ಬೆಂಗಳೂರು: ಬಿಎಂಟಿಸಿ ಸಿಬ್ಬಂದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಾಂತಿನಗರದ ಕೇಂದ್ರ ಕಚೇರಿಯಲ್ಲಿ ನಡೆದಿದೆ. ಅಥಣಿ ಮೂಲದ ಮಹೇಶ್ (42) ಕಚೇರಿಯ 3ನೇ ಮಹಡಿಯಲ್ಲಿರುವ ರೆಕಾರ್ಡ್ಸ್ ರೂಮಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬಿಎಂಟಿಸಿಯ ಶಾಂತಿನಗರದ ಕಚೇರಿಯಲ್ಲಿ ಸಹಾಯಕರಾಗಿದ್ದ ಮಹೇಶ್, ಕೆಂಗೇರಿಯಲ್ಲಿ ಕುಟುಂಬದೊಂದಿಗೆ ವಾಸವಿದ್ದರು. ಸೋಮವಾರ ಬೆಳಗ್ಗೆ ಕಚೇರಿಯ ಭದ್ರತಾ ಸಿಬ್ಬಂದಿಯಿಂದ ರೆಕಾರ್ಡ್ ಸೆಕ್ಷನ್ ಕೀ ಪಡೆದಿದ್ದರು. ಸಂಜೆಯವರೆಗೂ ಅಲ್ಲಿಯೇ ಓಡಾಡಿಕೊಂಡಿದ್ದ ಮಹೇಶ್, ನಂತರ ಯಾರೂ ಇರದಿದ್ದಾಗ ವೈರ್ ಬಳಸಿ ಫ್ಯಾನಿಗೆ ನೇಣು ಹಾಕಿಕೊಂಡಿದ್ದಾರೆ ಎನ್ನಲಾಗಿದೆ. ಇಂದು ಭದ್ರತಾ ಸಿಬ್ಬಂದಿ ಪರಿಶೀಲಿಸಿದಾಗ ಮಹೇಶ್ ಆತ್ಮಹತ್ಯೆಗೆ ಶರಣಾಗಿರುವುದು ತಿಳಿದು ಬಂದಿದೆ. ಸ್ಥಳಕ್ಕೆ ವಿಲ್ಸನ್ ಗಾರ್ಡನ್ ಠಾಣಾ ಪೊಲೀಸರು ಭೇಟಿ ನೀಡಿದ್ದು, ಮೃತನ ಕುಟುಂಬಸ್ಥರಿಗೆ ಮಾಹಿತಿ ರವಾನಿಸಿದ್ದಾರೆ.
ಅತಿಯಾದ ಮದ್ಯಪಾನದ ಅಭ್ಯಾಸ ಹೊಂದಿದ್ದ ಮಹೇಶ್ ಇತ್ತೀಚೆಗೆ ಕುಡಿತವನ್ನು ಬಿಟ್ಟಿದ್ದರು ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಶಿರೂರು ಗುಡ್ಡ ಕುಸಿತ: ಮಣ್ಣಿನಡಿ ಸಿಲುಕಿ ಏಳು ಜನರ ದಾರುಣ ಸಾವು, ಮುಂದುವರಿದ ಕಾರ್ಯಾಚರಣೆ - hill collapsed