ETV Bharat / snippets

ಹುಬ್ಬಳ್ಳಿ: ಜಮೀನಿನಲ್ಲಿ ಕೆಲಸದ ವಿಚಾರಕ್ಕೆ ತಂದೆ ಕೊಲೆಗೈದು ಪರಾರಿಯಾಗಿದ್ದ ಮಗ ಅರೆಸ್ಟ್

author img

By ETV Bharat Karnataka Team

Published : Jul 20, 2024, 11:49 AM IST

Updated : Jul 20, 2024, 12:04 PM IST

son arrest
ಮಗ ಅರೆಸ್ಟ್ (ETV Bharat)

ಹುಬ್ಬಳ್ಳಿ: ಜಮೀನಿನಲ್ಲಿ ಕೆಲಸ ಮಾಡು ವಿಚಾರವಾಗಿ ತಂದೆ ಮಗನ ನಡುವೆ ಆರಂಭವಾಗಿದ್ದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಗಿರಿಯಾಲ ಗ್ರಾಮದ ಹೊರವಲಯದ ಜಮೀನಿನಲ್ಲಿ ಕೆಲಸ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ತಂದೆ ಮಗನ ನಡುವೆ ಜಗಳವಾಗಿತ್ತು. ಜಗಳ ವಿಕೋಪಕ್ಕೆ ತಿರುಗಿದ್ದು, ಮಾರಕಾಸ್ತ್ರಗಳಿಂದ ಹೊಡೆದು ತಂದೆಯನ್ನು ಮಗ ಕೊಲೆ ಮಾಡಿದ್ದ.

ಉಮೇಶ ಸುಡೇಕನವರ (58) ಕೊಲೆಯಾದವರು. ಆರೋಪಿ ಹನಮಂತಪ್ಪ ಕೊಲೆ ಬಳಿಕ ಪರಾರಿಯಾಗಿದ್ದ. ವಿಷಯ ತಿಳಿಯುತ್ತಿದ್ದಂತೆ ಗ್ರಾಮೀಣ ಠಾಣೆಯ ಇನ್ಸ್‌ಪೆಕ್ಟರ್ ಮುರುಗೇಶ ಚೆನ್ನಣ್ಣವರ್ ಸ್ಥಳ‌ ಪರಿಶೀಲನೆ ಮಾಡಿ ಆರೋಪಿ ಪತ್ತೆಗೆ ಬಲೆ ಬೀಸಿದ್ದರು.‌ ಬಳಿಕ ಕೆಲವೇ ಗಂಟೆಗಳಲ್ಲಿ ಆರೋಪಿ ಹನುಮಂತಪ್ಪನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸದ್ಯ ಈಗ ಕೊಲೆ ಆರೋಪಿಯನ್ನು ಗ್ರಾಮೀಣ ಠಾಣೆಯ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

ಹುಬ್ಬಳ್ಳಿ: ಜಮೀನಿನಲ್ಲಿ ಕೆಲಸ ಮಾಡು ವಿಚಾರವಾಗಿ ತಂದೆ ಮಗನ ನಡುವೆ ಆರಂಭವಾಗಿದ್ದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಗಿರಿಯಾಲ ಗ್ರಾಮದ ಹೊರವಲಯದ ಜಮೀನಿನಲ್ಲಿ ಕೆಲಸ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ತಂದೆ ಮಗನ ನಡುವೆ ಜಗಳವಾಗಿತ್ತು. ಜಗಳ ವಿಕೋಪಕ್ಕೆ ತಿರುಗಿದ್ದು, ಮಾರಕಾಸ್ತ್ರಗಳಿಂದ ಹೊಡೆದು ತಂದೆಯನ್ನು ಮಗ ಕೊಲೆ ಮಾಡಿದ್ದ.

ಉಮೇಶ ಸುಡೇಕನವರ (58) ಕೊಲೆಯಾದವರು. ಆರೋಪಿ ಹನಮಂತಪ್ಪ ಕೊಲೆ ಬಳಿಕ ಪರಾರಿಯಾಗಿದ್ದ. ವಿಷಯ ತಿಳಿಯುತ್ತಿದ್ದಂತೆ ಗ್ರಾಮೀಣ ಠಾಣೆಯ ಇನ್ಸ್‌ಪೆಕ್ಟರ್ ಮುರುಗೇಶ ಚೆನ್ನಣ್ಣವರ್ ಸ್ಥಳ‌ ಪರಿಶೀಲನೆ ಮಾಡಿ ಆರೋಪಿ ಪತ್ತೆಗೆ ಬಲೆ ಬೀಸಿದ್ದರು.‌ ಬಳಿಕ ಕೆಲವೇ ಗಂಟೆಗಳಲ್ಲಿ ಆರೋಪಿ ಹನುಮಂತಪ್ಪನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸದ್ಯ ಈಗ ಕೊಲೆ ಆರೋಪಿಯನ್ನು ಗ್ರಾಮೀಣ ಠಾಣೆಯ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

ಇದನ್ನೂ ಓದಿ: ಮೀನು ಸಂಸ್ಕರಣಾ ಘಟಕದಲ್ಲಿ ಅಮೋನಿಯಾ ಅನಿಲ ಸೋರಿಕೆ: 30ಕ್ಕೂ ಹೆಚ್ಚು ಮಹಿಳೆಯರು ಅಸ್ವಸ್ಥ - Ammonia gas leakage

Last Updated : Jul 20, 2024, 12:04 PM IST

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.