ETV Bharat / snippets

ಕೋಲಾರ: ಕಾಡಾನೆ ದಾಳಿಯಿಂದ ಗಾಯಗೊಂಡ ವೃದ್ಧೆ ಸಾವು

author img

By ETV Bharat Karnataka Team

Published : Aug 5, 2024, 4:04 PM IST

Died Radhabayi
ರಾಧಾಬಾಯಿ (ETV Bharat)

ಕೋಲಾರ: ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ವೃದ್ಧೆ ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದ್ದಾರೆ.

ಭಾನುವಾರ ಸಂಜೆ ಬಂಗಾರಪೇಟೆ ತಾಲ್ಲೂಕಿನ ಚತ್ತಗುಟ್ಟಹಳ್ಳಿ ಗ್ರಾಮದ ಬಳಿ ಒಂಟಿ ಸಲಗ ದಾಳಿ ನಡೆಸಿತ್ತು. ಕುರಿ ಮೇಯಿಸುತ್ತಿದ್ದ 80 ವರ್ಷದ ರಾಧಾಬಾಯಿ ಅವರ ಕೈ ಹಾಗೂ ತಲೆಗೆ ಗಂಭೀರ ಗಾಯಗಳಾಗಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ರಾಧಾಬಾಯಿ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲಿಸಿದ್ದರು.

ಡಿಎಫ್‌ಒ ಏಡುಕೊಂಡಲು ಭೇಟಿ ನೀಡಿ, ಮೃತ ವೃದ್ಧೆಯ ಕುಟುಂಬಕ್ಕೆ ಇಲಾಖೆಯಿಂದ ನೀಡಬಹುದಾದ ಪರಿಹಾರದ ಭರವಸೆ ನೀಡಿದ್ದಾರೆ. ಕಾಮಸಮುದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಚಾಮರಾಜನಗರ: ಕಾಡಾನೆ ಸಾವು, ಕಳೇಬರದ ಬಳಿ ಗುಂಪಿನ ಇತರ ಆನೆಗಳ ಮೂಕ ರೋಧನೆ - wild elephant died

ಕೋಲಾರ: ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ವೃದ್ಧೆ ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದ್ದಾರೆ.

ಭಾನುವಾರ ಸಂಜೆ ಬಂಗಾರಪೇಟೆ ತಾಲ್ಲೂಕಿನ ಚತ್ತಗುಟ್ಟಹಳ್ಳಿ ಗ್ರಾಮದ ಬಳಿ ಒಂಟಿ ಸಲಗ ದಾಳಿ ನಡೆಸಿತ್ತು. ಕುರಿ ಮೇಯಿಸುತ್ತಿದ್ದ 80 ವರ್ಷದ ರಾಧಾಬಾಯಿ ಅವರ ಕೈ ಹಾಗೂ ತಲೆಗೆ ಗಂಭೀರ ಗಾಯಗಳಾಗಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ರಾಧಾಬಾಯಿ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲಿಸಿದ್ದರು.

ಡಿಎಫ್‌ಒ ಏಡುಕೊಂಡಲು ಭೇಟಿ ನೀಡಿ, ಮೃತ ವೃದ್ಧೆಯ ಕುಟುಂಬಕ್ಕೆ ಇಲಾಖೆಯಿಂದ ನೀಡಬಹುದಾದ ಪರಿಹಾರದ ಭರವಸೆ ನೀಡಿದ್ದಾರೆ. ಕಾಮಸಮುದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಚಾಮರಾಜನಗರ: ಕಾಡಾನೆ ಸಾವು, ಕಳೇಬರದ ಬಳಿ ಗುಂಪಿನ ಇತರ ಆನೆಗಳ ಮೂಕ ರೋಧನೆ - wild elephant died

ETV Bharat Logo

Copyright © 2024 Ushodaya Enterprises Pvt. Ltd., All Rights Reserved.