ಹಾಸನ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಕಾರು ಪಲ್ಟಿಯಾಗಿ ಅಯೋಧ್ಯೆ ಪ್ರವಾಸ ಮುಗಿಸಿ ಮನೆಗೆ ಮರಳುತ್ತಿದ್ದ ವೃದ್ಧೆ ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಹಾಸನ ತಾಲ್ಲೂಕಿನ ಸೀಗೆ ಗ್ರಾಮದ ಸೋಮವಾರ ನಡೆದಿದೆ.
ಹಳೆಬೀಡಿನ ಯೋಗೀಶ್ ಎಂಬವರ ಪತ್ನಿ ಇಂದಿರಮ್ಮ (67) ಮೃತರು. ಯೋಗೀಶ್ ಹಾಗೂ ಕಾರು ಚಾಲಕ ಕಿರಣ್ಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಯೋಧ್ಯೆಗೆ ತೆರಳಿ ಬೆಂಗಳೂರಿಗೆ ವಾಪಸಾಗಿದ್ದ ಇಂದಿರಮ್ಮ ಅವರನ್ನು ಬೆಂಗಳೂರು ಏರ್ಪೋರ್ಟ್ನಿಂದ ಯೋಗೀಶ್ ತಮ್ಮ ಕಾರಿನಲ್ಲಿ ಮನೆಗೆ ಕರೆದುಕೊಂಡು ಬರುತ್ತಿದ್ದರು. KA-13 P 8779 ನೋಂದಣಿ ಸಂಖ್ಯೆಯ ವೆನ್ಯೂ ಕಾರಿನಲ್ಲಿ ಹಳೆಬೀಡಿನಲ್ಲಿರುವ ಮನೆಗೆ ತೆರಳುವಾಗ ಸೀಗೆ ಗ್ರಾಮದ ಬಳಿ ಕಾರು ಪಲ್ಟಿಯಾಗಿ, ರಸ್ತೆ ಬದಿಯ ಚರಂಡಿಗೆ ಉರುಳಿದೆ. ಇದರಿಂದ ತೀವ್ರವಾಗಿ ಗಾಯಗೊಂಡ ಇಂದಿರಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಹಾಸನ: ಓವರ್ ಟೇಕ್ ವೇಳೆ ಭೀಕರ ಅಪಘಾತ, ಕಾರಿನಲ್ಲಿದ್ದ ಇಬ್ಬರು ದಾರುಣ ಸಾವು