ಬೆಳಗಾವಿ: ಗೋವಾ-ಬೆಳಗಾವಿ-ಕಾರವಾರ ಗಡಿ ಭಾಗದ ದೂಧಸಾಗರ್ ಬಳಿ ಗೂಡ್ಸ್ ರೈಲು ಹಳಿ ತಪ್ಪಿರುವ ಘಟನೆ ಇಂದು ಬೆಳಗ್ಗೆ 9.30ರ ಸುಮಾರಿಗೆ ನಡೆದಿದೆ. ಕಲ್ಲಿದ್ದಲು ತುಂಬಿಕೊಂಡು ಹೊರಟಿದ್ದ ರೈಲು ದೂಧಸಾಗರ್-ಸೋನಾಲಿಂ ನಡುವಿನ ಸುರಂಗ ಸಂಖ್ಯೆ 15ರ ಬಳಿ ಹಳಿ ತಪ್ಪಿದೆ. ಒಂದು ಬೋಗಿ ಪಲ್ಟಿಯಾಗಿದೆ.
ವಾಸ್ಕೋದಿಂದ ಹೊಸಪೇಟೆಯ ಜಿಂದಾಲ್ ಕಂಪನಿಗೆ ಈ ರೈಲಿನಲ್ಲಿ ಕಲ್ಲಿದ್ದಲು ಸಾಗಿಸಲಾಗುತ್ತಿತ್ತು. ಈ ವೇಳೆ ಅವಘಡ ಸಂಭವಿಸಿದ್ದು, ರೈಲು ಸಂಚಾರ ಸ್ಥಗಿತಗೊಂಡಿದೆ. ಹಳಿ ರಿಪೇರಿ ಕಾರ್ಯ ಮುಂದುವರಿದಿದೆ.
ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಯಾರೋ ಕಿಡಿಗೇಡಿಗಳು ಹಳಿ ತುಂಡರಿಸಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಗಾಂಜಾ ದಂಧೆಕೋರರು ಸೆರೆ - Marijuana Sellers Arrest