ETV Bharat / snippets

ಹುಬ್ಬಳ್ಳಿ: ಮಾರಕಾಸ್ತ್ರ ಇಟ್ಟುಕೊಂಡಿದ್ದ ಯುವಕನ ಬಂಧನ

author img

By ETV Bharat Karnataka Team

Published : Jul 6, 2024, 5:00 PM IST

ಮಾರಕಾಸ್ತ್ರ ಇಟ್ಟುಕೊಂಡಿದ್ದ ಯುವಕನ ಬಂಧನ
ಮಾರಕಾಸ್ತ್ರ ಇಟ್ಟುಕೊಂಡಿದ್ದ ಯುವಕನ ಬಂಧನ (ETV Bharat)

ಹುಬ್ಬಳ್ಳಿ: ಅಮರಗೋಳ ಎಪಿಎಂಸಿ ಯಾರ್ಡ್‌ನಲ್ಲಿ ಟಾಟಾ ಇಂಟ್ರಾ ಗೂಡ್ಸ್ ವಾಹನದಲ್ಲಿ ಮಾರಕಾಸ್ತ್ರ ಇಟ್ಟುಕೊಂಡು ಸಂಚರಿಸುತ್ತಿದ್ದ ಯುವಕನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ರಾಯಾಪುರದ ತಿಪ್ಪಣ್ಣ ಶಿಶನಳ್ಳಿ (25) ಬಂಧಿತ.

ಖಚಿತ ಮಾಹಿತಿ ಮೇರೆಗೆ ಎಪಿಎಂಸಿ ನವನಗರ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್​ ಕೆ. ಸಮಿವುಲ್ಲಾ ನೇತೃತ್ವದ ತಂಡ ದಾಳಿ ನಡೆಸಿ, ಪರಿಶೀಲನೆ ವೇಳೆ ವಾಹನದಲ್ಲಿ ತಲ್ವಾರ್ ಇರುವುದು ಕಂಡು ಬಂದಿದೆ. ಮಾರಕಾಸ್ತ್ರ ವಶಪಡಿಸಿಕೊಂಡಿರುವ ತಂಡವು, ಯುವಕನನ್ನು ಶಸ್ತ್ರಾಸ್ತ್ರ ಕಾಯ್ದೆ ಪ್ರಕಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ನವನಗರ ಪೊಲೀಸ್ ಠಾಣೆಯ ಸಿಬ್ಬಂದಿ ಕಾರ್ಯವೈಖರಿಯನ್ನು ಪೊಲೀಸ್​ ಆಯುಕ್ತರು ಶ್ಲಾಘಿಸಿದ್ದಾರೆ.

ಹುಬ್ಬಳ್ಳಿ: ಅಮರಗೋಳ ಎಪಿಎಂಸಿ ಯಾರ್ಡ್‌ನಲ್ಲಿ ಟಾಟಾ ಇಂಟ್ರಾ ಗೂಡ್ಸ್ ವಾಹನದಲ್ಲಿ ಮಾರಕಾಸ್ತ್ರ ಇಟ್ಟುಕೊಂಡು ಸಂಚರಿಸುತ್ತಿದ್ದ ಯುವಕನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ರಾಯಾಪುರದ ತಿಪ್ಪಣ್ಣ ಶಿಶನಳ್ಳಿ (25) ಬಂಧಿತ.

ಖಚಿತ ಮಾಹಿತಿ ಮೇರೆಗೆ ಎಪಿಎಂಸಿ ನವನಗರ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್​ ಕೆ. ಸಮಿವುಲ್ಲಾ ನೇತೃತ್ವದ ತಂಡ ದಾಳಿ ನಡೆಸಿ, ಪರಿಶೀಲನೆ ವೇಳೆ ವಾಹನದಲ್ಲಿ ತಲ್ವಾರ್ ಇರುವುದು ಕಂಡು ಬಂದಿದೆ. ಮಾರಕಾಸ್ತ್ರ ವಶಪಡಿಸಿಕೊಂಡಿರುವ ತಂಡವು, ಯುವಕನನ್ನು ಶಸ್ತ್ರಾಸ್ತ್ರ ಕಾಯ್ದೆ ಪ್ರಕಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ನವನಗರ ಪೊಲೀಸ್ ಠಾಣೆಯ ಸಿಬ್ಬಂದಿ ಕಾರ್ಯವೈಖರಿಯನ್ನು ಪೊಲೀಸ್​ ಆಯುಕ್ತರು ಶ್ಲಾಘಿಸಿದ್ದಾರೆ.

ಇದನ್ನೂ ಓದಿ: ನೀರಿನ ಮೋಟರ್ ಆನ್ ಮಾಡಲು ಹೋದಾಗ ವಿದ್ಯುತ್ ಸ್ಪರ್ಶಿಸಿ ಗೃಹಿಣಿ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.