ತುಮಕೂರು: ಕಳವು ಮಾಲು ಸ್ವೀಕರಿಸಿದ ಆರೋಪದ ಮೇರೆಗೆ ಅಟ್ಟಿಕಾ ಗೋಲ್ಡ್ ಕಂಪನಿಯ ನಿರ್ದೇಶಕ ಬಾಬು ಅಲಿಯಾಸ್ ಪಿ.ಎಸ್.ಅಯ್ಯೂಬ್ ಅವರನ್ನು ತುಮಕೂರು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬೆಂಗಳೂರಿನ ನಿವಾಸದ ಬಳಿಯೇ ಬಾಬು ಅವರನ್ನು ವಶಕ್ಕೆ ಪಡೆದಿರುವ ಬಗ್ಗೆ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಮಾಹಿತಿ ನೀಡಿದ್ದಾರೆ.
ಕಳವು ಮಾಲು ಸ್ವೀಕಾರ ಆರೋಪ: ಗೋಲ್ಡ್ ಕಂಪನಿಯ ಬಾಬು ಬಂಧನ
Published : Jun 27, 2024, 1:06 PM IST
|Updated : Jun 27, 2024, 1:52 PM IST
ಈ ಬಗ್ಗೆ ಪ್ರಕಟಣೆ ನೀಡಲಾಗಿದ್ದು, ಕಳವು ಮಾಲು ಸ್ವೀಕರಿಸಿರುವ ಬಗ್ಗೆ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ತುರುವೇಕೆರೆ ಪೊಲೀಸ್ ವೃತ್ತ ನಿರೀಕ್ಷಕ ಲೋಹಿತ್ ಬಿ.ಎನ್ ಮತ್ತು ಸಿಬ್ಬಂದಿ ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಬೆಂಗಳೂರಿನ ಪ್ರೆಜರ್ ಟೌನ್ನ ಮರಿಯಮ್ಮ ಅಪಾರ್ಟ್ಮೆಂಟ್ ಬಳಿ ಜೂನ್ 26ರಂದು ಸಂಜೆ 6 ಗಂಟೆಗೆ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಯತ್ನ: ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಮೂವರು ಸ್ಮಗ್ಲರ್ಸ್
ತುಮಕೂರು: ಕಳವು ಮಾಲು ಸ್ವೀಕರಿಸಿದ ಆರೋಪದ ಮೇರೆಗೆ ಅಟ್ಟಿಕಾ ಗೋಲ್ಡ್ ಕಂಪನಿಯ ನಿರ್ದೇಶಕ ಬಾಬು ಅಲಿಯಾಸ್ ಪಿ.ಎಸ್.ಅಯ್ಯೂಬ್ ಅವರನ್ನು ತುಮಕೂರು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬೆಂಗಳೂರಿನ ನಿವಾಸದ ಬಳಿಯೇ ಬಾಬು ಅವರನ್ನು ವಶಕ್ಕೆ ಪಡೆದಿರುವ ಬಗ್ಗೆ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಪ್ರಕಟಣೆ ನೀಡಲಾಗಿದ್ದು, ಕಳವು ಮಾಲು ಸ್ವೀಕರಿಸಿರುವ ಬಗ್ಗೆ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ತುರುವೇಕೆರೆ ಪೊಲೀಸ್ ವೃತ್ತ ನಿರೀಕ್ಷಕ ಲೋಹಿತ್ ಬಿ.ಎನ್ ಮತ್ತು ಸಿಬ್ಬಂದಿ ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಬೆಂಗಳೂರಿನ ಪ್ರೆಜರ್ ಟೌನ್ನ ಮರಿಯಮ್ಮ ಅಪಾರ್ಟ್ಮೆಂಟ್ ಬಳಿ ಜೂನ್ 26ರಂದು ಸಂಜೆ 6 ಗಂಟೆಗೆ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಯತ್ನ: ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಮೂವರು ಸ್ಮಗ್ಲರ್ಸ್