ETV Bharat / snippets

ಶಿವಮೊಗ್ಗ: ಗಣೇಶ ಮೆರವಣಿಗೆಯಲ್ಲಿ ಡಿಜೆ ಸದ್ದಿಗೆ ಹೆಜ್ಜೆ ಹಾಕುತ್ತಿದ್ದ ವೃದ್ಧ ಕುಸಿದುಬಿದ್ದು ಸಾವು

author img

By ETV Bharat Karnataka Team

Published : Sep 17, 2024, 12:14 PM IST

ಗಣೇಶ ಮೆರವಣಿಗೆಯಲ್ಲಿ ಡಿಜೆ ಸದ್ದಿಗೆ ಹೆಜ್ಜೆ ಹಾಕುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು
ಗಣೇಶ ಮೆರವಣಿಗೆಯಲ್ಲಿ ಡಿಜೆ ಸದ್ದಿಗೆ ಹೆಜ್ಜೆ ಹಾಕುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು (ETV Bharat)

ಶಿವಮೊಗ್ಗ: ಗಣಪತಿ ನಿಮಜ್ಜನ ಪೂರ್ವ ಮೆರವಣಿಗೆಯಲ್ಲಿ ಡಿಜೆಗೆ ಡ್ಯಾನ್ಸ್ ಮಾಡುತ್ತಿದ್ದ ವೃದ್ಧ ಸಾವನ್ನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೃತರನ್ನು ಬಿದರಹಳ್ಳಿ ಗ್ರಾಮದ ನಿವಾಸಿ ಇ. ಎಸ್. ಶ್ಯಾಮಣ್ಣ(66) ಎಂದು ಗುರುತಿಸಲಾಗಿದೆ. ಮೊನ್ನೆ ರಾತ್ರಿ ತೀರ್ಥಹಳ್ಳಿ ತಾಲೂಕು ಬೇಗುವಳ್ಳಿ ಗ್ರಾಮದಲ್ಲಿ ಗಣೇಶ ನಿಮಜ್ಜನ ಪೂರ್ವ ಮೆರವಣಿಗೆ ನಡೆಯುತ್ತಿತ್ತು. ಈ ವೇಳೆ ಬಳಸಿದ್ದ ಡಿಜೆ ಸೌಂಡ್​ಗೆ ಶ್ಯಾಮಣ್ಣ ಡ್ಯಾನ್ಸ್ ಮಾಡುತ್ತಿದ್ದರು. ಡ್ಯಾನ್ಸ್ ಮಾಡುತ್ತಲೇ ಅವರು ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.

ಶ್ಯಾಮಣ್ಣ ಅವರು ಡ್ಯಾನ್ಸ್ ಮಾಡುವಾಗ ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಡಿಜೆಗೆ ಜಿಲ್ಲಾಡಳಿತ ನಿಷೇಧ ಹೇರಿದೆ. ಈ ಕುರಿತು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

ಶಿವಮೊಗ್ಗ: ಗಣಪತಿ ನಿಮಜ್ಜನ ಪೂರ್ವ ಮೆರವಣಿಗೆಯಲ್ಲಿ ಡಿಜೆಗೆ ಡ್ಯಾನ್ಸ್ ಮಾಡುತ್ತಿದ್ದ ವೃದ್ಧ ಸಾವನ್ನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೃತರನ್ನು ಬಿದರಹಳ್ಳಿ ಗ್ರಾಮದ ನಿವಾಸಿ ಇ. ಎಸ್. ಶ್ಯಾಮಣ್ಣ(66) ಎಂದು ಗುರುತಿಸಲಾಗಿದೆ. ಮೊನ್ನೆ ರಾತ್ರಿ ತೀರ್ಥಹಳ್ಳಿ ತಾಲೂಕು ಬೇಗುವಳ್ಳಿ ಗ್ರಾಮದಲ್ಲಿ ಗಣೇಶ ನಿಮಜ್ಜನ ಪೂರ್ವ ಮೆರವಣಿಗೆ ನಡೆಯುತ್ತಿತ್ತು. ಈ ವೇಳೆ ಬಳಸಿದ್ದ ಡಿಜೆ ಸೌಂಡ್​ಗೆ ಶ್ಯಾಮಣ್ಣ ಡ್ಯಾನ್ಸ್ ಮಾಡುತ್ತಿದ್ದರು. ಡ್ಯಾನ್ಸ್ ಮಾಡುತ್ತಲೇ ಅವರು ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.

ಶ್ಯಾಮಣ್ಣ ಅವರು ಡ್ಯಾನ್ಸ್ ಮಾಡುವಾಗ ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಡಿಜೆಗೆ ಜಿಲ್ಲಾಡಳಿತ ನಿಷೇಧ ಹೇರಿದೆ. ಈ ಕುರಿತು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

ಇದನ್ನೂ ಓದಿ: ನಾಗಮಂಗಲದಲ್ಲಿ ಗಣಪತಿ ಮೆರವಣಿಗೆ ವೇಳೆ ಕಲ್ಲು ತೂರಾಟ; ಅಂಗಡಿ, ವಾಹನಗಳಿಗೆ ಬೆಂಕಿ, ಇಬ್ಬರು ಪೊಲೀಸರಿಗೆ ಗಾಯ - Stone Pelting In Nagamangala

ETV Bharat Logo

Copyright © 2024 Ushodaya Enterprises Pvt. Ltd., All Rights Reserved.