕರ ಮಾತಿನಿಂದ ಮನನೊಂದ ಮಗ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಇನ್ನು, ಮಗನ ಸಾವಿನಿಂದಾಗಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಪಿಎಂಸಿ ನವನಗರದ ಪೊಲೀಸ್ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಹುಬ್ಬಳ್ಳಿ: ಹೆಚ್ಚು ಮೊಬೈಲ್‌ ಬಳಸಬೇಡ ಎಂದು ಪಾಲಕರು ಬುದ್ಧಿಮಾತು ಹೇಳಿದ್ದಕ್ಕೆ ಬೇಸತ್ತ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಇಲ್ಲಿನ ಬೈರಿದೇವರಕೊಪ್ಪದ ಗಾಮನಗಟ್ಟಿ ರಸ್ತೆಯಲ್ಲಿನ ರಾಧಿಕಾ ಪಾರ್ಕ್​ನಲ್ಲಿ ಈ ಘಟನೆ ನಡೆದಿದೆ.

ಈತನಿಗೆ ಪೋಷಕರು ಭಾನುವಾರ ರಾತ್ರಿ ಮೊಬೈಲ್ ಹೆಚ್ಚು ಬಳಸಬೇಡ, ಸರಿಯಾಗಿ ವಿದ್ಯಾಭ್ಯಾಸ ಮಾಡು ಎಂದು ಬುದ್ಧಿವಾದ ಹೇಳಿದ್ದರಂತೆ. ಪೋಷಕರ ಮಾತಿನಿಂದ ಮನನೊಂದ ಮಗ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಇನ್ನು, ಮಗನ ಸಾವಿನಿಂದಾಗಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಪಿಎಂಸಿ ನವನಗರದ ಪೊಲೀಸ್ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: ಆನ್​ಲೈನ್​​ ಟ್ರೇಡಿಂಗ್​ನಿಂದ ನಷ್ಟ; ವಾಟ್ಸ್‌ಆ್ಯಪ್‌ ಸ್ಟೇಟಸ್‌ ಹಾಕಿ ಯುವಕ ಆತ್ಮಹತ್ಯೆ - Young Man Suicide

ETV Bharat Logo

Copyright © 2024 Ushodaya Enterprises Pvt. Ltd., All Rights Reserved.