ಯಾದಗಿರಿ: ಸೆಪ್ಟೆಂಬರ್ 20ರಿಂದ 22ರ ವರೆಗೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಆಂದೋಲಾ ಮಠದ ಪೀಠಾಧಿಪತಿ ಸಿದ್ದಲಿಂಗಯ್ಯ ಶ್ರೀಗಳಿಗೆ ಶಹಾಪುರ ತಾಲೂಕಿನಾದ್ಯಂತ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಯಾದಗಿರಿ ಜಿಲ್ಲಾಧಿಕಾರಿ ಡಾ. ಸುಶೀಲಾ ಬಿ. ಆದೇಶ ಹೊರಡಿಸಿದ್ದಾರೆ.
ಸೆ.21ರಂದು ಶಹಾಪುರ ಪಟ್ಟಣದಲ್ಲಿ ಶ್ರೀರಾಮ ಸೇನೆಯಿಂದ ಪ್ರತಿಷ್ಠಾಪಿಸಲಾಗಿರುವ ಗಣೇಶ ಮೂರ್ತಿಯ ನಿಮಜ್ಜನ ಕಾರ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ, ಸೆಪ್ಟೆಂಬರ್ 20ರಂದು ರಾತ್ರಿ 12 ಗಂಟೆಯಿಂದ 2024ರ ಸೆಪ್ಟೆಂಬರ್ 22ರ ಮಧ್ಯಾಹ್ನ 2 ಗಂಟೆಯವರೆಗೆ ಸ್ವಾಮೀಜಿಗೆ ಶಹಾಪುರ ತಾಲೂಕಿಗೆ ಪ್ರವೇಶಿಸದಂತೆ ನಿರ್ಬಂಧಿಸಲಾಗಿದೆ. ಈ ಬಗ್ಗೆ ಸಿಆರ್ಪಿಸಿ ಕಾಯ್ದೆ ಸೆಕ್ಷನ್ 133, 143, 144ಎ ಅನ್ವಯ ನಿರ್ಬಂಧ ಜಾರಿಗೊಳಿಸಿ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಮೈಸೂರು ದಸರಾ ಪೋಸ್ಟರ್ ಬಿಡುಗಡೆ: ನಾಡಹಬ್ಬದ ಯಶಸ್ಸಿಗೆ ಶ್ರಮಿಸಲು ಸಚಿವರ ಕರೆ - Dasara Poster Release