ಗದಗ: ಮಹಾಮಾರಿ ಡೆಂಗ್ಯೂ ಜ್ವರದಿಂದ ತಾಲೂಕಿನ ಶಿರುಂಜ ಗ್ರಾಮದ ಐದು ವರ್ಷದ ಮಗು ಇಂದು ಸಾವನ್ನಪ್ಪಿದೆ. ಮೃತಪಟ್ಟಿರುವ ಮಗುವನ್ನು ಚಿರಾಯಿ ಮಂಜುನಾಥ ಹೊಸಮನಿ ಎಂದು ಗುರುತಿಸಲಾಗಿದೆ.
ತೀವ್ರ ಜ್ವರದಿಂದ ಬಳಲುತ್ತಿದ್ದ ಚಿರಾಯಿ ಹೊಸಮನಿಗೆ ಆರಂಭದಲ್ಲಿ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಧಾರವಾಡದ ಎಸ್ಡಿಎಂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಗು ಎಸ್ಡಿಎಂ ಆಸ್ಪತ್ರೆಯಲ್ಲಿ ಸಾವನ್ನಪ್ಪಿದೆ.
ಇದನ್ನೂ ಓದಿ: ಅಂತ್ಯಕ್ರಿಯೆ ವೇಳೆ ಹೆಜ್ಜೇನು ದಾಳಿ: 42 ಮಂದಿಗೆ ಗಾಯ